<p><strong>ಸೂಲಿಬೆಲೆ:</strong> ‘ಹೊಸಕೋಟೆ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಿಗೆ ಇದೇ 22ರಂದು ಚುನಾವಣೆ ನಡೆಯಲಿದೆ. ಈಗಾಗಲೇ ಎಲ್ಲ ಮತಗಟ್ಟೆಗಳಿಗೆ ನೀರು, ಶೌಚಾಲಯ ಹಾಗೂ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾರ್ಯ ಪೂರ್ಣಗೊಂಡಿದೆ. ಮತದಾರರಿಗೆ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ’ ಎಂದು ಸದಾಚಾರ ಸಂಹಿತೆ ನೀತಿ ಸಮಿತಿಯ ಮುಖ್ಯಸ್ಥ ಸಿ.ಎಸ್. ಶ್ರೀನಾಥ್ ಗೌಡ ತಿಳಿಸಿದರು.</p>.<p>ಸೂಲಿಬೆಲೆ ಪಟ್ಟಣದಲ್ಲಿ ಬುಧವಾರ ಮತದಾನ ಜಾಗೃತಿ ಅಂಗವಾಗಿ ಬೈಕ್ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಕೋವಿಡ್-19 ಹಿನ್ನೆಲೆಯಲ್ಲಿ ಮತದಾರರು ಅನುಸರಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅರಿವು ಮೂಡಿಸಬೇಕಾಗಿದೆ. ಗ್ರಾಮ ಪಂಚಾಯಿತಿಯಿಂದ ಬಡ ಕುಟುಂಬದವರಿಗೆ ಮತದಾನದ ಹಿಂದಿನ ದಿನ ಉಚಿತವಾಗಿ ಮಾಸ್ಕ್ ವಿತರಿಸಬೇಕು. ಶೇಕಡ 100ರಷ್ಟು ಮತದಾನ ನಡೆಯುವಂತೆ ಮತದಾರರಿಗೆ ಜಾಗೃತಿ ಮೂಡಿಸಬೇಕು ಎಂದು ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಸೂಚಿಸಿದರು.</p>.<p>ಸೂಲಿಬೆಲೆ ಗ್ರಾಮ ಪಂಚಾಯಿತಿ ಪಿಡಿಒ ಚೈತ್ರಾ, ಮುನಿಗಂಗಯ್ಯ ಹಾಗೂ ಹೋಬಳಿಯ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಕಾರ್ಯದರ್ಶಿಗಳು ಹಾಗೂ ಸಿಬ್ಬಂದಿ<br />ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೂಲಿಬೆಲೆ:</strong> ‘ಹೊಸಕೋಟೆ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಿಗೆ ಇದೇ 22ರಂದು ಚುನಾವಣೆ ನಡೆಯಲಿದೆ. ಈಗಾಗಲೇ ಎಲ್ಲ ಮತಗಟ್ಟೆಗಳಿಗೆ ನೀರು, ಶೌಚಾಲಯ ಹಾಗೂ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾರ್ಯ ಪೂರ್ಣಗೊಂಡಿದೆ. ಮತದಾರರಿಗೆ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ’ ಎಂದು ಸದಾಚಾರ ಸಂಹಿತೆ ನೀತಿ ಸಮಿತಿಯ ಮುಖ್ಯಸ್ಥ ಸಿ.ಎಸ್. ಶ್ರೀನಾಥ್ ಗೌಡ ತಿಳಿಸಿದರು.</p>.<p>ಸೂಲಿಬೆಲೆ ಪಟ್ಟಣದಲ್ಲಿ ಬುಧವಾರ ಮತದಾನ ಜಾಗೃತಿ ಅಂಗವಾಗಿ ಬೈಕ್ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಕೋವಿಡ್-19 ಹಿನ್ನೆಲೆಯಲ್ಲಿ ಮತದಾರರು ಅನುಸರಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅರಿವು ಮೂಡಿಸಬೇಕಾಗಿದೆ. ಗ್ರಾಮ ಪಂಚಾಯಿತಿಯಿಂದ ಬಡ ಕುಟುಂಬದವರಿಗೆ ಮತದಾನದ ಹಿಂದಿನ ದಿನ ಉಚಿತವಾಗಿ ಮಾಸ್ಕ್ ವಿತರಿಸಬೇಕು. ಶೇಕಡ 100ರಷ್ಟು ಮತದಾನ ನಡೆಯುವಂತೆ ಮತದಾರರಿಗೆ ಜಾಗೃತಿ ಮೂಡಿಸಬೇಕು ಎಂದು ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಸೂಚಿಸಿದರು.</p>.<p>ಸೂಲಿಬೆಲೆ ಗ್ರಾಮ ಪಂಚಾಯಿತಿ ಪಿಡಿಒ ಚೈತ್ರಾ, ಮುನಿಗಂಗಯ್ಯ ಹಾಗೂ ಹೋಬಳಿಯ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಕಾರ್ಯದರ್ಶಿಗಳು ಹಾಗೂ ಸಿಬ್ಬಂದಿ<br />ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>