ಸ್ಕೌಟ್ಸ್ ಮತ್ತು ಗೈಡ್ಸ್ ತಂಡದ ಸಂಚಾಲಕ ಬಿ.ಕೆ.ಶಿವಪ್ಪ ಮಾತನಾಡಿ, ‘ನಾವು ನೀಡುವ ಒಂದೊಂದು ಮತ ಈ ದೇಶದ ಸಾರ್ವಭೌಮತೆ ಎತ್ತಿಹಿಡಿಯಲು ಸಹಾಯಕವಾಗುತ್ತದೆ. ಜನರು ಕಡ್ಡಾಯವಾಗಿ ಮತದಾನ ಮಾಡುವುದರ ಜತೆಗೆ ಇತರರಿಂದಲೂ ಮತದಾನ ಮಾಡಿಸುವ ಕೆಲಸ ಮಾಡಬೇಕಾಗಿದೆ. ಯಾವುದೇ ಆಸೆ ಆಮಿಷಗಳಿಗೆ ಒಳಗಾಗದಂತೆ ನೋಡಿಕೊಳ್ಳಬೇಕು’ ಎಂದರು.