ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಚಾಯಿತಿಗಳಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆ

Last Updated 1 ಡಿಸೆಂಬರ್ 2018, 14:19 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಮಾದರಿ ಘನ ಮತ್ತು ದ್ರವ ತ್ಯಾಜ್ಯ ವಿಲೇವಾರಿ ಘಟಕಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಹಸಿ ಮತ್ತು ಒಣ ಕಸವನ್ನು ಮೂಲದಲ್ಲಿಯೇ ವಿಂಗಡಿಸಿ, ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಕುರಿತು ಗ್ರಾಮೀಣ ಜನರಲ್ಲಿ ಅರಿವು ಮೂಡಿಸಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಕಾರಿ ಆರ್.ಲತಾ ಅಧಿಕಾರಿಗಳಿಗೆ ಸೂಚಿಸಿದರು.

ತಾಲೂಕಿನ ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಯ ಕೋಳಿಪುರ ಗ್ರಾಮದಲ್ಲಿ ಪ್ರಗತಿಯಲ್ಲಿರುವ ಘನ ಮತ್ತು ದ್ರವ ತ್ಯಾಜ್ಯ ವಿಲೇವಾರಿ ಘಟಕವನ್ನು ಪರಿಶೀಲಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಬೆಳೆಯುತ್ತಿರುವ ಜನಸಂಖ್ಯೆ ಹಾಗೂ ನಗರೀಕರಣದಿಂದ ಉತ್ಪತ್ತಿಯಾಗುತ್ತಿರುವ ಕಸದ ವಿಲೇವಾರಿ ಒಂದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಉತ್ಪತ್ತಿಯಾಗುತ್ತಿರುವ ಕಸದ ವೈಜ್ಞಾನಿಕ ವಿಲೇವಾರಿಗೆ ಸಂಬಂಸಿದಂತೆ ಸ್ವಚ್ಚ ಭಾರತ್ ಮಿಷನ್(ಗ್ರಾ) ಯೋಜನೆಯಡಿ, ಮಾದರಿ ಘನ ಮತ್ತು ದ್ರವ ತ್ಯಾಜ್ಯ ವಿಲೇವಾರಿ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ ಎಂದರು.

ಯೋಜನೆಗೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದ್ದು, ಅಕಾರಿಗಳು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ರಘುನಾಥಪುರ ಗ್ರಾಮಕ್ಕೆ ಭೇಟಿ ನೀಡಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಂಡಿರುವ ದನದ ಕೊಟ್ಟಿಗೆ ನಿರ್ಮಾಣ ಕಾಮಗಾರಿಗಳನ್ನು ಅವರು ಪರಿಶೀಲಿಸಿದರು. ಬಳಿಕ ಮಾತನಾಡಿ, ದನದ ಕೊಟ್ಟಿಗೆ ನಿರ್ಮಾಣದಿಂದ ರಾಸುಗಳ ಆರೋಗ್ಯ ವೃದ್ಧಿಯಾಗಿ, ಗುಣಮಟ್ಟದ ಹಾಲು ಉತ್ಪಾದನೆಯಾಗಲು ಸಹಕಾರಿಯಾಗುತ್ತದೆ. ಗ್ರಾಮದ ಪರಿಸರ ಸ್ವಚ್ಚವಾಗುವುದರಿಂದ ಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿ ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಕಾರಿ ಟಿ.ಆರ್.ಶೋಭಾ, ಮುಖ್ಯ ಯೋಜನಾಕಾರಿ ವಿನುತಾರಾಣಿ, ಯೋಜನಾ ನಿರ್ದೇಶಕ ಡಾ.ಶಿವರುದ್ರಪ್ಪ, ತಾಲೂಕು ಕಾರ್ಯನಿರ್ವಾಹಕ ಅಕಾರಿ ದ್ಯಾಮಪ್ಪ, ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕುಮಾರ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT