ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಸುತ್ತಲಿನ ಚಿಕ್ಕತುಮಕೂರು, ವೀರಾಪುರ, ದೊಡ್ಡತುಮಕೂರು ಕೆರೆಗಳಿಗೆ ಕಾಖಾನೆಗಳ ತ್ಯಾಜ್ಯ ನೀರು ಹರಿದು ಕೆರೆಯಲ್ಲಿನ ನೀರಷ್ಟೇ ಅಲ್ಲದೆ ಅಂತರ್ಜಲವೂ ಸಂಪೂರ್ಣವಾಗಿ ಕಲುಷಿತಗೊಂಡಿದೆ. ಇಲ್ಲಿನ ಜನರು ಎಚ್ಚೆತ್ತುಕೊಂಡು ತ್ಯಾಜ್ಯ ನೀರನ್ನು ಕೆರೆಗೆ ಹರಿಸುವುದರ ವಿರುದ್ಧ ಹೋರಾಟ ತೀವ್ರಗೊಳಿಸಿದ ನಂತರ ಈಗ ಕಾರ್ಖಾನೆಗಳವರು ರಾತ್ರಿ ವೇಳೆ ಟ್ಯಾಂಕರ್ಗಳ ಮೂಲಕ ಅರಳುಮಲ್ಲಿಗೆ ಕೆರೆಗೆ ತಂದು ಸುರಿಯುತ್ತಿದ್ದಾರೆ.