<p><strong>ಹೊಸಕೋಟೆ</strong>: ಸ್ವಾರ್ಥ, ಸ್ವಹಿತಾಸಕ್ತಿಗಾಗಿ ಸಂಘಟನೆ ಕಟ್ಟಿಕೊಂಡು ಹೋರಾಟ ಮಾಡುವುದು ಯಾವುದೇ ಸಮುದಾಯ ಹಾಗೂ ಸಮಾಜಕ್ಕೆ ಒಳ್ಳೆಯದಲ್ಲ. ನಮ್ಮ ಹೋರಾಟದ ಸ್ವರೂಪವನ್ನು ಸಾರ್ವತ್ರಿಕ ಲಾಭದ ದೃಷ್ಟಿಕೋನಕ್ಕೆ ಬದಲಾಯಿಸಬೇಕಿದೆ ಎಂದು ಹೈದಾರ್ಬಾದ್ನ ಇಂಗ್ಲಿಷ್ ಮತ್ತು ವಿದೇಶಿ ಭಾಷೆಗಳ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ವಿಕಾಸ್ ಪೋರಿಕಾ ಹೇಳಿದರು.</p>.<p>ನಗರದ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸದಲ್ಲಿ ಅವರು ಮಾತನಾಡಿದರು.</p>.<p>‘ಇಂದಿಗೂ ನಮ್ಮ ಸಮುದಾಯದಲ್ಲಿ ಇಂದಿಗೂ ಒಪ್ಪೊತ್ತಿನ ಊಟಕ್ಕಾಗಿಯೇ ಪರದಾಡುವ ಪರಿಸ್ಥಿತಿ ಇದೆ. ಆದ್ದರಿಂದ ನಮ್ಮೆಲ್ಲಾ ಸಮಸ್ಯೆಗಳಿಂದ ಮುಕ್ತಿ ಕೊಡುವ ಏಕೈಕ ಅಸ್ತ್ರವೆಂದರೆ ಅದು ಶಿಕ್ಷಣ ಮಾತ್ರ’ ಎಂದರು.</p>.<p>ಅದೆಷ್ಟೋ ನಾಯಕರ ಸ್ವಾರ್ಥ ರಹಿತ ಹೋರಾಟ ಮತ್ತು ತ್ಯಾಗದಿಂದ ಸವಲತ್ತು ಪಡೆಯುತ್ತಿದ್ದೇವೆ. ಆದರೆ, ಈ ಸವಲತ್ತು ಪಡೆದು ಮುನ್ನೆಲೆಗೆ ಬರಬೇಕೆಂಬ ಹಿರಿಯರ ಆಶಯ ಈಡೇರಿಸಲು ವಿಫಲರಾಗಿದ್ದೇವೆ. ತುಳಿತಕ್ಕೆ ಒಳಪಟ್ಟವರ ಪರವಾಗಿರುವ ಸಂವಿಧಾನ ಸದುಪಯೋಗ ಪಡಿಸಿಕೊಳ್ಳುವಲ್ಲಿ ಎಡವಿದ್ದೇವೆ ಎಂದು ವಿಷಾದ ವ್ಯಕ್ತಪಡಿಸಿದರು.</p>.<p>‘ಡಾ.ಅಂಬೇಡ್ಕರ್ ಅವರ ಸಂವಿಧಾನ ನಮ್ಮನ್ನು ರಕ್ಷಣೆ ಮಾಡುತ್ತಿರುವ ಕಾರಣ ನಾವು ಇಂದು ಇಷ್ಟರ ಮಟ್ಟಿಗೆ ಇದ್ದೇವೆ. ಇಲ್ಲದಿದ್ದರೆ ನಮ್ಮ ಸ್ಥಿತಿ ಊಹಿಸಿಕೊಳ್ಳಲು ಸಹ ಅಸಾಧ್ಯ’ ಎಂದರು.</p>.<p>ಲೇಖಕ, ಚಿಂತಕ ಕೋಟಿಗಾನಹಳ್ಳಿ ರಾಮಯ್ಯ ಮಾತನಾಡಿದರು. ಹಾಸ್ಟೆಲ್ ವಾರ್ಡನ್ ಪುಟ್ಟಸ್ವಾಮಿ, ರವೀಂದ್ರ, ರವಿ ಭುವನಹಳ್ಳಿ ಸೇರಿದಂತೆ ಹಲವು ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ</strong>: ಸ್ವಾರ್ಥ, ಸ್ವಹಿತಾಸಕ್ತಿಗಾಗಿ ಸಂಘಟನೆ ಕಟ್ಟಿಕೊಂಡು ಹೋರಾಟ ಮಾಡುವುದು ಯಾವುದೇ ಸಮುದಾಯ ಹಾಗೂ ಸಮಾಜಕ್ಕೆ ಒಳ್ಳೆಯದಲ್ಲ. ನಮ್ಮ ಹೋರಾಟದ ಸ್ವರೂಪವನ್ನು ಸಾರ್ವತ್ರಿಕ ಲಾಭದ ದೃಷ್ಟಿಕೋನಕ್ಕೆ ಬದಲಾಯಿಸಬೇಕಿದೆ ಎಂದು ಹೈದಾರ್ಬಾದ್ನ ಇಂಗ್ಲಿಷ್ ಮತ್ತು ವಿದೇಶಿ ಭಾಷೆಗಳ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ವಿಕಾಸ್ ಪೋರಿಕಾ ಹೇಳಿದರು.</p>.<p>ನಗರದ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸದಲ್ಲಿ ಅವರು ಮಾತನಾಡಿದರು.</p>.<p>‘ಇಂದಿಗೂ ನಮ್ಮ ಸಮುದಾಯದಲ್ಲಿ ಇಂದಿಗೂ ಒಪ್ಪೊತ್ತಿನ ಊಟಕ್ಕಾಗಿಯೇ ಪರದಾಡುವ ಪರಿಸ್ಥಿತಿ ಇದೆ. ಆದ್ದರಿಂದ ನಮ್ಮೆಲ್ಲಾ ಸಮಸ್ಯೆಗಳಿಂದ ಮುಕ್ತಿ ಕೊಡುವ ಏಕೈಕ ಅಸ್ತ್ರವೆಂದರೆ ಅದು ಶಿಕ್ಷಣ ಮಾತ್ರ’ ಎಂದರು.</p>.<p>ಅದೆಷ್ಟೋ ನಾಯಕರ ಸ್ವಾರ್ಥ ರಹಿತ ಹೋರಾಟ ಮತ್ತು ತ್ಯಾಗದಿಂದ ಸವಲತ್ತು ಪಡೆಯುತ್ತಿದ್ದೇವೆ. ಆದರೆ, ಈ ಸವಲತ್ತು ಪಡೆದು ಮುನ್ನೆಲೆಗೆ ಬರಬೇಕೆಂಬ ಹಿರಿಯರ ಆಶಯ ಈಡೇರಿಸಲು ವಿಫಲರಾಗಿದ್ದೇವೆ. ತುಳಿತಕ್ಕೆ ಒಳಪಟ್ಟವರ ಪರವಾಗಿರುವ ಸಂವಿಧಾನ ಸದುಪಯೋಗ ಪಡಿಸಿಕೊಳ್ಳುವಲ್ಲಿ ಎಡವಿದ್ದೇವೆ ಎಂದು ವಿಷಾದ ವ್ಯಕ್ತಪಡಿಸಿದರು.</p>.<p>‘ಡಾ.ಅಂಬೇಡ್ಕರ್ ಅವರ ಸಂವಿಧಾನ ನಮ್ಮನ್ನು ರಕ್ಷಣೆ ಮಾಡುತ್ತಿರುವ ಕಾರಣ ನಾವು ಇಂದು ಇಷ್ಟರ ಮಟ್ಟಿಗೆ ಇದ್ದೇವೆ. ಇಲ್ಲದಿದ್ದರೆ ನಮ್ಮ ಸ್ಥಿತಿ ಊಹಿಸಿಕೊಳ್ಳಲು ಸಹ ಅಸಾಧ್ಯ’ ಎಂದರು.</p>.<p>ಲೇಖಕ, ಚಿಂತಕ ಕೋಟಿಗಾನಹಳ್ಳಿ ರಾಮಯ್ಯ ಮಾತನಾಡಿದರು. ಹಾಸ್ಟೆಲ್ ವಾರ್ಡನ್ ಪುಟ್ಟಸ್ವಾಮಿ, ರವೀಂದ್ರ, ರವಿ ಭುವನಹಳ್ಳಿ ಸೇರಿದಂತೆ ಹಲವು ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>