ಸೂಲಿಬೆಲೆ: ಹೋಬಳಿಯ ಅನೇಕ ಗ್ರಾಮಗಳ ಕಾಂಗ್ರೆಸ್ ಕಾರ್ಯಕರ್ತರು, ಹೊಸಕೋಟೆ ವಿಧಾನಸಭಾ ಉಪ ಚುನಾವಣೆಗೆ ಶನಿವಾರ ನಾಮಪತ್ರ ಸಲ್ಲಿಸಿದ ಪಕ್ಷದ ಅಭ್ಯರ್ಥಿ ಪದ್ಮಾವತಿ ಸುರೇಶ್ ಅವರನ್ನು ಬೆಂಬಲಿಸಲು ಹೊಸಕೋಟೆಗೆ ತೆರಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸೂಲಿಬೆಲೆ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರಾದ ಅರುಣ್ ಕುಮಾರ್, ರಮೇಶ್ ಮಾತನಾಡಿ, ‘ನಾವು ಮೊದಲಿನಿಂದಲೂ ಕಾಂಗ್ರೆಸ್ ಕಾರ್ಯಕರ್ತರಾಗಿದ್ದು ಪಕ್ಷದಿಂದ ಯಾರೇ ಸ್ಪರ್ಧಿಸಿದೂಅವರ ಪರವಾಗಿ ದುಡಿಯುತ್ತೇವೆ’ ಎಂದರು.
ಸೂಲಿಬೆಲೆ ಗ್ರಾಮ ಪಂಚಾಯಿತಿ ಸದಸ್ಯ ಅಮ್ಜದ್ ಸೇರಿದಂತೆ ಅನೇಕ ಸದಸ್ಯರು ಕಾರ್ಯಕರ್ತರು ಇದ್ದರು.