ಆದರೆ ನೂರಾರು ಸಂಖ್ಯೆಯಲ್ಲಿ ಸೇರಿದ್ದ ನೇಕಾರರು ಮುಖಂಡರು ನಮ್ಮೊಂದಿಗೆ ಇರಬೇಕು, ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬಂದು ಸೂಕ್ತ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.ನೇಕಾರರನ್ನು ಜಿಲ್ಲಾಧಿಕಾರಿಗಳ ಕಚೇರಿ ಬಳಿಗೆ ಹೋಗದಂತೆ ರಘುನಾಥಪುರ ಸಮೀಪದಲ್ಲೇ ತಡೆಯಲಾಗಿದೆ. ಜಿಲ್ಲಾಧಿಕಾರಿಗಳು ಬರುವವರಿಗೂ ಇಲ್ಲಿಂದ ತೆರಳುವುದಿಲ್ಲ ಎಂದು ನೇಕಾರರು ಪಟ್ಟು ಹಿಡಿದಿದ್ದಾರೆ. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೂಬಸ್ತ್ ಏರ್ಪಡಿಸಲಾಗಿದೆ.