ಆನೇಕಲ್: ಕೊರೊನಾ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಆದೇಶದಂತೆ ಬನ್ನೇರುಘಟ್ಟ ಜೈವಿಕ ಉದ್ಯಾನವು ಮೇ 2ರವರೆಗೆ ಶನಿವಾರ ಮತ್ತು ಭಾನುವಾರ ಮುಚ್ಚಿರುತ್ತದೆ ಎಂದು ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕಿ ವನಶ್ರೀ ವಿಪಿನ್ ಸಿಂಗ್ ತಿಳಿಸಿದ್ದಾರೆ.
ಏಪ್ರಿಲ್ 24 ಮತ್ತು 25, ಮೇ 1 ಮತ್ತು 2ರಂದು ಉದ್ಯಾನದ ಮೃಗಾಲಯ, ಸಫಾರಿ, ಚಿಟ್ಟೆ ಉದ್ಯಾನ ಸೇರಿದಂತೆ ಎಲ್ಲಾ ವಿಭಾಗಗಳನ್ನು ಮುಚ್ಚಲಾಗುವುದು. ಸಾರ್ವಜನಿಕ ವೀಕ್ಷಣೆಗೆ ಅವಕಾಶವಿರುವುದಿಲ್ಲ.
ಬನ್ನೇರುಘಟ್ಟ ಜೈವಿಕ ಉದ್ಯಾನದ ವಾರದ ರಜೆಯಾದ ಮಂಗಳವಾರ ಕಾರ್ಯನಿರ್ವಹಿಸಲು ತೀರ್ಮಾನಿಸಲಾಗಿದೆ. ಅದರಂತೆ ಏ.27 ಮತ್ತು ಮೇ 4ರ ಮಂಗಳವಾರ ಉದ್ಯಾನ ತೆರೆದಿದ್ದು ಸಾರ್ವಜನಿಕ ವೀಕ್ಷಣೆಗೆ ಲಭ್ಯವಿರುತ್ತದೆ ಎಂದು ತಿಳಿಸಿದ್ದಾರೆ.