ಪುರಸಭಾ ಮುಖ್ಯಾಧಿಕಾರಿ ಪ್ರದೀಪ್ ಕುಮಾರ್ ಮಾತನಾಡಿ, ‘ತಹಶೀಲ್ದಾರ್ ಆದೇಶದ ಮೇರೆಗೆ ಸಂತೆ ರದ್ದುಗೊಳಿಸಲಾಗಿತ್ತು. ಆ ನಂತರದ ದಿನಗಳಲ್ಲಿ ರೈತರು ಹಳೆಯ ಪುರಸಭೆ ಮುಂಭಾಗದ ರಸ್ತೆಯ ಎರಡೂ ಬದಿಗಳಲ್ಲಿ ಅಂಗಡಿಗಳನ್ನು ಇಟ್ಟುಕೊಂಡು ವ್ಯಾಪಾರ ವಹಿವಾಟು ನಡೆಸುತ್ತಿದ್ದರು. ಇದರಿಂದ ಸಾರ್ವಜನಿಕರು ಹಾಗೂ ವಾಹನಗಳ ಓಡಾಟಗಳಿಗೆ ಸಾಕಷ್ಟು ತೊಂದರೆಯಾಗುತ್ತಿತ್ತು. ಇಂದು ಸಂತೆಯಲ್ಲಿ ಅಂಗಡಿಗಳನ್ನು ಇಟ್ಟುಕೊಳ್ಳಲು ಅವಕಾಶ ನೀಡಿದ್ದರೂ ಬಹುತೇಕ ವ್ಯಾಪಾರಸ್ಥರು ರಸ್ತೆ ಬದಿಯಲ್ಲೆ ವ್ಯಾಪಾರ ವಹಿವಾಟುಗಳು ನಡೆಸಿಕೊಳ್ಳುತ್ತಿದ್ದರಿಂದಾಗಿ ಇಂದೂ ಕೂಡಾ ಜನರು ಪರದಾಡುವಂತಾಗಿತ್ತು’ ಎಂದರು.