<p><strong>ದೇವನಹಳ್ಳಿ</strong>: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರೆದಿದ್ದು, ಬುಧವಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಮತ್ತು ನಿರ್ಗಮಿಸಬೇಕಿದ್ದ 34 ಅಂತರ ರಾಷ್ಟ್ರೀಯ ವಿಮಾನ ಹಾರಾಟ ರದ್ದಾಗಿದೆ.</p>.<p>ಬುಧವಾರ ಬೆಳಗ್ಗೆ 11.59ರವರೆಗೆ ಇಲ್ಲಿಗೆ ಬರಬೇಕಿದ್ದ 18 ಹಾಗೂ 16 ನಿರ್ಗಮಿಸಬೇಕಿದ್ದ ವಿಮಾನಗಳ ಹಾರಾಟ ರದ್ದಾಗಿದೆ. ಇದರಿಂದ ಬೆಂಗಳೂರು, ಅಬುಧಾಬಿ, ರಿಯಾದ್, ಜೆಡ್ಡಾ, ದಮಾಮ್, ದುಬೈ ಹಾಗೂ ದೋಹಾ ನಗರಗಳ ಪ್ರಯಾಣಕ್ಕೆ ಅಡಚಣೆ ಉಂಟಾಗಿದೆ.</p>.<p>ಪ್ರಯಾಣಿಕರ ನೆರವಿಗಾಗಿ ಟರ್ಮಿನಲ್–2ರ ಹೊರಭಾಗದಲ್ಲಿ ಸಹಾಯ ಕೇಂದ್ರ ತೆರೆಯಲಾಗಿದೆ ಎಂದು ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ ತಿಳಿಸಿದೆ.</p>.<p>ಈ ಸಹಾಯ ಕೇಂದ್ರದಲ್ಲಿ ಪ್ರಯಾಣಿಕರ ಪ್ರಶ್ನೆಗಳಿಗೆ ಉತ್ತರ, ಸಂದೇಹ ಪರಿಹಾರ, ಸಾರಿಗೆ ವ್ಯವಸ್ಥೆ, ತುರ್ತು ಸೇವೆ ಸೇರಿದಂತೆ ವಿವಿಧ ನೆರವು ನೀಡಲಾಗುತ್ತಿದೆ. ವಿವಿಧ ವಿಮಾನ ಕಂಪನಿಗಳ ಪ್ರತಿನಿಧಿಗಳು ಆಗಮಿಸುವವರೆಗೆ ಪ್ರಯಾಣಿಕರಿಗೆ ಮಾರ್ಗದರ್ಶನ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಪ್ರಯಾಣಿಕರ ಸೌಕರ್ಯಕ್ಕಾಗಿ ಕುರ್ಚಿಗಳು, ಕುಡಿಯುವ ನೀರು, ತಿಂಡಿಗಳು, ವೈದ್ಯಕೀಯ ಸಹಾಯ, ಮೊಬೈಲ್ ಚಾರ್ಜಿಂಗ್ ವ್ಯವಸ್ಥೆ, ವ್ಹೀಲ್ಚೇರ್ ಹಾಗೂ ಮಕ್ಕಳಿಗೆ ತಾತ್ಕಾಲಿಕ ಆಹಾರ ವ್ಯವಸ್ಥೆಯಂತಹ ಸೌಲಭ್ಯಗಳನ್ನೂ ಕಲ್ಪಿಸಲಾಗಿದೆ.</p>.<p><strong>ಕೋಲ್ಕತ್ತ: 5 ವಿಮಾನಗಳ ಹಾರಾಟ ಸ್ಥಗಿತ</strong></p><p>ಕೋಲ್ಕತ್ತ ವಿಮಾನ ನಿಲ್ದಾಣದಿಂದ ಪಶ್ಚಿಮ ಏಷ್ಯಾಕ್ಕೆ ತೆರಳಬೇಕಿದ್ದ ಮತ್ತು ಅಲ್ಲಿಂದ ಬರಬೇಕಿದ್ದ ಐದು ವಿಮಾನಗಳ ಸಂಚಾರ ವನ್ನು ಬುಧವಾರ ರದ್ದುಗೊಳಿಸಲಾಗಿದೆ. ದೋಹಾ, ದುಬೈ ,ಅಬುಧಾಬಿಗೆ ಸೇರಿದಂತೆ ಪ್ರಮುಖ ನಗರಗಳಿಗೆ ವಿಮಾನ ಸಂಚಾರ ರದ್ದಾಗಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ</strong>: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರೆದಿದ್ದು, ಬುಧವಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಮತ್ತು ನಿರ್ಗಮಿಸಬೇಕಿದ್ದ 34 ಅಂತರ ರಾಷ್ಟ್ರೀಯ ವಿಮಾನ ಹಾರಾಟ ರದ್ದಾಗಿದೆ.</p>.<p>ಬುಧವಾರ ಬೆಳಗ್ಗೆ 11.59ರವರೆಗೆ ಇಲ್ಲಿಗೆ ಬರಬೇಕಿದ್ದ 18 ಹಾಗೂ 16 ನಿರ್ಗಮಿಸಬೇಕಿದ್ದ ವಿಮಾನಗಳ ಹಾರಾಟ ರದ್ದಾಗಿದೆ. ಇದರಿಂದ ಬೆಂಗಳೂರು, ಅಬುಧಾಬಿ, ರಿಯಾದ್, ಜೆಡ್ಡಾ, ದಮಾಮ್, ದುಬೈ ಹಾಗೂ ದೋಹಾ ನಗರಗಳ ಪ್ರಯಾಣಕ್ಕೆ ಅಡಚಣೆ ಉಂಟಾಗಿದೆ.</p>.<p>ಪ್ರಯಾಣಿಕರ ನೆರವಿಗಾಗಿ ಟರ್ಮಿನಲ್–2ರ ಹೊರಭಾಗದಲ್ಲಿ ಸಹಾಯ ಕೇಂದ್ರ ತೆರೆಯಲಾಗಿದೆ ಎಂದು ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ ತಿಳಿಸಿದೆ.</p>.<p>ಈ ಸಹಾಯ ಕೇಂದ್ರದಲ್ಲಿ ಪ್ರಯಾಣಿಕರ ಪ್ರಶ್ನೆಗಳಿಗೆ ಉತ್ತರ, ಸಂದೇಹ ಪರಿಹಾರ, ಸಾರಿಗೆ ವ್ಯವಸ್ಥೆ, ತುರ್ತು ಸೇವೆ ಸೇರಿದಂತೆ ವಿವಿಧ ನೆರವು ನೀಡಲಾಗುತ್ತಿದೆ. ವಿವಿಧ ವಿಮಾನ ಕಂಪನಿಗಳ ಪ್ರತಿನಿಧಿಗಳು ಆಗಮಿಸುವವರೆಗೆ ಪ್ರಯಾಣಿಕರಿಗೆ ಮಾರ್ಗದರ್ಶನ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಪ್ರಯಾಣಿಕರ ಸೌಕರ್ಯಕ್ಕಾಗಿ ಕುರ್ಚಿಗಳು, ಕುಡಿಯುವ ನೀರು, ತಿಂಡಿಗಳು, ವೈದ್ಯಕೀಯ ಸಹಾಯ, ಮೊಬೈಲ್ ಚಾರ್ಜಿಂಗ್ ವ್ಯವಸ್ಥೆ, ವ್ಹೀಲ್ಚೇರ್ ಹಾಗೂ ಮಕ್ಕಳಿಗೆ ತಾತ್ಕಾಲಿಕ ಆಹಾರ ವ್ಯವಸ್ಥೆಯಂತಹ ಸೌಲಭ್ಯಗಳನ್ನೂ ಕಲ್ಪಿಸಲಾಗಿದೆ.</p>.<p><strong>ಕೋಲ್ಕತ್ತ: 5 ವಿಮಾನಗಳ ಹಾರಾಟ ಸ್ಥಗಿತ</strong></p><p>ಕೋಲ್ಕತ್ತ ವಿಮಾನ ನಿಲ್ದಾಣದಿಂದ ಪಶ್ಚಿಮ ಏಷ್ಯಾಕ್ಕೆ ತೆರಳಬೇಕಿದ್ದ ಮತ್ತು ಅಲ್ಲಿಂದ ಬರಬೇಕಿದ್ದ ಐದು ವಿಮಾನಗಳ ಸಂಚಾರ ವನ್ನು ಬುಧವಾರ ರದ್ದುಗೊಳಿಸಲಾಗಿದೆ. ದೋಹಾ, ದುಬೈ ,ಅಬುಧಾಬಿಗೆ ಸೇರಿದಂತೆ ಪ್ರಮುಖ ನಗರಗಳಿಗೆ ವಿಮಾನ ಸಂಚಾರ ರದ್ದಾಗಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>