ಇಲ್ಲಿನ ಕಾರಹಳ್ಳಿ ಗ್ರಾಮದಲ್ಲಿ ನಡೆದ ಕನ್ನಡ ರಾಜ್ಯೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಉಪಚುನಾವಣೆ ಫಲಿತಾಂಶ ಅಚ್ಚರಿ ಮೂಡಿಸಿದೆ. ಕುಮಾರಸ್ವಾಮಿ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರೈತರ ಸಾಲಮನ್ನಾದ ಜತೆಗೆ ಅಭಿವೃದ್ಧಿಗೆ ಒತ್ತು ನೀಡಿದ್ದರು. ಕೆ.ಆರ್ ಪೇಟೆ ಕ್ಷೇತ್ರದಲ್ಲಿ 22ಸಾವಿರ ರೈತರ ಸಾಲಮನ್ನಾ ಆಗಿದೆ. ದುಡ್ಡಿನಿಂದ ಮತದಾರರನ್ನು ಖರೀದಿಸಲು ನಮ್ಮ ಪಕ್ಷದಲ್ಲಿ ಹಣವಿಲ್ಲ. ರಾಜಕೀಯ ನಿಂತ ನೀರಲ್ಲ. ಭವಿಷ್ಯದಲ್ಲಿ ಬೇಕಾದಷ್ಟು ಕಾಲಾವಕಾಶವಿದೆ. ಪಕ್ಷ ಸಂಘಟನೆಗೆ ಒತ್ತು ನೀಡುವುದಾಗಿ’ ಎಂದು ಹೇಳಿದರು.