<p><strong>ಮಾಗಡಿ: </strong>ದೇಶದಲ್ಲಿ ಕಾಂಗ್ರೆಸ್ ಪಕ್ಷ ಒಬಿಸಿ ಸಮುದಾಯವನ್ನು ಮತ ಬ್ಯಾಂಕ್ ಮಾಡಿಕೊಂಡಿದ್ದು ಬಿಟ್ಟರೆ ಸಮುದಾಯದ ಅಭಿವೃದ್ಧಿಗೆ ಮುಂದಾಗಲಿಲ್ಲ ಎಂದು ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ನೆ.ಲ. ನರೇಂದ್ರಬಾಬು ಟೀಕಿಸಿದರು.</p>.<p>ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಶನಿವಾರ ನಡೆದ ತಾಲ್ಲೂಕು ಒಬಿಸಿ ಮೋರ್ಚಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>ದೇಶದಲ್ಲಿ ಶೇ 55ರಷ್ಟು ಒಬಿಸಿ ಸಮುದಾಯಗಳಿವೆ. ಮೊದಲ ಬಾರಿಗೆ ಬಿಜೆಪಿ ಒಬಿಸಿಗೆ ಸೇರಿರುವ ನರೇಂದ್ರ ಮೋದಿ ಅವರನ್ನು ಪ್ರಧಾನ ಮಂತ್ರಿಯನ್ನಾಗಿ ಮಾಡಿದೆ. ಕೇಂದ್ರ ಸಂಪುಟದಲ್ಲಿ ಹಿಂದುಳಿದ ಸಮುದಾಯಕ್ಕೆ ಸೇರಿದ ಹೆಚ್ಚಿನ ಸಂಖ್ಯೆಯ ಸಚಿವರಿದ್ದಾರೆ ಎಂಬುದನ್ನು ಮರೆಯಬಾರದು ಎಂದರು.</p>.<p>ಬಿಜೆಪಿ ಮಾತ್ರ ಒಬಿಸಿ ಸಮುದಾಯಗಳಿಗೆ ಸವಲತ್ತು ನೀಡಿ ಮುಖ್ಯವಾಹಿನಿಗೆ ತರುವ ಪ್ರಯತ್ನ ನಡೆಸಿದೆ. ತಾಲ್ಲೂಕಿನಲ್ಲಿ ಶೇ 53ರಷ್ಟು ಹಿಂದುಳಿದ ಸಮುದಾಯದ ಮತದಾರರಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷ ಚುನಾವಣೆ ಸಮಯದಲ್ಲಿ ಈ ಸಮುದಾಯಗಳಿಗೆ ಆಸೆ ತೋರಿಸಿ ಮತಗಳಿಸುತ್ತಾರೆ. ಅಧಿಕಾರಕ್ಕೆ ಬಂದ ಕೂಡಲೇ ಸ್ವಜಾತಿಗಳಿಗೆ ಸವಲತ್ತು ನೀಡುವುದನ್ನು ಒಬಿಸಿ ಯುವಕರು ಸೂಕ್ಷ್ಮವಾಗಿ ಗಮನಿಸಬೇಕು ಎಂದು ಹೇಳಿದರು.</p>.<p>ಹಿಂದುಳಿದ ಸಮುದಾಯದ ಯುವಕರು ಸಂಘಟಿತರಾಗಿ, ಸರ್ಕಾರಿ ಸವಲತ್ತು ಪಡೆಯಲು ಮುಂದಾಗಬೇಕು. ಹಿಂದುಳಿದವರು ಎಂದು ಮನೆಯಲ್ಲಿ ಕುಳಿತರೆ ಮನೆ ಬಾಗಿಲಿಗೆ ಸವಲತ್ತು ದೊರೆಯುವುದಿಲ್ಲ. ಮನೆಯಿಂದ ಹೊರಗೆ ಬಂದು ಸಂಘಟಿತರಾಗಬೇಕು. ಒಬಿಸಿ, ಅಲೆಮಾರಿ, ಅರೆಅಲೆಮಾರಿ ಜನಾಂಗದ ಯುವಕರು ಸಂಘಟಿತರಾಗಿ ಜನಜಾಗೃತಿ ಮೂಡಿಸಬೇಕು. ಜೊತೆಗೆ, ಮಕ್ಕಳಿಗೆ ಶಿಕ್ಷಣ ಕೊಡಿಸಲು ಮುಂದಾಗಬೇಕು ಎಂದು ಸಲಹೆ ನೀಡಿದರು.</p>.<p>ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಘಟಕದ ಉಪಾಧ್ಯಕ್ಷ ಎ.ಎಚ್. ಬಸವರಾಜು, ಪುರಸಭೆ ಅಧ್ಯಕ್ಷೆ ಭಾಗ್ಯಮ್ಮ, ಮುಖಂಡರಾದ ಗೀತಾ ಸುರೇಶ್, ಶಿವಣ್ಣ, ಭಾಸ್ಕರ್, ಮಾರಯ್ಯ ದೊಂಬಿದಾಸ, ರಾಘವೇಂದ್ರ ನೇಕಾರ, ಕೃಷ್ಣಪ್ಪ, ಸುರೇಶ್, ಕುದೂರಿನ ಹೇಮಂತ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ: </strong>ದೇಶದಲ್ಲಿ ಕಾಂಗ್ರೆಸ್ ಪಕ್ಷ ಒಬಿಸಿ ಸಮುದಾಯವನ್ನು ಮತ ಬ್ಯಾಂಕ್ ಮಾಡಿಕೊಂಡಿದ್ದು ಬಿಟ್ಟರೆ ಸಮುದಾಯದ ಅಭಿವೃದ್ಧಿಗೆ ಮುಂದಾಗಲಿಲ್ಲ ಎಂದು ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ನೆ.ಲ. ನರೇಂದ್ರಬಾಬು ಟೀಕಿಸಿದರು.</p>.<p>ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಶನಿವಾರ ನಡೆದ ತಾಲ್ಲೂಕು ಒಬಿಸಿ ಮೋರ್ಚಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>ದೇಶದಲ್ಲಿ ಶೇ 55ರಷ್ಟು ಒಬಿಸಿ ಸಮುದಾಯಗಳಿವೆ. ಮೊದಲ ಬಾರಿಗೆ ಬಿಜೆಪಿ ಒಬಿಸಿಗೆ ಸೇರಿರುವ ನರೇಂದ್ರ ಮೋದಿ ಅವರನ್ನು ಪ್ರಧಾನ ಮಂತ್ರಿಯನ್ನಾಗಿ ಮಾಡಿದೆ. ಕೇಂದ್ರ ಸಂಪುಟದಲ್ಲಿ ಹಿಂದುಳಿದ ಸಮುದಾಯಕ್ಕೆ ಸೇರಿದ ಹೆಚ್ಚಿನ ಸಂಖ್ಯೆಯ ಸಚಿವರಿದ್ದಾರೆ ಎಂಬುದನ್ನು ಮರೆಯಬಾರದು ಎಂದರು.</p>.<p>ಬಿಜೆಪಿ ಮಾತ್ರ ಒಬಿಸಿ ಸಮುದಾಯಗಳಿಗೆ ಸವಲತ್ತು ನೀಡಿ ಮುಖ್ಯವಾಹಿನಿಗೆ ತರುವ ಪ್ರಯತ್ನ ನಡೆಸಿದೆ. ತಾಲ್ಲೂಕಿನಲ್ಲಿ ಶೇ 53ರಷ್ಟು ಹಿಂದುಳಿದ ಸಮುದಾಯದ ಮತದಾರರಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷ ಚುನಾವಣೆ ಸಮಯದಲ್ಲಿ ಈ ಸಮುದಾಯಗಳಿಗೆ ಆಸೆ ತೋರಿಸಿ ಮತಗಳಿಸುತ್ತಾರೆ. ಅಧಿಕಾರಕ್ಕೆ ಬಂದ ಕೂಡಲೇ ಸ್ವಜಾತಿಗಳಿಗೆ ಸವಲತ್ತು ನೀಡುವುದನ್ನು ಒಬಿಸಿ ಯುವಕರು ಸೂಕ್ಷ್ಮವಾಗಿ ಗಮನಿಸಬೇಕು ಎಂದು ಹೇಳಿದರು.</p>.<p>ಹಿಂದುಳಿದ ಸಮುದಾಯದ ಯುವಕರು ಸಂಘಟಿತರಾಗಿ, ಸರ್ಕಾರಿ ಸವಲತ್ತು ಪಡೆಯಲು ಮುಂದಾಗಬೇಕು. ಹಿಂದುಳಿದವರು ಎಂದು ಮನೆಯಲ್ಲಿ ಕುಳಿತರೆ ಮನೆ ಬಾಗಿಲಿಗೆ ಸವಲತ್ತು ದೊರೆಯುವುದಿಲ್ಲ. ಮನೆಯಿಂದ ಹೊರಗೆ ಬಂದು ಸಂಘಟಿತರಾಗಬೇಕು. ಒಬಿಸಿ, ಅಲೆಮಾರಿ, ಅರೆಅಲೆಮಾರಿ ಜನಾಂಗದ ಯುವಕರು ಸಂಘಟಿತರಾಗಿ ಜನಜಾಗೃತಿ ಮೂಡಿಸಬೇಕು. ಜೊತೆಗೆ, ಮಕ್ಕಳಿಗೆ ಶಿಕ್ಷಣ ಕೊಡಿಸಲು ಮುಂದಾಗಬೇಕು ಎಂದು ಸಲಹೆ ನೀಡಿದರು.</p>.<p>ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಘಟಕದ ಉಪಾಧ್ಯಕ್ಷ ಎ.ಎಚ್. ಬಸವರಾಜು, ಪುರಸಭೆ ಅಧ್ಯಕ್ಷೆ ಭಾಗ್ಯಮ್ಮ, ಮುಖಂಡರಾದ ಗೀತಾ ಸುರೇಶ್, ಶಿವಣ್ಣ, ಭಾಸ್ಕರ್, ಮಾರಯ್ಯ ದೊಂಬಿದಾಸ, ರಾಘವೇಂದ್ರ ನೇಕಾರ, ಕೃಷ್ಣಪ್ಪ, ಸುರೇಶ್, ಕುದೂರಿನ ಹೇಮಂತ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>