<p><strong>ಆನೇಕಲ್: </strong>ವಿದ್ಯಾರ್ಥಿಗಳು ಬ್ಯಾಂಕಿಂಗ್ ಚಟುವಟಿಕೆ ಬಗ್ಗೆ ಮಾಹಿತಿ ಹೊಂದಿರಬೇಕು. ಪ್ರತಿ ವಿದ್ಯಾರ್ಥಿಯೂ ಬ್ಯಾಂಕ್ ಖಾತೆ ತೆರೆಯುವ ಮೂಲಕ ಉಳಿತಾಯ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ನಾಗನಾಥಪುರಂ ಬಾಷ್ ಕಂಪನಿ ವ್ಯವಸ್ಥಾಪಕ ಜೀನಚಂದ್ರ ತಿಳಿಸಿದರು.</p>.<p>ಅವರು ತಾಲ್ಲೂಕಿನ ಹುಸ್ಕೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಾಷ್ ಪ್ರತಿಷ್ಠಾನ ಮತ್ತು ಕಾರ್ಪೋರೇಷನ್ ಬ್ಯಾಂಕ್ ವತಿಯಿಂದ ನಡೆದ ಬ್ಯಾಂಕಿಂಗ್ ಕ್ಷೇತ್ರದ ಬಗ್ಗೆ ಮಾಹಿತಿ ಮತ್ತು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಬ್ಯಾಂಕ್ ಖಾತೆ ಇಲ್ಲದ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಖಾತೆ ತೆರೆಯಲು ಸಂಸ್ಥೆ ನೆರವಾಗಲಿದೆ. ಪ್ರತಿಯೊಬ್ಬರು ಖಾತೆ ಹೊಂದಿದ್ದರೆ ಸರ್ಕಾರದ ವಿದ್ಯಾರ್ಥಿ ವೇತನ ಸೇರಿದಂತೆ ಎಲ್ಲ ಸೌಲಭ್ಯಗಳು ಬ್ಯಾಂಕ್ ಮೂಲಕ ದೊರೆಯುವಂತೆ ಮಾಡಬಹುದು. ವಿದ್ಯಾರ್ಥಿಗಳು ಉಳಿತಾಯ ಮಾಡಬಹುದು ಎಂದರು.</p>.<p>ಮುಖ್ಯಶಿಕ್ಷಕ ಆರ್.ಶ್ರೀನಿವಾಸಮೂರ್ತಿ ಮಾತನಾಡಿ, ಬಾಷ್ ಪ್ರತಿಷ್ಠಾನ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಹೆಚ್ಚಿನ ನೆರವು ನೀಡುತ್ತಿದೆ. ₹1ಕೋಟಿ ವೆಚ್ಚದಲ್ಲಿ ಹುಸ್ಕೂರು ಸರ್ಕಾರಿ ಶಾಲೆ ನವೀಕರಣ ಮಾಡಿ ಎಲ್ಲ ಸೌಲಭ್ಯ ಕಲ್ಪಿಸಿಕೊಟ್ಟಿದೆ. ವಿದ್ಯಾರ್ಥಿಗಳು ಮತ್ತು ಪೋಷಕರು ಬ್ಯಾಂಕ್ ಖಾತೆ ಹೊಂದಿದ್ದರೆ ಸೌಲಭ್ಯ ಮಧ್ಯವರ್ತಿಗಳಿಲ್ಲದೇ ನೇರವಾಗಿ ಪಡೆಯಲು ಸಾಧ್ಯವಾಗುತ್ತದೆ ಎಂದರು.</p>.<p>ಬಾಷ್ ಪ್ರತಿಷ್ಠಾನದ ಕಾರ್ಯಕ್ರಮಾಧಿಕಾರಿ ಶ್ರೀನಿವಾಸರಾವ್, ಕಾರ್ಪೋರೇಷನ್ ಬ್ಯಾಂಕ್ನ ಮುತ್ತಾನಲ್ಲೂರು ಶಾಖೆಯ ಮ್ಯಾನೇಜರ್ ಚಂದ್ರಶೇಖರ್, ಮುಖಂಡ ಯಲ್ಲಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ವಿದ್ಯಾರ್ಥಿಗಳು ಬ್ಯಾಂಕಿಂಗ್ ಚಟುವಟಿಕೆ ಬಗ್ಗೆ ಮಾಹಿತಿ ಹೊಂದಿರಬೇಕು. ಪ್ರತಿ ವಿದ್ಯಾರ್ಥಿಯೂ ಬ್ಯಾಂಕ್ ಖಾತೆ ತೆರೆಯುವ ಮೂಲಕ ಉಳಿತಾಯ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ನಾಗನಾಥಪುರಂ ಬಾಷ್ ಕಂಪನಿ ವ್ಯವಸ್ಥಾಪಕ ಜೀನಚಂದ್ರ ತಿಳಿಸಿದರು.</p>.<p>ಅವರು ತಾಲ್ಲೂಕಿನ ಹುಸ್ಕೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಾಷ್ ಪ್ರತಿಷ್ಠಾನ ಮತ್ತು ಕಾರ್ಪೋರೇಷನ್ ಬ್ಯಾಂಕ್ ವತಿಯಿಂದ ನಡೆದ ಬ್ಯಾಂಕಿಂಗ್ ಕ್ಷೇತ್ರದ ಬಗ್ಗೆ ಮಾಹಿತಿ ಮತ್ತು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಬ್ಯಾಂಕ್ ಖಾತೆ ಇಲ್ಲದ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಖಾತೆ ತೆರೆಯಲು ಸಂಸ್ಥೆ ನೆರವಾಗಲಿದೆ. ಪ್ರತಿಯೊಬ್ಬರು ಖಾತೆ ಹೊಂದಿದ್ದರೆ ಸರ್ಕಾರದ ವಿದ್ಯಾರ್ಥಿ ವೇತನ ಸೇರಿದಂತೆ ಎಲ್ಲ ಸೌಲಭ್ಯಗಳು ಬ್ಯಾಂಕ್ ಮೂಲಕ ದೊರೆಯುವಂತೆ ಮಾಡಬಹುದು. ವಿದ್ಯಾರ್ಥಿಗಳು ಉಳಿತಾಯ ಮಾಡಬಹುದು ಎಂದರು.</p>.<p>ಮುಖ್ಯಶಿಕ್ಷಕ ಆರ್.ಶ್ರೀನಿವಾಸಮೂರ್ತಿ ಮಾತನಾಡಿ, ಬಾಷ್ ಪ್ರತಿಷ್ಠಾನ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಹೆಚ್ಚಿನ ನೆರವು ನೀಡುತ್ತಿದೆ. ₹1ಕೋಟಿ ವೆಚ್ಚದಲ್ಲಿ ಹುಸ್ಕೂರು ಸರ್ಕಾರಿ ಶಾಲೆ ನವೀಕರಣ ಮಾಡಿ ಎಲ್ಲ ಸೌಲಭ್ಯ ಕಲ್ಪಿಸಿಕೊಟ್ಟಿದೆ. ವಿದ್ಯಾರ್ಥಿಗಳು ಮತ್ತು ಪೋಷಕರು ಬ್ಯಾಂಕ್ ಖಾತೆ ಹೊಂದಿದ್ದರೆ ಸೌಲಭ್ಯ ಮಧ್ಯವರ್ತಿಗಳಿಲ್ಲದೇ ನೇರವಾಗಿ ಪಡೆಯಲು ಸಾಧ್ಯವಾಗುತ್ತದೆ ಎಂದರು.</p>.<p>ಬಾಷ್ ಪ್ರತಿಷ್ಠಾನದ ಕಾರ್ಯಕ್ರಮಾಧಿಕಾರಿ ಶ್ರೀನಿವಾಸರಾವ್, ಕಾರ್ಪೋರೇಷನ್ ಬ್ಯಾಂಕ್ನ ಮುತ್ತಾನಲ್ಲೂರು ಶಾಖೆಯ ಮ್ಯಾನೇಜರ್ ಚಂದ್ರಶೇಖರ್, ಮುಖಂಡ ಯಲ್ಲಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>