ವಿಶ್ವನಾಥಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಮೂರ್ತಿ ಮಾತನಾಡಿ, ‘ಮಹಿಳೆಯರಿಂದ ಸಾದ್ಯವಾಗದ್ದು ಯಾವುದೂ ಇಲ್ಲ, ಮಹಿಳೆಯರು ಮನಸ್ಸು ಮಾಡಬೇಕಷ್ಟೇ. ಸಂಘದಲ್ಲಿ ಗ್ರಾಮೀಣ ಭಾಗದ ಮಹಿಳೆಯರಿಗೆ ಸಿಗುವಂತಹ ಹಲವಾರು ಯೋಜನೆಗಳ ಮಾಹಿತಿಯನ್ನು ಪಡೆದುಕೊಂಡು ಅದರ ಸದುಪಯೋಗ ಮಾಡಿಕೊಳ್ಳಬೇಕು. ಸಾಲ ಸೌಲಭ್ಯ ಪಡೆಯುವ ಮಹಿಳಾ ಫಲಾನುಭವಿಗಳು ಬೇರೆ ಉದ್ದೇಶಗಳಿಗೆ ಬಳಸದೆ ಆರ್ಥಿಕ ಪ್ರಗತಿಗೆ ಮೀಸಲಿಡಬೇಕು. ಸರ್ಕಾರದ ವಿವಿಧ ಯೋಜನೆಯಡಿಯಲ್ಲಿ ರಿಯಾಯಿತಿ ದರದಲ್ಲಿಯೂ ಸಾಲ ಸೌಲಭ್ಯವಿದ್ದು, ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಸಂಘವನ್ನು ಮತ್ತಷ್ಟು ಬೆಳೆಸುವ ನಿಟ್ಟಿನಲ್ಲಿ ಮಹಿಳೆಯರು ಶ್ರಮಿಸಬೇಕು’ ಎಂದರು.