<p><strong>ಆನೇಕಲ್</strong>: ಗಾಂಧೀಜಿ ರಾಮರಾಜ್ಯದ ಕನಸು ಕಂಡಿದ್ದರು. ಮಹಿಳೆಯರು ಯಾವುದೇ ಭಯ, ಆತಂಕವಿಲ್ಲದೇ ದೈನಂದಿನ ಚಟುವಟಿಕೆಗಳಲ್ಲಿ ಭಾಗವಹಿಸುವಂತಹ ವಾತಾವರಣ ನಿರ್ಮಿಸಬೇಕು ಎಂಬುದು ಗಾಂಧೀಜಿ ಆಶಯವಾಗಿತ್ತು ಎಂದು ಕೆಪಿಸಿಸಿ ಕಾರ್ಯದರ್ಶಿ ಸುಷ್ಮಾರೆಡ್ಡಿ ತಿಳಿಸಿದರು.</p>.<p>ಅವರು ತಾಲ್ಲೂಕಿನ ಹುಲಿಮಂಗಲದಲ್ಲಿ ಭಾನುವಾರ ಆಯೋಜಿಸಿದ್ದ ಗಾಂಧಿ ಜಯಂತಿ ಅಂಗವಾಗಿ ಮಹಿಳಾ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿವೆ. ಇವುಗಳಿಗೆ ಕಡಿವಾಣ ಹಾಕಲು ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಈ ಮೂಲಕ ಮಹಿಳೆಯರು ನೆಮ್ಮದಿಯಿಂದ ಜೀವಿಸಲು ಪೂರಕ ವಾತಾವರಣವನ್ನು ನಿರ್ಮಿಸುವುದು ಗಾಂಧೀಜಿ ಅವರಿಗೆ ನೀಡಿದ ಗೌರವವಾಗಿದೆ ಎಂದರು.</p>.<p>ಮಹಿಳೆಯರು ಸ್ವಾವಲಂಬಿಗಳಾಗಬೇಕು. ಹಾಗಾಗಿ ಹೊಲಿಗೆ, ಬ್ಯೂಟಿಷಿಯನ್ ಸೇರಿದಂತೆ ವಿವಿಧ ಕೌಶಲಗಳಲ್ಲಿ ತರಬೇತ ಮಾರ್ಗದರ್ಶನ ಪಡೆದು ಸ್ವಉದ್ಯೋಗಗಳನ್ನು ಮಾಡಲು ಸಿದ್ಧರಾಗಬೇಕು. ಇದರಿಂದ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗುತ್ತದೆ ಎಂದರು.</p>.<p>ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ದೀಪಿಕಾರೆಡ್ಡಿ, ಮುಖಂಡ ಎಚ್.ಪಿ.ರಾಜಗೋಪಾಲರೆಡ್ಡಿ, ಮುಖಂಡರಾದ ಮುದಾಸೂರ್, ಅಹಮದ್, ಚಿನ್ನಪ್ಪ, ಜೋಸೆಫ್, ಉದಯ್, ಕೃಷ್ಣಮೂರ್ತಿ, ಕುಮಾರ್, ಮುನಿರತ್ನ, ಗೋವಿಂದಮ್ಮ, ಶೋಭಾ, ವೀಣಾಗೌಡ, ರೂಪಾಗೌಡ, ಅಶ್ವಿನಿ, ನಿರ್ಮಲ, ಪ್ರೇಮ, ದಿವ್ಯ, ಆಶಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್</strong>: ಗಾಂಧೀಜಿ ರಾಮರಾಜ್ಯದ ಕನಸು ಕಂಡಿದ್ದರು. ಮಹಿಳೆಯರು ಯಾವುದೇ ಭಯ, ಆತಂಕವಿಲ್ಲದೇ ದೈನಂದಿನ ಚಟುವಟಿಕೆಗಳಲ್ಲಿ ಭಾಗವಹಿಸುವಂತಹ ವಾತಾವರಣ ನಿರ್ಮಿಸಬೇಕು ಎಂಬುದು ಗಾಂಧೀಜಿ ಆಶಯವಾಗಿತ್ತು ಎಂದು ಕೆಪಿಸಿಸಿ ಕಾರ್ಯದರ್ಶಿ ಸುಷ್ಮಾರೆಡ್ಡಿ ತಿಳಿಸಿದರು.</p>.<p>ಅವರು ತಾಲ್ಲೂಕಿನ ಹುಲಿಮಂಗಲದಲ್ಲಿ ಭಾನುವಾರ ಆಯೋಜಿಸಿದ್ದ ಗಾಂಧಿ ಜಯಂತಿ ಅಂಗವಾಗಿ ಮಹಿಳಾ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿವೆ. ಇವುಗಳಿಗೆ ಕಡಿವಾಣ ಹಾಕಲು ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಈ ಮೂಲಕ ಮಹಿಳೆಯರು ನೆಮ್ಮದಿಯಿಂದ ಜೀವಿಸಲು ಪೂರಕ ವಾತಾವರಣವನ್ನು ನಿರ್ಮಿಸುವುದು ಗಾಂಧೀಜಿ ಅವರಿಗೆ ನೀಡಿದ ಗೌರವವಾಗಿದೆ ಎಂದರು.</p>.<p>ಮಹಿಳೆಯರು ಸ್ವಾವಲಂಬಿಗಳಾಗಬೇಕು. ಹಾಗಾಗಿ ಹೊಲಿಗೆ, ಬ್ಯೂಟಿಷಿಯನ್ ಸೇರಿದಂತೆ ವಿವಿಧ ಕೌಶಲಗಳಲ್ಲಿ ತರಬೇತ ಮಾರ್ಗದರ್ಶನ ಪಡೆದು ಸ್ವಉದ್ಯೋಗಗಳನ್ನು ಮಾಡಲು ಸಿದ್ಧರಾಗಬೇಕು. ಇದರಿಂದ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗುತ್ತದೆ ಎಂದರು.</p>.<p>ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ದೀಪಿಕಾರೆಡ್ಡಿ, ಮುಖಂಡ ಎಚ್.ಪಿ.ರಾಜಗೋಪಾಲರೆಡ್ಡಿ, ಮುಖಂಡರಾದ ಮುದಾಸೂರ್, ಅಹಮದ್, ಚಿನ್ನಪ್ಪ, ಜೋಸೆಫ್, ಉದಯ್, ಕೃಷ್ಣಮೂರ್ತಿ, ಕುಮಾರ್, ಮುನಿರತ್ನ, ಗೋವಿಂದಮ್ಮ, ಶೋಭಾ, ವೀಣಾಗೌಡ, ರೂಪಾಗೌಡ, ಅಶ್ವಿನಿ, ನಿರ್ಮಲ, ಪ್ರೇಮ, ದಿವ್ಯ, ಆಶಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>