<p><strong>ದೊಡ್ಡಬಳ್ಳಾಪುರ: </strong>ಮಹಿಳೆಯರು ಸ್ವಾವಲಂಬಿಗಳಾಗಲು ಸಾಕಷ್ಟು ಅವಕಾಶಗಳಿವೆ. ಇವುಗಳನ್ನು ಮಹಿಳೆಯರು ಸದುಪಯೋಗಪಡಿಸಿಕೊಳ್ಳುವ ಮೂಲಕ ಮುಖ್ಯವಾಹಿನಿಗೆ ಬರಬೇಕಿದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಅನಂತಕುಮಾರಿ ಚಿನ್ನಪ್ಪ ಹೇಳಿದರು.</p>.<p>ಇಲ್ಲಿನ ದೇವರಾಜ ನಗರದ ಸರಸ್ವತಿ ಶಾಲೆಯಲ್ಲಿ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಮಹಿಳೆಗೆ ಸರ್ಕಾರದಿಂದ ಹಲವಾರು ಸವಲತ್ತುಗಳು ದೊರೆಯುತ್ತಿವೆ. ಹೆಣ್ಣು ಮಕ್ಕಳು ಪದವಿ ಶಿಕ್ಷಣ ಪಡೆದು ಸ್ವಾವಲಂಬಿ ಬದುಕನ್ನು ಕಂಡುಕೊಳ್ಳಬೇಕು. ಆತ್ಮಸ್ಥೈರ್ಯ ಹೆಚ್ಚಿಸಿಕೊಳ್ಳಬೇಕು. ಇಂದು ಮರೆಯಾಗುತ್ತಿರುವ ಮೌಲ್ಯಗಳು ಸಂಸ್ಕಾರಗಳನ್ನೂ ಉಳಿಸಿ ಬೆಳೆಸಬೇಕು ತಂದೆ, ತಾಯಿ ಗುರು ಹಿರಿಯರನ್ನು ಗೌರವಿಸುವುದನ್ನು ರೂಡಿಸಿಕೊಳ್ಳಬೇಕು’ ಎಂದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಸ್ವತಿ ಶಾಲೆಯ ಕಾರ್ಯದರ್ಶಿ ಮಂಜುಳಾ ಸುಬ್ರಮಣ್ಯ ವಹಿಸಿದ್ದರು. ಸಂಸ್ಥೆಯ ಅಧ್ಯಕ್ಷ ಎ.ಸುಬ್ರಹ್ಮಣ್ಯ,ಉಪಾಧ್ಯಕ್ಷ ಸ್ವರೂಪ್, ಆಡಳಿತ ಮಂಡಳಿ ಸದಸ್ಯೆ ನಯನಸ್ವರೂಪ್, ಮುಖ್ಯಶಿಕ್ಷಕ ಬಿ.ಕೆ.ಸಂಪತ್ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ: </strong>ಮಹಿಳೆಯರು ಸ್ವಾವಲಂಬಿಗಳಾಗಲು ಸಾಕಷ್ಟು ಅವಕಾಶಗಳಿವೆ. ಇವುಗಳನ್ನು ಮಹಿಳೆಯರು ಸದುಪಯೋಗಪಡಿಸಿಕೊಳ್ಳುವ ಮೂಲಕ ಮುಖ್ಯವಾಹಿನಿಗೆ ಬರಬೇಕಿದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಅನಂತಕುಮಾರಿ ಚಿನ್ನಪ್ಪ ಹೇಳಿದರು.</p>.<p>ಇಲ್ಲಿನ ದೇವರಾಜ ನಗರದ ಸರಸ್ವತಿ ಶಾಲೆಯಲ್ಲಿ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಮಹಿಳೆಗೆ ಸರ್ಕಾರದಿಂದ ಹಲವಾರು ಸವಲತ್ತುಗಳು ದೊರೆಯುತ್ತಿವೆ. ಹೆಣ್ಣು ಮಕ್ಕಳು ಪದವಿ ಶಿಕ್ಷಣ ಪಡೆದು ಸ್ವಾವಲಂಬಿ ಬದುಕನ್ನು ಕಂಡುಕೊಳ್ಳಬೇಕು. ಆತ್ಮಸ್ಥೈರ್ಯ ಹೆಚ್ಚಿಸಿಕೊಳ್ಳಬೇಕು. ಇಂದು ಮರೆಯಾಗುತ್ತಿರುವ ಮೌಲ್ಯಗಳು ಸಂಸ್ಕಾರಗಳನ್ನೂ ಉಳಿಸಿ ಬೆಳೆಸಬೇಕು ತಂದೆ, ತಾಯಿ ಗುರು ಹಿರಿಯರನ್ನು ಗೌರವಿಸುವುದನ್ನು ರೂಡಿಸಿಕೊಳ್ಳಬೇಕು’ ಎಂದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಸ್ವತಿ ಶಾಲೆಯ ಕಾರ್ಯದರ್ಶಿ ಮಂಜುಳಾ ಸುಬ್ರಮಣ್ಯ ವಹಿಸಿದ್ದರು. ಸಂಸ್ಥೆಯ ಅಧ್ಯಕ್ಷ ಎ.ಸುಬ್ರಹ್ಮಣ್ಯ,ಉಪಾಧ್ಯಕ್ಷ ಸ್ವರೂಪ್, ಆಡಳಿತ ಮಂಡಳಿ ಸದಸ್ಯೆ ನಯನಸ್ವರೂಪ್, ಮುಖ್ಯಶಿಕ್ಷಕ ಬಿ.ಕೆ.ಸಂಪತ್ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>