<p><strong>ದೊಡ್ಡಬಳ್ಳಾಪುರ: </strong>ಕೆಲಸದ ಒತ್ತಡಕ್ಕೆ ಒಳಗಾಗಿ ಪೋಷಕರು ಮಕ್ಕಳತ್ತ ಗಮನಹರಿಸುತ್ತಿಲ್ಲ. ಮಕ್ಕಳನ್ನು ಸುಸಂಸ್ಕೃತರನ್ನಾಗಿಸುವಲ್ಲಿ ಪೋಷಕರ ಹೊಣೆಗಾರಿಕೆ ಮುಖ್ಯವಾಗಿದೆ ಎಂದು ಡಿವೈಎಸ್ಪಿ ಟಿ.ರಂಗಪ್ಪ ಹೇಳಿದರು.</p>.<p>ನಗರದಲ್ಲಿನ ಲಾವಣ್ಯ ವಿದ್ಯಾ ಸಂಸ್ಥೆ ವತಿಯಿಂದ ನಡೆದ ಹರ್ಷೋತ್ಸವ-2019 ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಮಕ್ಕಳ ಜವಾಬ್ದಾರಿ ಶಿಕ್ಷಕರದ್ದು ಎನ್ನುವ ಮನೋಭಾವ ಆತಂಕಕಾರಿ ಬೆಳವಣಿಗೆ. ಮುದ್ದಿನಿಂದ ಮಕ್ಕಳನ್ನು ಬೆಳೆಸುತ್ತಿರುವುದು, ಯಾವುದೇ ಕೊರತೆ ಉಂಟಾಗದಂತೆ ನೋಡಿಕೊಳ್ಳುವುದು ಮಕ್ಕಳು ಹಾದಿತಪ್ಪಲು ಕಾರಣವಾಗುತ್ತಿದೆ. ಇದರಲ್ಲಿ ಮೊಬೈಲ್ ಮೊದಲ ಸ್ಥಾನದಲ್ಲಿದೆ. ಆನ್ಲೈನ್ ಗೇಮ್, ಸಾಮಾಜಿಕ ಜಾಲತಾಣಗಳು ಮಕ್ಕಳ ಶೈಕ್ಷಣಿಕ ಹಿನ್ನಡೆ ಕಾರಣವಾಗುತ್ತಿದೆ ಎಂದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಬೈಯಪ್ಪರೆಡ್ಡಿ ಮಾತನಾಡಿ, ಮಕ್ಕಳಿಗೆ ಆಸ್ತಿ ಮಾಡಲು ಶ್ರಮಿಸುತ್ತಿರುವ ಪೋಷಕರು ಮಕ್ಕಳನ್ನು ದೇಶದ ಆಸ್ತಿಯನ್ನಾಗಿಸುವತ್ತ ಚಿಂತಿಸಬೇಕು. ಉತ್ತಮ ಶಿಕ್ಷಣ ಕೊಡಿಸುವುದು ಪ್ರತಿಯೊಬ್ಬ ಪೋಷಕರ ಜವಾಬ್ದಾರಿ ಎಂದರು.</p>.<p>ಕಾರ್ಯಕ್ರಮಉದ್ಘಾಟಿಸಿದ ಬಿಜೆಪಿ ಹಿರಿಯ ಮುಖಂಡ ಜೆ.ನರಸಿಂಹಸ್ವಾಮಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಇಂಗ್ಲಿಷ್ ವ್ಯಾಮೋಹ ಪೋಷಕರಲ್ಲಿ ಮಿತಿ ಮೀರಿದ್ದು ಕನ್ನಡ ಭಾಷೆಗೆ ಕಂಠಕವಾಗುತ್ತಿದೆ ಎಂದರು.</p>.<p>ಆಡಳಿತಾಧಿಕಾರಿ ಯಶೋಧಮ್ಮ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಎನ್.ಹನುಮಂತೇಗೌಡ, ಲಾವಣ್ಯ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಎಂ.ಗೋಪಾಲ, ಲಾವಣ್ಯ ಪದವಿ ಪೂರ್ವ ಮತ್ತು ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ಜೆ.ವಿ.ಚಂದ್ರಶೇಖರ್, ಲಾವಣ್ಯ ಪ್ರೌಢಶಾಲೆ ಮುಖ್ಯ ಶಿಕ್ಷಕ ಕೆ.ಎಚ್.ವೆಂಕಟೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ: </strong>ಕೆಲಸದ ಒತ್ತಡಕ್ಕೆ ಒಳಗಾಗಿ ಪೋಷಕರು ಮಕ್ಕಳತ್ತ ಗಮನಹರಿಸುತ್ತಿಲ್ಲ. ಮಕ್ಕಳನ್ನು ಸುಸಂಸ್ಕೃತರನ್ನಾಗಿಸುವಲ್ಲಿ ಪೋಷಕರ ಹೊಣೆಗಾರಿಕೆ ಮುಖ್ಯವಾಗಿದೆ ಎಂದು ಡಿವೈಎಸ್ಪಿ ಟಿ.ರಂಗಪ್ಪ ಹೇಳಿದರು.</p>.<p>ನಗರದಲ್ಲಿನ ಲಾವಣ್ಯ ವಿದ್ಯಾ ಸಂಸ್ಥೆ ವತಿಯಿಂದ ನಡೆದ ಹರ್ಷೋತ್ಸವ-2019 ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಮಕ್ಕಳ ಜವಾಬ್ದಾರಿ ಶಿಕ್ಷಕರದ್ದು ಎನ್ನುವ ಮನೋಭಾವ ಆತಂಕಕಾರಿ ಬೆಳವಣಿಗೆ. ಮುದ್ದಿನಿಂದ ಮಕ್ಕಳನ್ನು ಬೆಳೆಸುತ್ತಿರುವುದು, ಯಾವುದೇ ಕೊರತೆ ಉಂಟಾಗದಂತೆ ನೋಡಿಕೊಳ್ಳುವುದು ಮಕ್ಕಳು ಹಾದಿತಪ್ಪಲು ಕಾರಣವಾಗುತ್ತಿದೆ. ಇದರಲ್ಲಿ ಮೊಬೈಲ್ ಮೊದಲ ಸ್ಥಾನದಲ್ಲಿದೆ. ಆನ್ಲೈನ್ ಗೇಮ್, ಸಾಮಾಜಿಕ ಜಾಲತಾಣಗಳು ಮಕ್ಕಳ ಶೈಕ್ಷಣಿಕ ಹಿನ್ನಡೆ ಕಾರಣವಾಗುತ್ತಿದೆ ಎಂದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಬೈಯಪ್ಪರೆಡ್ಡಿ ಮಾತನಾಡಿ, ಮಕ್ಕಳಿಗೆ ಆಸ್ತಿ ಮಾಡಲು ಶ್ರಮಿಸುತ್ತಿರುವ ಪೋಷಕರು ಮಕ್ಕಳನ್ನು ದೇಶದ ಆಸ್ತಿಯನ್ನಾಗಿಸುವತ್ತ ಚಿಂತಿಸಬೇಕು. ಉತ್ತಮ ಶಿಕ್ಷಣ ಕೊಡಿಸುವುದು ಪ್ರತಿಯೊಬ್ಬ ಪೋಷಕರ ಜವಾಬ್ದಾರಿ ಎಂದರು.</p>.<p>ಕಾರ್ಯಕ್ರಮಉದ್ಘಾಟಿಸಿದ ಬಿಜೆಪಿ ಹಿರಿಯ ಮುಖಂಡ ಜೆ.ನರಸಿಂಹಸ್ವಾಮಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಇಂಗ್ಲಿಷ್ ವ್ಯಾಮೋಹ ಪೋಷಕರಲ್ಲಿ ಮಿತಿ ಮೀರಿದ್ದು ಕನ್ನಡ ಭಾಷೆಗೆ ಕಂಠಕವಾಗುತ್ತಿದೆ ಎಂದರು.</p>.<p>ಆಡಳಿತಾಧಿಕಾರಿ ಯಶೋಧಮ್ಮ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಎನ್.ಹನುಮಂತೇಗೌಡ, ಲಾವಣ್ಯ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಎಂ.ಗೋಪಾಲ, ಲಾವಣ್ಯ ಪದವಿ ಪೂರ್ವ ಮತ್ತು ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ಜೆ.ವಿ.ಚಂದ್ರಶೇಖರ್, ಲಾವಣ್ಯ ಪ್ರೌಢಶಾಲೆ ಮುಖ್ಯ ಶಿಕ್ಷಕ ಕೆ.ಎಚ್.ವೆಂಕಟೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>