<p><strong>ಆನೇಕಲ್: </strong>ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಂಗಳವಾರ ರಾತ್ರಿಯಿಂದ ಕರ್ಫ್ಯೂ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಮಿಳುನಾಡಿಗೆ ತೆರಳುವ ಕಾರ್ಮಿಕರು, ಕುಟುಂಬಗಳ ಸಂಖ್ಯೆ ಗಡಿಭಾಗ ಅತ್ತಿಬೆಲೆಯಲ್ಲಿ ಹೆಚ್ಚಾಗಿ ಕಂಡು ಬಂದಿತು.</p>.<p>ಗುಂಪು ಗುಂಪುಗಳಲ್ಲಿ ಜನರು ಲಗ್ಗೇಜ್ಗಳೊಂದಿಗೆ ಅತ್ತಿಬೆಲೆ ಗಡಿಯಲ್ಲಿ ಸಾಗುತ್ತಿದ್ದ ದೃಶ್ಯ ಬೆಳಗ್ಗೆಯಿಂದಲೂ ಕಂಡು ಬಂದಿತು. ಹೊಸೂರು, ಕೃಷ್ಣಗಿರಿ, ಧರ್ಮಪುರಿ ಸೇರಿದಂತೆ ತಮಿಳುನಾಡಿನ ವಿವಿಧೆಡೆಗೆ ತೆರಳುವ ಬಸ್ಗಳು ಅತ್ತಿಬೆಲೆಯಲ್ಲಿ ಬಂದು ನಿಲ್ಲುತ್ತಿದ್ದಂತೆ ಜನಜಂಗುಳಿ ಕೆಲವೇ ನಿಮಿಷಗಳಲ್ಲಿ ತುಂಬುತ್ತಿದ್ದ ದೃಶ್ಯ ಕಂಡು ಬಂದಿತು.</p>.<p>ಖಾಸಗಿ ಬಸ್ಗಳು, ಟಿಟಿಗಳು ಮತ್ತು ತಮಿಳುನಾಡು ರಾಜ್ಯ ರಸ್ತೆ ಸಾರಿಗೆ ಬಸ್ಗಳು ಹೆಚ್ಚಿನ ಸಂಖ್ಯೆಯಲ್ಲಿದ್ದವು. ಇದರಿಂದ ಕರ್ನಾಟಕದಿಂದ ತಮಿಳುನಾಡಿಗೆ ತೆರಳುತ್ತಿದ್ದ ಬೃಹತ್ ಸಂಖ್ಯೆಯ ಜನರಿಗೆ ಉಪಯುಕ್ತವಾಯಿತು.</p>.<p>ತಾಲ್ಲೂಕಿನಲ್ಲಿ ಲಾಕ್ಡೌನ್ನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಸಂಬಂಧ ಪೊಲೀಸರು ಎಲ್ಲೆಡೆ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದು ಗಡಿಭಾಗಗಳಲ್ಲಿ ನಾಕಬಂಧಿಯನ್ನು ಹಾಕಿರುವುದು ಕಂಡು ಬಂದಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಂಗಳವಾರ ರಾತ್ರಿಯಿಂದ ಕರ್ಫ್ಯೂ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಮಿಳುನಾಡಿಗೆ ತೆರಳುವ ಕಾರ್ಮಿಕರು, ಕುಟುಂಬಗಳ ಸಂಖ್ಯೆ ಗಡಿಭಾಗ ಅತ್ತಿಬೆಲೆಯಲ್ಲಿ ಹೆಚ್ಚಾಗಿ ಕಂಡು ಬಂದಿತು.</p>.<p>ಗುಂಪು ಗುಂಪುಗಳಲ್ಲಿ ಜನರು ಲಗ್ಗೇಜ್ಗಳೊಂದಿಗೆ ಅತ್ತಿಬೆಲೆ ಗಡಿಯಲ್ಲಿ ಸಾಗುತ್ತಿದ್ದ ದೃಶ್ಯ ಬೆಳಗ್ಗೆಯಿಂದಲೂ ಕಂಡು ಬಂದಿತು. ಹೊಸೂರು, ಕೃಷ್ಣಗಿರಿ, ಧರ್ಮಪುರಿ ಸೇರಿದಂತೆ ತಮಿಳುನಾಡಿನ ವಿವಿಧೆಡೆಗೆ ತೆರಳುವ ಬಸ್ಗಳು ಅತ್ತಿಬೆಲೆಯಲ್ಲಿ ಬಂದು ನಿಲ್ಲುತ್ತಿದ್ದಂತೆ ಜನಜಂಗುಳಿ ಕೆಲವೇ ನಿಮಿಷಗಳಲ್ಲಿ ತುಂಬುತ್ತಿದ್ದ ದೃಶ್ಯ ಕಂಡು ಬಂದಿತು.</p>.<p>ಖಾಸಗಿ ಬಸ್ಗಳು, ಟಿಟಿಗಳು ಮತ್ತು ತಮಿಳುನಾಡು ರಾಜ್ಯ ರಸ್ತೆ ಸಾರಿಗೆ ಬಸ್ಗಳು ಹೆಚ್ಚಿನ ಸಂಖ್ಯೆಯಲ್ಲಿದ್ದವು. ಇದರಿಂದ ಕರ್ನಾಟಕದಿಂದ ತಮಿಳುನಾಡಿಗೆ ತೆರಳುತ್ತಿದ್ದ ಬೃಹತ್ ಸಂಖ್ಯೆಯ ಜನರಿಗೆ ಉಪಯುಕ್ತವಾಯಿತು.</p>.<p>ತಾಲ್ಲೂಕಿನಲ್ಲಿ ಲಾಕ್ಡೌನ್ನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಸಂಬಂಧ ಪೊಲೀಸರು ಎಲ್ಲೆಡೆ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದು ಗಡಿಭಾಗಗಳಲ್ಲಿ ನಾಕಬಂಧಿಯನ್ನು ಹಾಕಿರುವುದು ಕಂಡು ಬಂದಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>