ದೂರುದಾರಸಿ.ನಾರಾಯಣಸ್ವಾಮಿ ಮಾತನಾಡಿ, ‘ಭಟ್ಟರ ಮಾರೇನಹಳ್ಳಿ ಗ್ರಾಮದ ಸರ್ವೇ ನಂಬರ್ 7/1ರಲ್ಲಿ ಕೆಐಎಡಿಬಿ ಅಧಿಕಾರಿಗಳು ನನ್ನ ಗಮನಕ್ಕೆ ತರದೆ, ನೋಟಿಸ್ ನೀಡದೆ ಬೇರೆ ಖಾಸಗಿ ವ್ಯಕ್ತಿಯೊಂದಿಗೆ ಶಾಮೀಲಾಗಿ ಕಾನೂನು ಬಾಹಿರ ದಾಖಲೆ ಸೃಷ್ಟಿಸಿ ಪರಿಹಾರ ಪಡೆಯುವ ಪ್ರಯತ್ನ ನಡೆಯುತ್ತಿದೆ. ಪಿತ್ರಾರ್ಜಿತ ಅಸ್ತಿದಾರನಾದ ನನಗೆ ಪರಿಹಾರ ಸಿಗಬೇಕು. ಇದರ ಬಗ್ಗೆ ಸೂಕ್ತ ತನಿಖೆ ನಡೆಸಿ ನ್ಯಾಯ ದೊರಕಿಸಿಕೊಡಬೇಕು’ ಎಂದು ಮನವಿ ಮಾಡಿದರು.