<p><strong>ಆನೇಕಲ್: </strong>ಪಟ್ಟಣದ ಗುರೂಜಿ ವಿದ್ಯಾನಿಕೇತನ ಶಾಲೆಯಲ್ಲಿ ರಥ ಸಪ್ತಮಿಯನ್ನು ವಿದ್ಯಾರ್ಥಿಗಳು ಸೂರ್ಯ ನಮಸ್ಕಾರ ಮಾಡುವ ಮೂಲಕ ಆಚರಿಸಿದರು.</p>.<p>ಶಾಲೆಯ 650 ವಿದ್ಯಾರ್ಥಿಗಳು 45 ದಿನಗಳಿಂದ ಪ್ರತಿದಿನ ಸೂರ್ಯ ನಮಸ್ಕಾರ ಮಾಡುತ್ತಿದ್ದರು. ರಥ ಸಪ್ತಮಿ ದಿನವಾದ ಈ ದಿನಕ್ಕೆ ಒಟ್ಟು 1,53,400 ಸೂರ್ಯ ನಮಸ್ಕಾರ ಮಾಡುವ ಮೂಲಕ ಸೂರ್ಯ ದೇವರಿಗೆ ಭಕ್ತಿ ಸಮರ್ಪಿಸಿದರು.</p>.<p>ಸಂಸ್ಥೆ ಅಧ್ಯಕ್ಷ ಎಂ. ಚಂದ್ರಶೇಖರ್ ಮಾತನಾಡಿ, ಯೋಗದ ಮೂಲಕ ಆರೋಗ್ಯಯುತ ಜೀವನ ನಡೆಸಲು ಸಾಧ್ಯದೆ ಮನಸ್ಸನ್ನು ನಿಯಂತ್ರಿಸಿ ಏಕಾಗ್ರತೆ ಬೆಳೆಸುತ್ತದೆ. ಜ್ಞಾಪಕ ಶಕ್ತಿ ಹೆಚ್ಚಿಸಿಕೊಳ್ಳಲು ಹಲವಾರು ಯೋಗಾಸನಗಳನ್ನು ಅಭ್ಯಾಸ ಮಾಡಬೇಕು ಎಂದು ಸಲಹೆ ನೀಡಿದರು.</p>.<p>ಸೂರ್ಯ ನಮಸ್ಕಾರವು ಹಲವು ಯೋಗಾಸನಗಳ ಸಂಯೋಗವಾಗಿದೆ. ಮಾನಸಿಕ ಆರೋಗ್ಯ, ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಉಪಯುಕ್ತವಾಗಿದೆ. ಸೂರ್ಯ ಪಥ ಬದಲಾಯಿಸುವ ಈ ದಿನ ಪವಿತ್ರವಾದುದು ಎಂದರು.</p>.<p>ಸಂಸ್ಥೆಯ ಖಜಾಂಚಿ ಗೋಪಾಲಕೃಷ್ಣ ಇದ್ದರು.</p>.<p class="Subhead">ಬ್ರಹ್ಮ ರಥೋತ್ಸವ: ತಾಲ್ಲೂಕಿನ ರಾಮಕೃಷ್ಣಾಪುರದ ಪ್ರಸನ್ನ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ರಥ ಸಪ್ತಮಿ ಪ್ರಯುಕ್ತ ಬ್ರಹ್ಮ ರಥೋತ್ಸವ ನಡೆಯಿತು.</p>.<p>ರಥೋತ್ಸವದ ಅಂಗವಾಗಿ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ಪಟ್ಟಣದ ಗುರೂಜಿ ವಿದ್ಯಾನಿಕೇತನ ಶಾಲೆಯಲ್ಲಿ ರಥ ಸಪ್ತಮಿಯನ್ನು ವಿದ್ಯಾರ್ಥಿಗಳು ಸೂರ್ಯ ನಮಸ್ಕಾರ ಮಾಡುವ ಮೂಲಕ ಆಚರಿಸಿದರು.</p>.<p>ಶಾಲೆಯ 650 ವಿದ್ಯಾರ್ಥಿಗಳು 45 ದಿನಗಳಿಂದ ಪ್ರತಿದಿನ ಸೂರ್ಯ ನಮಸ್ಕಾರ ಮಾಡುತ್ತಿದ್ದರು. ರಥ ಸಪ್ತಮಿ ದಿನವಾದ ಈ ದಿನಕ್ಕೆ ಒಟ್ಟು 1,53,400 ಸೂರ್ಯ ನಮಸ್ಕಾರ ಮಾಡುವ ಮೂಲಕ ಸೂರ್ಯ ದೇವರಿಗೆ ಭಕ್ತಿ ಸಮರ್ಪಿಸಿದರು.</p>.<p>ಸಂಸ್ಥೆ ಅಧ್ಯಕ್ಷ ಎಂ. ಚಂದ್ರಶೇಖರ್ ಮಾತನಾಡಿ, ಯೋಗದ ಮೂಲಕ ಆರೋಗ್ಯಯುತ ಜೀವನ ನಡೆಸಲು ಸಾಧ್ಯದೆ ಮನಸ್ಸನ್ನು ನಿಯಂತ್ರಿಸಿ ಏಕಾಗ್ರತೆ ಬೆಳೆಸುತ್ತದೆ. ಜ್ಞಾಪಕ ಶಕ್ತಿ ಹೆಚ್ಚಿಸಿಕೊಳ್ಳಲು ಹಲವಾರು ಯೋಗಾಸನಗಳನ್ನು ಅಭ್ಯಾಸ ಮಾಡಬೇಕು ಎಂದು ಸಲಹೆ ನೀಡಿದರು.</p>.<p>ಸೂರ್ಯ ನಮಸ್ಕಾರವು ಹಲವು ಯೋಗಾಸನಗಳ ಸಂಯೋಗವಾಗಿದೆ. ಮಾನಸಿಕ ಆರೋಗ್ಯ, ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಉಪಯುಕ್ತವಾಗಿದೆ. ಸೂರ್ಯ ಪಥ ಬದಲಾಯಿಸುವ ಈ ದಿನ ಪವಿತ್ರವಾದುದು ಎಂದರು.</p>.<p>ಸಂಸ್ಥೆಯ ಖಜಾಂಚಿ ಗೋಪಾಲಕೃಷ್ಣ ಇದ್ದರು.</p>.<p class="Subhead">ಬ್ರಹ್ಮ ರಥೋತ್ಸವ: ತಾಲ್ಲೂಕಿನ ರಾಮಕೃಷ್ಣಾಪುರದ ಪ್ರಸನ್ನ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ರಥ ಸಪ್ತಮಿ ಪ್ರಯುಕ್ತ ಬ್ರಹ್ಮ ರಥೋತ್ಸವ ನಡೆಯಿತು.</p>.<p>ರಥೋತ್ಸವದ ಅಂಗವಾಗಿ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>