<p><strong>ದೇವನಹಳ್ಳಿ: </strong>ಯುವ ಸಮುದಾಯ ದುಶ್ಚಟಗಳಿಗೆ ಬಲಿಯಾದರೆ ಭವಿಷ್ಯವಿರುವುದಿಲ್ಲ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ನಗರೇಶ್ವರ ಸ್ವಾಮಿ ಕಲ್ಯಾಣ ಮಂದಿರದಲ್ಲಿ ಜೇಸಿಐ ಸಂಸ್ಥೆ ವತಿಯಿಂದ ನಡೆದ 17ನೇ ವರ್ಷದ ನೂತನ ಪದಾಧಿಕಾರಿಗಳ ಪದವಿ ಸ್ವೀಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಸಂಘಟನೆಯಿಂದ ಕೂಡಿಕೊಂಡು ವಿವಿಧ ರೀತಿಯ ಸಮಾಜ ಸೇವೆಯಲ್ಲಿ ನಿರತರಾದಾಗ ಸಮಾಜದಲ್ಲಿ ಗೌರವಯುತ ಸ್ಥಾನಮಾನ ಸಿಗಲಿದೆ. ಚಿಂತನಾಶಕ್ತಿ ಹೊಂದಿರುವ ಮನುಷ್ಯ ಒಳ್ಳೆಯದಕ್ಕೆ ಮಾತ್ರ ಚಿಂತನೆ ನಡೆಸಬೇಕು ಎಂದರು.</p>.<p>ಹದಿಹರೆಯದ ವಯಸ್ಸಿನಲ್ಲಿ ಮನಸ್ಸಿನ ಭಾವನೆಗಳು ಸಹಜವಾದರು ಸಂಯಮ ತಾಳ್ಮೆ ವಹಿಸಬೇಕಾಗುತ್ತದೆ. ವಿಶಾಲ ಮನೋಭಾವದಿಂದ ಸಮಾಜವನ್ನು ಕಾಣಬೇಕು. ಭವಿಷ್ಯದ ಜೀವನದ ಮಾರ್ಗಕ್ಕೆ ತಮ್ಮದೇ ಸೂತ್ರಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.</p>.<p>ಸಾಮಾಜಿಕ ಸೇವಾ ಕಾರ್ಯದಲ್ಲಿ ತೊಡಗಿಸಿಕೊಳ್ಳವ ಸಂಘ ಸಂಸ್ಥೆಗಳಿಗೆ ಜಾತಿ ಧರ್ಮದ ಕಟ್ಟುಪಾಡುಗಳಿರುವುದಿಲ್ಲ ಎಂಬುದನ್ನು ಕೆಲವು ಸಂಘ ಸಂಸ್ಥೆಗಳು ಪುಷ್ಟೀಕರಿಸುತ್ತವೆ ಎಂದು ತಿಳಿಸಿದರು.</p>.<p>ಇದಕ್ಕೆ ಜೇಸಿಐ ಸಂಸ್ಥೆ ಸಾಕ್ಷಿಯಾಗಿದೆ. ನಿರಂತರವಾಗಿ ಅನೇಕ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡು ಹತ್ತಾರು ಪ್ರಶಸ್ತಿ ಪುರಸ್ಕಾರ ಪಡೆದಿರುವ ಸಂಸ್ಥೆಯಲ್ಲಿ ಸದಸ್ಯರು, ನಿರ್ದೇಶಕರು, ಅಧ್ಯಕ್ಷರ ಪಾತ್ರ ಪ್ರಂಸಶನೀಯ ಎಂದರು.</p>.<p>ಜೇಸಿಐ 2018ರ ವಲಯ ನಿರ್ದೇಶಕ ಎಂ.ಬಾಬು ಮಾತನಾಡಿ, ಸಂಸ್ಥೆಯಲ್ಲಿ ಯಾವುದೇ ಹಣಕಾಸಿನ ನೆರವಿಲ್ಲದೆ ಪ್ರಾಯೋಜಕರಿಂದ ವಿವಿಧ ರೀತಿಯ ಸೇವಾ ಕಾರ್ಯ ನಡೆಸಲಾಗಿದೆ ಎಂದರು.</p>.<p>ರಕ್ತದಾನ ಶಿಬಿರ, ಆರೋಗ್ಯ ತಪಾಸಣೆ, 10ನೇ ತರಗತಿಗೆ ವಾರ್ಷಿಕ ಪರೀಕ್ಷೆ ಪೂರ್ವಭಾವಿ ತರಬೇತಿ, ಪರಿಸರ ಸಂರಕ್ಷಣೆ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆ ನಡೆಸಲು ಜೇಸಿಐ ಎಲ್ಲ ಘಟಕದ ಪದಾಧಿಕಾರಿಗಳು ಸಹಕರಿಸಿದ್ದಾರೆ ಎಂದರು.</p>.<p>ನಿಕಟಪೂರ್ವ ಅಧ್ಯಕ್ಷ ಎಸ್.ಪ್ರಭುದೇವ್ ಮಾತನಾಡಿದರು. ಪುರಸಭೆ ಸದಸ್ಯ ಜಿ.ಎ.ರವೀಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ: </strong>ಯುವ ಸಮುದಾಯ ದುಶ್ಚಟಗಳಿಗೆ ಬಲಿಯಾದರೆ ಭವಿಷ್ಯವಿರುವುದಿಲ್ಲ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ನಗರೇಶ್ವರ ಸ್ವಾಮಿ ಕಲ್ಯಾಣ ಮಂದಿರದಲ್ಲಿ ಜೇಸಿಐ ಸಂಸ್ಥೆ ವತಿಯಿಂದ ನಡೆದ 17ನೇ ವರ್ಷದ ನೂತನ ಪದಾಧಿಕಾರಿಗಳ ಪದವಿ ಸ್ವೀಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಸಂಘಟನೆಯಿಂದ ಕೂಡಿಕೊಂಡು ವಿವಿಧ ರೀತಿಯ ಸಮಾಜ ಸೇವೆಯಲ್ಲಿ ನಿರತರಾದಾಗ ಸಮಾಜದಲ್ಲಿ ಗೌರವಯುತ ಸ್ಥಾನಮಾನ ಸಿಗಲಿದೆ. ಚಿಂತನಾಶಕ್ತಿ ಹೊಂದಿರುವ ಮನುಷ್ಯ ಒಳ್ಳೆಯದಕ್ಕೆ ಮಾತ್ರ ಚಿಂತನೆ ನಡೆಸಬೇಕು ಎಂದರು.</p>.<p>ಹದಿಹರೆಯದ ವಯಸ್ಸಿನಲ್ಲಿ ಮನಸ್ಸಿನ ಭಾವನೆಗಳು ಸಹಜವಾದರು ಸಂಯಮ ತಾಳ್ಮೆ ವಹಿಸಬೇಕಾಗುತ್ತದೆ. ವಿಶಾಲ ಮನೋಭಾವದಿಂದ ಸಮಾಜವನ್ನು ಕಾಣಬೇಕು. ಭವಿಷ್ಯದ ಜೀವನದ ಮಾರ್ಗಕ್ಕೆ ತಮ್ಮದೇ ಸೂತ್ರಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.</p>.<p>ಸಾಮಾಜಿಕ ಸೇವಾ ಕಾರ್ಯದಲ್ಲಿ ತೊಡಗಿಸಿಕೊಳ್ಳವ ಸಂಘ ಸಂಸ್ಥೆಗಳಿಗೆ ಜಾತಿ ಧರ್ಮದ ಕಟ್ಟುಪಾಡುಗಳಿರುವುದಿಲ್ಲ ಎಂಬುದನ್ನು ಕೆಲವು ಸಂಘ ಸಂಸ್ಥೆಗಳು ಪುಷ್ಟೀಕರಿಸುತ್ತವೆ ಎಂದು ತಿಳಿಸಿದರು.</p>.<p>ಇದಕ್ಕೆ ಜೇಸಿಐ ಸಂಸ್ಥೆ ಸಾಕ್ಷಿಯಾಗಿದೆ. ನಿರಂತರವಾಗಿ ಅನೇಕ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡು ಹತ್ತಾರು ಪ್ರಶಸ್ತಿ ಪುರಸ್ಕಾರ ಪಡೆದಿರುವ ಸಂಸ್ಥೆಯಲ್ಲಿ ಸದಸ್ಯರು, ನಿರ್ದೇಶಕರು, ಅಧ್ಯಕ್ಷರ ಪಾತ್ರ ಪ್ರಂಸಶನೀಯ ಎಂದರು.</p>.<p>ಜೇಸಿಐ 2018ರ ವಲಯ ನಿರ್ದೇಶಕ ಎಂ.ಬಾಬು ಮಾತನಾಡಿ, ಸಂಸ್ಥೆಯಲ್ಲಿ ಯಾವುದೇ ಹಣಕಾಸಿನ ನೆರವಿಲ್ಲದೆ ಪ್ರಾಯೋಜಕರಿಂದ ವಿವಿಧ ರೀತಿಯ ಸೇವಾ ಕಾರ್ಯ ನಡೆಸಲಾಗಿದೆ ಎಂದರು.</p>.<p>ರಕ್ತದಾನ ಶಿಬಿರ, ಆರೋಗ್ಯ ತಪಾಸಣೆ, 10ನೇ ತರಗತಿಗೆ ವಾರ್ಷಿಕ ಪರೀಕ್ಷೆ ಪೂರ್ವಭಾವಿ ತರಬೇತಿ, ಪರಿಸರ ಸಂರಕ್ಷಣೆ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆ ನಡೆಸಲು ಜೇಸಿಐ ಎಲ್ಲ ಘಟಕದ ಪದಾಧಿಕಾರಿಗಳು ಸಹಕರಿಸಿದ್ದಾರೆ ಎಂದರು.</p>.<p>ನಿಕಟಪೂರ್ವ ಅಧ್ಯಕ್ಷ ಎಸ್.ಪ್ರಭುದೇವ್ ಮಾತನಾಡಿದರು. ಪುರಸಭೆ ಸದಸ್ಯ ಜಿ.ಎ.ರವೀಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>