<p><strong>ದೇವನಹಳ್ಳಿ:</strong> ಪಟ್ಟಣದ ಸಂತೆ ಆವರಣ ಸಮೀಪದ ಬಸ್ ನಿಲ್ದಾಣದ ಬಳಿಯ ನಡುರಸ್ತೆಯಲ್ಲೇ ಮೂವರು ಯುವಕರು ಅಸ್ವಸ್ಥಗೊಂಡು ಪ್ರಜ್ಞೆತಪ್ಪಿ ಬಿದ್ದ ಘಟನೆ ಸೋಮವಾರ ನಡೆದಿದೆ. ಕೆಲಕಾಲ ಸಾರ್ವಜನಿಕರಲ್ಲಿ ಆತಂಕ ಉಂಟಾಯಿತು.</p>.<p>ಅಸ್ವಸ್ಥಗೊಂಡ ಯುವಕರು ಜಾರ್ಖಂಡ್ ರಾಜ್ಯದಿಂದ ಕೆಲಸಕ್ಕಾಗಿ ದೇವನಹಳ್ಳಿಗೆ ಬಂದಿದ್ದರು. ಯುವಕರು ರಸ್ತೆಯಲ್ಲೇ ಬಿದ್ದಿರುವುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.</p>.<p>ಘಟನಾ ಸ್ಥಳಕ್ಕೆ ಭೇಟಿ ನೀಡಿದ ದೇವನಹಳ್ಳಿ ಠಾಣಾ ಪೊಲೀಸರು ಯುವಕರಿಗೆ ನೀರು ಹಾಕಿ ಎಬ್ಬಿಸುವ ಪ್ರಯತ್ನ ನಡೆಸಿದರು. ಬಳಿಕ ಆಂಬುಲೆನ್ಸ್ ಮೂಲಕ ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು.</p>.<p>ಸ್ಥಳದಲ್ಲಿ ಜನತೆ ಮುಗಿಬಿದ್ದ ಪರಿಣಾಮ ಕೆಲಕಾಲ ಗೊಂದಲದ ವಾತಾವರಣ ಉಂಟಾಯಿತು. ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಜನರನ್ನು ಚದುರಿಸಿದರು.</p>.<p>ಪ್ರಾಥಮಿಕ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಯುವಕರು ಗಾಂಜಾ ಸೇವಿಸಿರುವ ಲಕ್ಷಣ ಕಂಡುಬಂದಿಲ್ಲ. ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ:</strong> ಪಟ್ಟಣದ ಸಂತೆ ಆವರಣ ಸಮೀಪದ ಬಸ್ ನಿಲ್ದಾಣದ ಬಳಿಯ ನಡುರಸ್ತೆಯಲ್ಲೇ ಮೂವರು ಯುವಕರು ಅಸ್ವಸ್ಥಗೊಂಡು ಪ್ರಜ್ಞೆತಪ್ಪಿ ಬಿದ್ದ ಘಟನೆ ಸೋಮವಾರ ನಡೆದಿದೆ. ಕೆಲಕಾಲ ಸಾರ್ವಜನಿಕರಲ್ಲಿ ಆತಂಕ ಉಂಟಾಯಿತು.</p>.<p>ಅಸ್ವಸ್ಥಗೊಂಡ ಯುವಕರು ಜಾರ್ಖಂಡ್ ರಾಜ್ಯದಿಂದ ಕೆಲಸಕ್ಕಾಗಿ ದೇವನಹಳ್ಳಿಗೆ ಬಂದಿದ್ದರು. ಯುವಕರು ರಸ್ತೆಯಲ್ಲೇ ಬಿದ್ದಿರುವುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.</p>.<p>ಘಟನಾ ಸ್ಥಳಕ್ಕೆ ಭೇಟಿ ನೀಡಿದ ದೇವನಹಳ್ಳಿ ಠಾಣಾ ಪೊಲೀಸರು ಯುವಕರಿಗೆ ನೀರು ಹಾಕಿ ಎಬ್ಬಿಸುವ ಪ್ರಯತ್ನ ನಡೆಸಿದರು. ಬಳಿಕ ಆಂಬುಲೆನ್ಸ್ ಮೂಲಕ ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು.</p>.<p>ಸ್ಥಳದಲ್ಲಿ ಜನತೆ ಮುಗಿಬಿದ್ದ ಪರಿಣಾಮ ಕೆಲಕಾಲ ಗೊಂದಲದ ವಾತಾವರಣ ಉಂಟಾಯಿತು. ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಜನರನ್ನು ಚದುರಿಸಿದರು.</p>.<p>ಪ್ರಾಥಮಿಕ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಯುವಕರು ಗಾಂಜಾ ಸೇವಿಸಿರುವ ಲಕ್ಷಣ ಕಂಡುಬಂದಿಲ್ಲ. ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>