<p><strong>ವಿಜಯಪುರ</strong>(ದೇವನಹಳ್ಳಿ): ಮಂಡಿಬೆಲೆ ರಸ್ತೆಯಲ್ಲಿ ವಾಸವಾಗಿದ್ದ ಯುವಕ ಉಜ್ವಲ್ (18) ಗುರುವಾರ ಮನೆಯಲ್ಲಿ ಕಬ್ಬಿಣದ ಕೊಂಡಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.</p>.<p>ಬುಧವಾರ ಆಟವಾಡಲೂ ಹೊರಗೆ ಹೋಗಿದ್ದ ಉಜ್ವಲ್ ರಾತ್ರಿ 11ಕ್ಕೆ ಮನೆಗೆ ಬಂದಿದ್ದ. ಕೋಣೆಗೆ ಹೋಗಿ ಬಾಗಿಲು ಹಾಕಿಕೊಂಡು ಮಲಗಿದ್ದ. ಬೆಳಿಗ್ಗೆ ಎದ್ದೇಳದ ಕಾರಣ ಪೋಷಕರು ಕಿಟಕಿಯಲ್ಲಿ ನೋಡಿದಾದ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.</p>.<p>ಈ ಸಂಬಂಧ ವಿಜಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<p>‘ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣನಾಗಿದ್ದ ಯುವಕ, ಯಾರೊಂದಿಗೂ ಬೆರೆಯದೇ ಮನೆಯಲ್ಲಿ ಮೌನವಾಗಿರುತ್ತಿದ್ದ. ಪ್ರತಿ ಅಮಾವಾಸ್ಯೆಯಲ್ಲೂ ಮನೆಯಲ್ಲಿ ಜೋರಾಗಿ ಕಿರುಚಾಡುತ್ತಿದ್ದ ಹೀಗಾಗಿ ಆತನ ಪೋಷಕರು ದೇವಸ್ಥಾನಕ್ಕೆ ಕರೆದುಕೊಂಡು ಪೂಜೆ ಮಾಡುತ್ತಿಸುತ್ತಿದ್ದರು’.</p>.<p>‘ಅಮಾವಾಸ್ಯೆಯಾದ ಬುಧವಾರ ದೇವಾಲಯಕ್ಕೆ ಹೋಗಬೇಕು ಎಂದು ಹೇಳಿದ್ದರೂ ಕೇಳದೆ, ಹೊರಗೆ ಆಟವಾಡಲು ಹೋಗಿ ರಾತ್ರಿ ತಡವಾಗಿ ಬಂದಿದ್ದ. ಈ ಸಮಯದಲ್ಲಿ ಪೋಷಕರು ದೇವಸ್ಥಾನಕ್ಕೆ ಹೋಗೋಣ ಎಂದಾಗ, ನಾಳೆ ಹೋಗೋಣವೆಂದು ಹೇಳಿ, ಮಲಗಿದ್ದ. ಬೆಳಿಗ್ಗೆ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತನ ತಾಯಿ ದೂರಿನಲ್ಲಿ ತಿಳಿಸಿದ್ದಾರೆ’ ಪೊಲೀಸ್ ಇನ್ಸ್ಪೆಕ್ಟರ್ ಪ್ರಶಾಂತ್ ಸುರೇಶ್ ನಾಯಕ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>(ದೇವನಹಳ್ಳಿ): ಮಂಡಿಬೆಲೆ ರಸ್ತೆಯಲ್ಲಿ ವಾಸವಾಗಿದ್ದ ಯುವಕ ಉಜ್ವಲ್ (18) ಗುರುವಾರ ಮನೆಯಲ್ಲಿ ಕಬ್ಬಿಣದ ಕೊಂಡಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.</p>.<p>ಬುಧವಾರ ಆಟವಾಡಲೂ ಹೊರಗೆ ಹೋಗಿದ್ದ ಉಜ್ವಲ್ ರಾತ್ರಿ 11ಕ್ಕೆ ಮನೆಗೆ ಬಂದಿದ್ದ. ಕೋಣೆಗೆ ಹೋಗಿ ಬಾಗಿಲು ಹಾಕಿಕೊಂಡು ಮಲಗಿದ್ದ. ಬೆಳಿಗ್ಗೆ ಎದ್ದೇಳದ ಕಾರಣ ಪೋಷಕರು ಕಿಟಕಿಯಲ್ಲಿ ನೋಡಿದಾದ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.</p>.<p>ಈ ಸಂಬಂಧ ವಿಜಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<p>‘ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣನಾಗಿದ್ದ ಯುವಕ, ಯಾರೊಂದಿಗೂ ಬೆರೆಯದೇ ಮನೆಯಲ್ಲಿ ಮೌನವಾಗಿರುತ್ತಿದ್ದ. ಪ್ರತಿ ಅಮಾವಾಸ್ಯೆಯಲ್ಲೂ ಮನೆಯಲ್ಲಿ ಜೋರಾಗಿ ಕಿರುಚಾಡುತ್ತಿದ್ದ ಹೀಗಾಗಿ ಆತನ ಪೋಷಕರು ದೇವಸ್ಥಾನಕ್ಕೆ ಕರೆದುಕೊಂಡು ಪೂಜೆ ಮಾಡುತ್ತಿಸುತ್ತಿದ್ದರು’.</p>.<p>‘ಅಮಾವಾಸ್ಯೆಯಾದ ಬುಧವಾರ ದೇವಾಲಯಕ್ಕೆ ಹೋಗಬೇಕು ಎಂದು ಹೇಳಿದ್ದರೂ ಕೇಳದೆ, ಹೊರಗೆ ಆಟವಾಡಲು ಹೋಗಿ ರಾತ್ರಿ ತಡವಾಗಿ ಬಂದಿದ್ದ. ಈ ಸಮಯದಲ್ಲಿ ಪೋಷಕರು ದೇವಸ್ಥಾನಕ್ಕೆ ಹೋಗೋಣ ಎಂದಾಗ, ನಾಳೆ ಹೋಗೋಣವೆಂದು ಹೇಳಿ, ಮಲಗಿದ್ದ. ಬೆಳಿಗ್ಗೆ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತನ ತಾಯಿ ದೂರಿನಲ್ಲಿ ತಿಳಿಸಿದ್ದಾರೆ’ ಪೊಲೀಸ್ ಇನ್ಸ್ಪೆಕ್ಟರ್ ಪ್ರಶಾಂತ್ ಸುರೇಶ್ ನಾಯಕ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>