<p><strong>ವಿಜಯಪುರ(ದೇವನಹಳ್ಳಿ):</strong> ಸ್ನೇಹಿತರೊಂದಿಗೆ ಸಾತನೂರು ಬಳಿಯ ಜಲಪಾತಕ್ಕೆ ಈಜಲು ನೀರಿಗೆ ಇಳಿದ ಎಂಜಿನಿಯರಿಂಗ್ ವಿದ್ಯಾರ್ಥಿ, ನಾರಾಯಣಪುರ ಗ್ರಾಮದ ಯುವಕ ಕೆ.ವರುಣ್ (19) ಕಾಲುಜಾರಿ ಬಿದ್ದು ಮೃತಪಟ್ಟಿದ್ದಾನೆ.</p><p>ಬೆಂಗಳೂರಿನ ದಯಾನಂದ ಸಾಗರ್ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಜಿನಿಯರಿಂಗ್ ಓದುತ್ತಿದ್ದ ವರುಣ್ ಪಿ.ಜಿ.ಯಲ್ಲಿದ್ದ. </p><p>ಯೂಟ್ಯೂಬ್ ನಲ್ಲಿ ಕನಕಪುರ ತಾಲ್ಲೂಕಿನ ಸಾತನೂರು ಬಳಿಯ ಚಿಂಚೂ ಪಾಲ್ಸ್ ವಿಡಿಯೊ ನೋಡಿ, ಅಲ್ಲಿಗೆ ಶುಕ್ರವಾರ ತನ್ನ ಮೂವರು ಸ್ನೇಹಿತರೊಂದಿಗೆ ಪ್ರವಾಸ ತೆರಳಿದ್ದರು.</p><p> ಈಜಲು ಹೋಗುವ ವೇಳೆ ಕಾಲು ಜಾರಿ ಬಿದ್ದು ಸುಳಿಗೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದ.</p><p> ತಕ್ಷಣ ಜೊತೆಯಲ್ಲಿದ್ದ ಸ್ನೇಹಿತರು ಸಮೀಪದ ಪೊಲೀಸರಿಗೆ ಮಾಹಿತಿ ನೀಡಿದ್ದರು.</p><p> ಸ್ಥಳೀಯ ಪೊಲೀಸರು ಅಗ್ನಿಶಾಮಕ ಠಾಣೆಯ ಸಿಬ್ಬಂದಿಯೊಂದಿಗೆ ಶುಕ್ರವಾರದಿಂದ ಹುಡುಕಾಟ ನಡೆಸಿದ್ದು, ಭಾನುವಾರ ಮುಂಜಾನೆ ಮೃತದೇಹ ಪತ್ತೆಯಾಗಿದೆ. </p><p>ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ(ದೇವನಹಳ್ಳಿ):</strong> ಸ್ನೇಹಿತರೊಂದಿಗೆ ಸಾತನೂರು ಬಳಿಯ ಜಲಪಾತಕ್ಕೆ ಈಜಲು ನೀರಿಗೆ ಇಳಿದ ಎಂಜಿನಿಯರಿಂಗ್ ವಿದ್ಯಾರ್ಥಿ, ನಾರಾಯಣಪುರ ಗ್ರಾಮದ ಯುವಕ ಕೆ.ವರುಣ್ (19) ಕಾಲುಜಾರಿ ಬಿದ್ದು ಮೃತಪಟ್ಟಿದ್ದಾನೆ.</p><p>ಬೆಂಗಳೂರಿನ ದಯಾನಂದ ಸಾಗರ್ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಜಿನಿಯರಿಂಗ್ ಓದುತ್ತಿದ್ದ ವರುಣ್ ಪಿ.ಜಿ.ಯಲ್ಲಿದ್ದ. </p><p>ಯೂಟ್ಯೂಬ್ ನಲ್ಲಿ ಕನಕಪುರ ತಾಲ್ಲೂಕಿನ ಸಾತನೂರು ಬಳಿಯ ಚಿಂಚೂ ಪಾಲ್ಸ್ ವಿಡಿಯೊ ನೋಡಿ, ಅಲ್ಲಿಗೆ ಶುಕ್ರವಾರ ತನ್ನ ಮೂವರು ಸ್ನೇಹಿತರೊಂದಿಗೆ ಪ್ರವಾಸ ತೆರಳಿದ್ದರು.</p><p> ಈಜಲು ಹೋಗುವ ವೇಳೆ ಕಾಲು ಜಾರಿ ಬಿದ್ದು ಸುಳಿಗೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದ.</p><p> ತಕ್ಷಣ ಜೊತೆಯಲ್ಲಿದ್ದ ಸ್ನೇಹಿತರು ಸಮೀಪದ ಪೊಲೀಸರಿಗೆ ಮಾಹಿತಿ ನೀಡಿದ್ದರು.</p><p> ಸ್ಥಳೀಯ ಪೊಲೀಸರು ಅಗ್ನಿಶಾಮಕ ಠಾಣೆಯ ಸಿಬ್ಬಂದಿಯೊಂದಿಗೆ ಶುಕ್ರವಾರದಿಂದ ಹುಡುಕಾಟ ನಡೆಸಿದ್ದು, ಭಾನುವಾರ ಮುಂಜಾನೆ ಮೃತದೇಹ ಪತ್ತೆಯಾಗಿದೆ. </p><p>ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>