ಈ ಸಂದರ್ಭದಲ್ಲಿ ಕಾರ್ಯಕ್ರಮ ಮುಂದೂಡಿ ಎಂದು ಕಲಾವಿದರು ಒತ್ತಾಯಿಸಿದರು. ವಿಚಲಿತರಾದ ಸಹಾಯಕ ನಿರ್ದೇಶಕಿ ದೇವಿಕಾ, ಕಳೆದ ವರ್ಷ ಭಾಗವಹಿಸಿದ ಕಲಾವಿದರ ತಂಡಗಳಿಗೆ ಚೆಕ್ ನೀಡಿದ್ದೇನೆ ಎಂದು ಕೆಲ ಕಲಾವಿದರತ್ತ ತೋರಿಸಿ ಸಮಜಾಯಿಸಿ ನೀಡಲು ಮುಂದಾದರು. ಆದರೂ, ಕೆಲ ಕಲಾವಿದರು ವೇದಿಕೆಯಿಂದ ಹೊರ ನಡೆದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜಯಮ್ಮ ಲಕ್ಷ್ಮಿನಾರಾಯಣ, ಉಪಾಧ್ಯಕ್ಷೆ ಕನ್ಯಾಕುಮಾರಿ, ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ರಾಧಮ್ಮ ಮುನಿರಾಜು, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ನಂದಿನಿ, ಸದಸ್ಯೆ ಚೈತ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ದೇವಿಕಾ, ಅರುಂಧತಿ, ಸೇವಾ ಸಂಸ್ಥೆ ಅಧ್ಯಕ್ಷೆ ಡಿ.ಎಂ.ವೇಣುಗೋಪಾಲ್ ಇದ್ದರು.