ಚನ್ನಪಟ್ಟಣ: ಹಳೆ ದ್ವೇಷದ ಹಿನ್ನೆಲೆಯಲ್ಲಿ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗುರುವಾರ ರಾತ್ರಿ ಪಟ್ಟಣದ ಹೊರವಲಯದ ಕಣ್ವ ಬಡಾವಣೆಯಲ್ಲಿ ನಡೆದಿದೆ.
ರಾಹಿಬ್ ಪಾಷ (20) ಕೊಲೆಯಾದ ವ್ಯಕ್ತಿ. ಪಟ್ಟಣದ ಸೈಯ್ಯದ್ ವಾಡಿ ನಿವಾಸಿ. ಈತ ಹಳೆ ದ್ವಿಚಕ್ರ ವಾಹನಗಳ ಮಾರಾಟ ಮಾಡುವ ವೃತ್ತಿ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ಗುರುವಾರ ರಾತ್ರಿ ಇವರ ಐದು ಮಂದಿ ಸ್ನೇಹಿತರು ಹಳೆ ವೈಯಕ್ತಿಕ ವಿಚಾರಕ್ಕಾಗಿ ಜಗಳ ತೆಗೆದು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಡಿವೈಎಸ್ಪಿ ರಾಮರಾಜನ್, ಗ್ರಾಮಾಂತರ ಸರ್ಕಲ್ ಇನ್ ಸ್ಪೆಕ್ಟರ್ ವಸಂತ್, ಎಂ.ಕೆ.ದೊಡ್ಡಿ ಪೊಲೀಸ್ ಠಾಣೆ ಸಬ್ ಇನ್ ಸ್ಪೆಕ್ಟರ್ ಸದಾನಂದ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.