ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಕುವಿನಿಂದ ಇರಿದು ಯುವಕನ ಕೊಲೆ

Last Updated 19 ಸೆಪ್ಟೆಂಬರ್ 2020, 2:03 IST
ಅಕ್ಷರ ಗಾತ್ರ

ಚನ್ನಪಟ್ಟಣ: ಹಳೆ ದ್ವೇಷದ ಹಿನ್ನೆಲೆಯಲ್ಲಿ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗುರುವಾರ ರಾತ್ರಿ ಪಟ್ಟಣದ ಹೊರವಲಯದ ಕಣ್ವ ಬಡಾವಣೆಯಲ್ಲಿ ನಡೆದಿದೆ.

ರಾಹಿಬ್ ಪಾಷ (20) ಕೊಲೆಯಾದ ವ್ಯಕ್ತಿ. ಪಟ್ಟಣದ ಸೈಯ್ಯದ್ ವಾಡಿ ನಿವಾಸಿ. ಈತ ಹಳೆ ದ್ವಿಚಕ್ರ ವಾಹನಗಳ ಮಾರಾಟ ಮಾಡುವ ವೃತ್ತಿ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

ಗುರುವಾರ ರಾತ್ರಿ ಇವರ ಐದು ಮಂದಿ ಸ್ನೇಹಿತರು ಹಳೆ ವೈಯಕ್ತಿಕ ವಿಚಾರಕ್ಕಾಗಿ ಜಗಳ ತೆಗೆದು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಡಿವೈಎಸ್ಪಿ ರಾಮರಾಜನ್, ಗ್ರಾಮಾಂತರ ಸರ್ಕಲ್ ಇನ್ ಸ್ಪೆಕ್ಟರ್ ವಸಂತ್, ಎಂ.ಕೆ.ದೊಡ್ಡಿ ಪೊಲೀಸ್ ಠಾಣೆ ಸಬ್ ಇನ್ ಸ್ಪೆಕ್ಟರ್ ಸದಾನಂದ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT