<p><strong>ವಿಜಯಪುರ (ದೇವನಹಳ್ಳಿ):</strong> ಹೋಬಳಿಯ ಹಲವೆಡೆ ಗ್ರಾಮಗಳಲ್ಲಿರುವ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಬುಧವಾರ ಬಮೂಲ್ ನೂತನ ನಿರ್ದೇಶಕ ಎಸ್.ಪಿ.ಮುನಿರಾಜು ಭೇಟಿ ನೀಡಿದರು.</p>.<p>ಪಟ್ಟಣದ ಸಮೀಪದ ಯಲುವಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಮಾತನಾಡಿ, ಹೈನುಗಾರಿಕೆ ಗ್ರಾಮೀಣ ಭಾಗದ ರೈತರಿಗೆ ವರದಾನವಾಗಿದ್ದು, ಆರ್ಥಿಕ ಜೀವನ ಮಟ್ಟ ಸುಧಾರಿಸುತ್ತಿದೆ. ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದಲ್ಲಿ ಯುವಕರು ಹೈನುಗಾರಿಕೆಯತ್ತ ಆಸಕ್ತಿ ತೋರಿರುವುದು ಉತ್ತಮ ಬೆಳೆವಣಿಗೆಯಾಗಿದೆ ಎಂದರು.</p>.<p>ಹೈನುಗಾರಿಕೆಯಲ್ಲಿ ತೊಡಗುವ ರೈತರಿಗೆ ಖಚಿತ ಆದಾಯ ಸಿಗಲಿದ್ದು, ನಷ್ಟ ಸಾಧ್ಯತೆ ಕಡಿಮೆ. ಒಕ್ಕೂಟದಿಂದ ಸಿಗುವ ಸೌಲಭ್ಯವನ್ನು ಹೈನುಗಾರರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ರೈತರಿಗೆ ಸಲಹೆ ನೀಡಿದರು.</p>.<p>ಇದೇ ವೇಳೆ ಸಹಕಾರಿ ಸಂಘಗಳ ಕಾರ್ಯವೈಖರಿ ಪರಿಶೀಲಿಸಿ, ಹೈನುಗಾರಿಕೆ ಮತ್ತು ಹಾಲು ಉತ್ಪಾದಕರ ಸಮಸ್ಯೆ ಆಲಿಸಿದರು.</p>.<p>ಮುಖಂಡರಾದ ಶ್ರೀನಿವಾಸ್, ಅಪ್ಪಯಣ್ಣ, ವೀರೇಗೌಡ, ವೀರುಪಾಕ್ಷಪ್ಪ, ಸುದರ್ಶನ್, ನಾಗವೇಣಿ, ರಾಜೇಶ್, ನಾರಾಯಣಸ್ವಾಮಿ, ಮಂಜುನಾಥ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ (ದೇವನಹಳ್ಳಿ):</strong> ಹೋಬಳಿಯ ಹಲವೆಡೆ ಗ್ರಾಮಗಳಲ್ಲಿರುವ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಬುಧವಾರ ಬಮೂಲ್ ನೂತನ ನಿರ್ದೇಶಕ ಎಸ್.ಪಿ.ಮುನಿರಾಜು ಭೇಟಿ ನೀಡಿದರು.</p>.<p>ಪಟ್ಟಣದ ಸಮೀಪದ ಯಲುವಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಮಾತನಾಡಿ, ಹೈನುಗಾರಿಕೆ ಗ್ರಾಮೀಣ ಭಾಗದ ರೈತರಿಗೆ ವರದಾನವಾಗಿದ್ದು, ಆರ್ಥಿಕ ಜೀವನ ಮಟ್ಟ ಸುಧಾರಿಸುತ್ತಿದೆ. ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದಲ್ಲಿ ಯುವಕರು ಹೈನುಗಾರಿಕೆಯತ್ತ ಆಸಕ್ತಿ ತೋರಿರುವುದು ಉತ್ತಮ ಬೆಳೆವಣಿಗೆಯಾಗಿದೆ ಎಂದರು.</p>.<p>ಹೈನುಗಾರಿಕೆಯಲ್ಲಿ ತೊಡಗುವ ರೈತರಿಗೆ ಖಚಿತ ಆದಾಯ ಸಿಗಲಿದ್ದು, ನಷ್ಟ ಸಾಧ್ಯತೆ ಕಡಿಮೆ. ಒಕ್ಕೂಟದಿಂದ ಸಿಗುವ ಸೌಲಭ್ಯವನ್ನು ಹೈನುಗಾರರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ರೈತರಿಗೆ ಸಲಹೆ ನೀಡಿದರು.</p>.<p>ಇದೇ ವೇಳೆ ಸಹಕಾರಿ ಸಂಘಗಳ ಕಾರ್ಯವೈಖರಿ ಪರಿಶೀಲಿಸಿ, ಹೈನುಗಾರಿಕೆ ಮತ್ತು ಹಾಲು ಉತ್ಪಾದಕರ ಸಮಸ್ಯೆ ಆಲಿಸಿದರು.</p>.<p>ಮುಖಂಡರಾದ ಶ್ರೀನಿವಾಸ್, ಅಪ್ಪಯಣ್ಣ, ವೀರೇಗೌಡ, ವೀರುಪಾಕ್ಷಪ್ಪ, ಸುದರ್ಶನ್, ನಾಗವೇಣಿ, ರಾಜೇಶ್, ನಾರಾಯಣಸ್ವಾಮಿ, ಮಂಜುನಾಥ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>