ಅಂದು ಬೆಳಿಗ್ಗೆ 10ರಿಂದ 12ರ ಗಂಟೆಯವರೆಗೆ ನಾಮ ನಿರ್ದೇಶನ ಪ್ರಕ್ರಿಯೆ ನಡೆಯಲಿದೆ. ಮಧ್ಯಾಹ್ನ 2ಕ್ಕೆ ದೇವನಹಳ್ಳಿ ತಾಲ್ಲೂಕಿನ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತಿಯ ಎಲ್ಲ ಚುನಾಯಿತ ಸದಸ್ಯರ ವಿಶೇಷ ಸಭೆ ನಡೆಯಲಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಹಾಗೂ ಸ್ಥಾಯಿ ಸಮಿತಿ ರಚನೆಯ ಚುನಾವಣಾಧಿಕಾರಿ ವಿನುತಾರಾಣಿ ತಿಳಿಸಿದ್ದಾರೆ.