ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೌಲಭ್ಯ ಪಡೆಯುವುದು ವಿದ್ಯಾರ್ಥಿಗಳ ಹಕ್ಕು: ಜಿ.ಪಂ.ಉಪಾಧ್ಯಕ್ಷೆ

Last Updated 16 ಡಿಸೆಂಬರ್ 2019, 13:32 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಇಲ್ಲಿನ ತಾಲ್ಲೂಕು ಪಂಚಾಯಿತಿ ಸಮೀಪದ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್‌ ಸೋಮವಾರ ಭೇಟಿ ನೀಡಿ ಆಹಾರ ವಿತರಣೆ ಹಾಗೂ ಆಹಾರ ದಾಸ್ತಾನು ಪರಿಶೀಲಿಸಿ ವಿದ್ಯಾರ್ಥಿನಿಯರೊಂದಿಗೆ ಊಟ ಸೇವಿಸಿದರು.

ಸರ್ಕಾರದ ಸೌಲಭ್ಯಗಳ ಕುರಿತು ವಿದ್ಯಾರ್ಥಿಗಳಿಂದ ಮಾಹಿತಿ ಪಡೆದ ನಂತರ ಮಾತನಾಡಿ, ‘ಸರ್ಕಾರ ಶೈಕ್ಷಣಿಕ ಉದ್ದೇಶಕ್ಕಾಗಿ ಸಾಕಷ್ಟು ಹಣವನ್ನು ವೆಚ್ಚ ಮಾಡುತ್ತಿದೆ. ಇದನ್ನು ವಿದ್ಯಾರ್ಥಿಗಳಿಗೆ ತಲುಪಿಸುವ ಹೊಣೆ ಅಧಿಕಾರಿಗಳದ್ದಾಗಿದೆ. ವಿದ್ಯಾರ್ಥಿ ನಿಲಯದ ಶೈಕ್ಷಣಿಕ ಬದುಕನ್ನು ಜೀವನದಲ್ಲಿ ಸದಾ ನೆನಪಿನಲ್ಲಿ ಉಳಿಯಂತೆ ನೋಡಿಕೊಳ್ಳುವ ಹೊಣೆಗಾರಿಕೆ ವಾರ್ಡ್‌ನ್‌ಗಳ ಮೇಲಿದೆ’ ಎಂದರು.

ವಿದ್ಯಾರ್ಥಿ ನಿಲಯದಲ್ಲಿ ಕಂಪ್ಯೂಟರ್ ಕೊಠಡಿಗೆ ವಿದ್ಯುತ್ ಸೌಲಭ್ಯ ದೊರಕಿಸಿಕೊಡುವಂತೆ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರ ಗಮನಕ್ಕೆ ತಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT