ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುರಳೀಧರ ಹಾಲಪ್ಪ ಮಾತನಾಡಿ, ಕರ್ನಾಟಕದಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿಪಡಿಸಲು ನಿಗಮ ಹಲವು ಕಾರ್ಯಕ್ರಮ ಹಮ್ಮಿಕೊಂಡಿದೆ. ವೃತ್ತಿಗೆ ಬೇಕಾದ ಕೌಶಲ ವಿದ್ಯಾರ್ಥಿಗಳಿಗೆ ಕಲಿಸಲು ಶ್ರಮಿಸುತ್ತಿದೆ. ಏಳು ಲಕ್ಷ ನಿರುದ್ಯೋಗಿಗಳು ನೋಂದಣಿ ಮಾಡಿಸಿದ್ದು, ಐದು ಲಕ್ಷ ನಿರುದ್ಯೋಗಿಗಳಿಗೆ ವಿವಿಧ ತರಬೇತಿ ನೀಡಲಾಗಿದೆ. 5,600 ಮಂದಿ ಚಾಲಕರಿಗೆ ಕೆಎಸ್ಆರ್ಟಿಸಿ ತರಬೇತಿ ಶಾಲೆ ಮೂಲಕ ತರಬೇತಿ ನೀಡಲಾಗುತ್ತಿದೆ ಎಂದರು.