<p>ಆನೇಕಲ್: ಪಟ್ಟಣದ ಪುರಸಭೆಯ ಉಪಾಧ್ಯಕ್ಷರಾಗಿ ಬಿಜೆಪಿಯ ಬಿ.ಪಿ.ಮರಿಯಪ್ಪ ಅವಿರೋಧ ಆಯ್ಕೆಯಾಗಿದ್ದಾರೆ.<br /> ಪುರಸಭಾ ಉಪಾಧ್ಯಕ್ಷರಾಗಿದ್ದ ಶ್ರೀನಿವಾಸ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಬುಧವಾರ ಚುನಾವಣೆ ನಿಗದಿಯಾಗಿತ್ತು. ಬಿ.ಪಿ.ಮರಿಯಪ್ಪ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆಯಾದರು. ತಹಶೀಲ್ದಾರ್ ಎಚ್.ಎನ್.ಶಿವೇಗೌಡ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು. <br /> <br /> ಆಯ್ಕೆ ನಂತರ ಮಾತನಾಡಿದ ನೂತನ ಉಪಾಧ್ಯಕ್ಷ ಬಿ.ಪಿ.ಮರಿಯಪ್ಪ, ಪಟ್ಟಣದ ನೀರಿನ ಸಮಸ್ಯೆ ನಿವಾರಣೆಗೆ ಶ್ರಮಿಸುವುದಾಗಿ ತಿಳಿಸಿದರು. ಈ ನಿಟ್ಟಿನಲ್ಲಿ ಸಚಿವರ ಮಾರ್ಗದರ್ಶನ ಪಡೆದು ಹೆಚ್ಚಿನ ಅನುದಾನ ಬಿಡುಗಡೆಗೆ ಮನವಿ ಸಲ್ಲಿಸಲಾಗುವುದು. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು ಎಂದರು.<br /> <br /> ನೂತನ ಉಪಾಧ್ಯಕ್ಷರನ್ನು ಸಮಾಜ ಕಲ್ಯಾಣ ಸಚಿವ ಎ.ನಾರಾಯಣ ಸ್ವಾಮಿ, ಕಿಯೋನಿಕ್ಸ್ ಅಧ್ಯಕ್ಷ ಯಂಗಾರೆಡ್ಡಿ, ಬಿಜೆಪಿ ತಾಲ್ಲೂಕು ಅಧ್ಯಕ್ಷ ಎನ್.ಬಸವರಾಜು, ಅಧ್ಯಕ್ಷೆ ಉಮಾಗೋಪಿ, ಬಿ.ನಾಗರಾಜು, ಕೆ.ನಾಗರಾಜು, ಎ.ಉದಯ್ ಕುಮಾರ್, ಶ್ರೀನಿವಾಸ್, ಸಿ.ಮುನಿರಾಜು, ಡಿ.ವೆಂಕಟೇಶ್, ಪಿ.ರಾಜು, ಡಿ.ವಿ.ಮುರುಳಿ, ಶಿವರಾಮ್ ಇತರರು ಅಭಿನಂದಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಆನೇಕಲ್: ಪಟ್ಟಣದ ಪುರಸಭೆಯ ಉಪಾಧ್ಯಕ್ಷರಾಗಿ ಬಿಜೆಪಿಯ ಬಿ.ಪಿ.ಮರಿಯಪ್ಪ ಅವಿರೋಧ ಆಯ್ಕೆಯಾಗಿದ್ದಾರೆ.<br /> ಪುರಸಭಾ ಉಪಾಧ್ಯಕ್ಷರಾಗಿದ್ದ ಶ್ರೀನಿವಾಸ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಬುಧವಾರ ಚುನಾವಣೆ ನಿಗದಿಯಾಗಿತ್ತು. ಬಿ.ಪಿ.ಮರಿಯಪ್ಪ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆಯಾದರು. ತಹಶೀಲ್ದಾರ್ ಎಚ್.ಎನ್.ಶಿವೇಗೌಡ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು. <br /> <br /> ಆಯ್ಕೆ ನಂತರ ಮಾತನಾಡಿದ ನೂತನ ಉಪಾಧ್ಯಕ್ಷ ಬಿ.ಪಿ.ಮರಿಯಪ್ಪ, ಪಟ್ಟಣದ ನೀರಿನ ಸಮಸ್ಯೆ ನಿವಾರಣೆಗೆ ಶ್ರಮಿಸುವುದಾಗಿ ತಿಳಿಸಿದರು. ಈ ನಿಟ್ಟಿನಲ್ಲಿ ಸಚಿವರ ಮಾರ್ಗದರ್ಶನ ಪಡೆದು ಹೆಚ್ಚಿನ ಅನುದಾನ ಬಿಡುಗಡೆಗೆ ಮನವಿ ಸಲ್ಲಿಸಲಾಗುವುದು. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು ಎಂದರು.<br /> <br /> ನೂತನ ಉಪಾಧ್ಯಕ್ಷರನ್ನು ಸಮಾಜ ಕಲ್ಯಾಣ ಸಚಿವ ಎ.ನಾರಾಯಣ ಸ್ವಾಮಿ, ಕಿಯೋನಿಕ್ಸ್ ಅಧ್ಯಕ್ಷ ಯಂಗಾರೆಡ್ಡಿ, ಬಿಜೆಪಿ ತಾಲ್ಲೂಕು ಅಧ್ಯಕ್ಷ ಎನ್.ಬಸವರಾಜು, ಅಧ್ಯಕ್ಷೆ ಉಮಾಗೋಪಿ, ಬಿ.ನಾಗರಾಜು, ಕೆ.ನಾಗರಾಜು, ಎ.ಉದಯ್ ಕುಮಾರ್, ಶ್ರೀನಿವಾಸ್, ಸಿ.ಮುನಿರಾಜು, ಡಿ.ವೆಂಕಟೇಶ್, ಪಿ.ರಾಜು, ಡಿ.ವಿ.ಮುರುಳಿ, ಶಿವರಾಮ್ ಇತರರು ಅಭಿನಂದಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>