ಪೊಲೀಸ್ ಉಪಾಯುಕ್ತ ಎಂ.ಸಿ.ಬೂದಿಹಾಳ್ ಮಾತನಾಡಿ, ರಾಜ್ಯದಲ್ಲಿ ಐದು ಸಾವಿರಕ್ಕೂ ಹೆಚ್ಚು ಮಕ್ಕಳಲ್ಲಿ ಎಚ್.ಐ.ವಿ ಸೋಂಕು ಕಾಣಿಸಿಕೊಂಡಿರುವುದು ಕಳವಳಕಾರಿ ಸಂಗತಿ. ಉತ್ತಮ ಅಹಾರ, ದೈಹಿಕ ಚಟುವಟಿಕೆ ಹಾಗೂ ಧ್ಯಾನದಿಂದ ರೋಗದಿಂದ ನಿಯಂತ್ರಣ ಸಾಧಿಸಬಹುದು ಎಂದರು.ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಪ್ರಥಮ ಏಡ್ಸ್ ಪೀಡಿತೆ ದಿ.ವೀಣಾಧರಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.