<p><strong>ಆನೇಕಲ್:</strong>ಬನ್ನೇರುಘಟ್ಟದಲ್ಲಿ ಗ್ರಾಮ ದೇವತೆ ಮಾರಮ್ಮ ಹಾಗೂ ಚಂಪಕಧಾಮಸ್ವಾಮಿ ವಿಜಯದಶಮಿ ಉತ್ಸವ ಸಂಭ್ರಮದಿಂದ ನೆರವೇರಿತು.<br /> <br /> ಬನ್ನೇರುಘಟ್ಟ ಜೈವಿಕ ಉದ್ಯಾನದ ಆನೆ ವನರಾಜನ ಮೇಲೆ ಚಂಪಕಧಾಮಸ್ವಾಮಿ ಉತ್ಸವಮೂರ್ತಿಯನ್ನು ಹಾಗೂ ಆನೆ ಗಾಯಿತ್ರಿಯ ಮೇಲೆ ಗ್ರಾಮ ದೇವತೆ ಮಾರಮ್ಮನ ಮೂರ್ತಿಯ ಅಂಬಾರಿಯನ್ನಿಟ್ಟು ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಂಬೂಸವಾರಿ ಮಾಡಲಾಯಿತು.<br /> <br /> ಉತ್ಸವದಲ್ಲಿ ನಂದಿ ಧ್ವಜ, ಜಗ್ಗಲಿಗೆ, ಕರಗನೃತ್ಯ ಸೇರಿದಂತೆ ವಿವಿಧ ಜಾನಪದ ತಂಡಗಳು ಪ್ರದರ್ಶನ ನೀಡಿ ಮೆರುಗು ನೀಡಿದವು.<br /> <br /> ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ಬಿಎಂಟಿಸಿ ಉಪಾಧ್ಯಕ್ಷ ಹಾಗೂ ಶಾಸಕ ಎಂ.ಕೃಷ್ಣಪ್ಪ ಮಾತನಾಡಿ ಮಂಗಳೂರು ದಸರಾ ಉತ್ಸವಕ್ಕೆ ನೀಡುವಂತೆ ಬನ್ನೇರುಘಟ್ಟ ದಸರಾ ಉತ್ಸವಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವುದು. ಗ್ರಾಮೀಣ ಕ್ರೀಡೆಗಳ ಪ್ರೋತ್ಸಾಹಕ್ಕೆ ಮುಂದಿನ ವರ್ಷ ಕ್ರಮಕೈಗೊಳ್ಳಲಾಗುವುದು ಎಂದರು.<br /> <br /> ಜಿಲ್ಲಾ ಪಂಚಾಯಿತಿ ಸದಸ್ಯ ಜಯರಾಂ ಮಾತನಾಡಿ ಚಂಪಕಧಾಮಸ್ವಾಮಿ ದೇವಾಲಯದಲ್ಲಿ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕಲ್ಯಾಣಮಂಟಪ, ಅನ್ನಛತ್ರಗಳನ್ನು ನಿರ್ಮಿಸಲಾಗಿದೆ. ತಂಗುದಾಣ, ಕುಡಿಯುವ ನೀರು ಹಾಗೂ ಶೌಚಾಲಯ ಮತ್ತಿತರ ಮೂಲ ಸೌಕರ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್:</strong>ಬನ್ನೇರುಘಟ್ಟದಲ್ಲಿ ಗ್ರಾಮ ದೇವತೆ ಮಾರಮ್ಮ ಹಾಗೂ ಚಂಪಕಧಾಮಸ್ವಾಮಿ ವಿಜಯದಶಮಿ ಉತ್ಸವ ಸಂಭ್ರಮದಿಂದ ನೆರವೇರಿತು.<br /> <br /> ಬನ್ನೇರುಘಟ್ಟ ಜೈವಿಕ ಉದ್ಯಾನದ ಆನೆ ವನರಾಜನ ಮೇಲೆ ಚಂಪಕಧಾಮಸ್ವಾಮಿ ಉತ್ಸವಮೂರ್ತಿಯನ್ನು ಹಾಗೂ ಆನೆ ಗಾಯಿತ್ರಿಯ ಮೇಲೆ ಗ್ರಾಮ ದೇವತೆ ಮಾರಮ್ಮನ ಮೂರ್ತಿಯ ಅಂಬಾರಿಯನ್ನಿಟ್ಟು ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಂಬೂಸವಾರಿ ಮಾಡಲಾಯಿತು.<br /> <br /> ಉತ್ಸವದಲ್ಲಿ ನಂದಿ ಧ್ವಜ, ಜಗ್ಗಲಿಗೆ, ಕರಗನೃತ್ಯ ಸೇರಿದಂತೆ ವಿವಿಧ ಜಾನಪದ ತಂಡಗಳು ಪ್ರದರ್ಶನ ನೀಡಿ ಮೆರುಗು ನೀಡಿದವು.<br /> <br /> ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ಬಿಎಂಟಿಸಿ ಉಪಾಧ್ಯಕ್ಷ ಹಾಗೂ ಶಾಸಕ ಎಂ.ಕೃಷ್ಣಪ್ಪ ಮಾತನಾಡಿ ಮಂಗಳೂರು ದಸರಾ ಉತ್ಸವಕ್ಕೆ ನೀಡುವಂತೆ ಬನ್ನೇರುಘಟ್ಟ ದಸರಾ ಉತ್ಸವಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವುದು. ಗ್ರಾಮೀಣ ಕ್ರೀಡೆಗಳ ಪ್ರೋತ್ಸಾಹಕ್ಕೆ ಮುಂದಿನ ವರ್ಷ ಕ್ರಮಕೈಗೊಳ್ಳಲಾಗುವುದು ಎಂದರು.<br /> <br /> ಜಿಲ್ಲಾ ಪಂಚಾಯಿತಿ ಸದಸ್ಯ ಜಯರಾಂ ಮಾತನಾಡಿ ಚಂಪಕಧಾಮಸ್ವಾಮಿ ದೇವಾಲಯದಲ್ಲಿ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕಲ್ಯಾಣಮಂಟಪ, ಅನ್ನಛತ್ರಗಳನ್ನು ನಿರ್ಮಿಸಲಾಗಿದೆ. ತಂಗುದಾಣ, ಕುಡಿಯುವ ನೀರು ಹಾಗೂ ಶೌಚಾಲಯ ಮತ್ತಿತರ ಮೂಲ ಸೌಕರ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>