<p>ಆನೇಕಲ್ : ಇಲ್ಲಿನ ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾಗಿ ಬೊಮ್ಮಸಂದ್ರ ಕ್ಷೇತ್ರದ ಬಿಜೆಪಿ ಸದಸ್ಯೆ ತೇಜಶ್ರೀ ನಟರಾಜ್ ಮತ್ತು ಉಪಾಧ್ಯಕ್ಷರಾಗಿ ವೀರಸಂದ್ರ ಕ್ಷೇತ್ರದ ಶ್ರೀನಿವಾಸರೆಡ್ಡಿ ಶುಕ್ರವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು. <br /> <br /> 27 ಸದಸ್ಯ ಬಲದ ತಾಲ್ಲೂಕು ಪಂಚಾಯಿತಿಯಲ್ಲಿ ಬಿಜೆಪಿಯ 18, ಕಾಂಗ್ರೆಸ್ನ 7 ಮಂದಿ ಹಾಗೂ ಜೆ.ಡಿ.ಎಸ್ 2 ಸದಸ್ಯ ಬಲ ಹೊಂದಿದೆ. ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಅಭಿನಂದಿಸಿ ಸಮಾಜ ಕಲ್ಯಾಣ ಸಚಿವ ಎ.ನಾರಾಯಣಸ್ವಾಮಿ ಮಾತನಾಡಿ ಆನೇಕಲ್ ತಾಲ್ಲೂಕು ಪಂಚಾಯಿತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಅವಿರೋಧ ಆಯ್ಕೆಗೆ ಸಹಕರಿಸಿದ ಸದಸ್ಯರನ್ನು ಅಭಿನಂದಿಸಿದರು. <br /> <br /> ತಾಲ್ಲೂಕು ಪಂಚಾಯಿತಿಗಳು ನಿಷ್ಕ್ರಿಯವಾಗಿದ್ದವು. ಇವುಗಳಿಗೆ ಚೈತನ್ಯ ನೀಡುವ ಸಲುವಾಗಿ ಮುಖ್ಯಮಂತ್ರಿಗಳು ಪ್ರತಿ ತಾಲ್ಲೂಕು ಪಂಚಾಯಿತಿಗೆ 1 ಕೋಟಿ ಅನುದಾನ ನೀಡಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸೂಚಿಸಿದ್ದಾರೆ. <br /> <br /> ತಾಲ್ಲೂಕಿಗೆ 5 ಕೋಟಿ ವಿಶೇಷ ಅನುದಾನವನ್ನು ತಂದು ಪ.ಜಾ ಮತ್ತು ಪ.ವರ್ಗದ ಕಾಲೋನಿಗಳಲ್ಲಿ ಸಿಮೆಂಟ್ ರಸ್ತೆ ನಿರ್ಮಿಸಲು ಕ್ರಮಕೈಗೊಳ್ಳಲಾಗುವುದು ಎಂದರು. ಕಿಯೋನಿಕ್ಸ್ ಅಧ್ಯಕ್ಷ ಎಂ.ಯಂಗಾರೆಡ್ಡಿ, ತಾಲ್ಲೂಕು ಬಿಜೆಪಿ ಅಧ್ಯಕ್ಷ ಎನ್.ಬಸವರಾಜು, ಮಾಜಿ ಅಧ್ಯಕ್ಷ ಕೆ.ಶಿವಪ್ಪ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸೋಮಶೇಖರರೆಡ್ಡಿ ಮತ್ತಿತರರು ಹಾಜರಿದ್ದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಆನೇಕಲ್ : ಇಲ್ಲಿನ ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾಗಿ ಬೊಮ್ಮಸಂದ್ರ ಕ್ಷೇತ್ರದ ಬಿಜೆಪಿ ಸದಸ್ಯೆ ತೇಜಶ್ರೀ ನಟರಾಜ್ ಮತ್ತು ಉಪಾಧ್ಯಕ್ಷರಾಗಿ ವೀರಸಂದ್ರ ಕ್ಷೇತ್ರದ ಶ್ರೀನಿವಾಸರೆಡ್ಡಿ ಶುಕ್ರವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು. <br /> <br /> 27 ಸದಸ್ಯ ಬಲದ ತಾಲ್ಲೂಕು ಪಂಚಾಯಿತಿಯಲ್ಲಿ ಬಿಜೆಪಿಯ 18, ಕಾಂಗ್ರೆಸ್ನ 7 ಮಂದಿ ಹಾಗೂ ಜೆ.ಡಿ.ಎಸ್ 2 ಸದಸ್ಯ ಬಲ ಹೊಂದಿದೆ. ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಅಭಿನಂದಿಸಿ ಸಮಾಜ ಕಲ್ಯಾಣ ಸಚಿವ ಎ.ನಾರಾಯಣಸ್ವಾಮಿ ಮಾತನಾಡಿ ಆನೇಕಲ್ ತಾಲ್ಲೂಕು ಪಂಚಾಯಿತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಅವಿರೋಧ ಆಯ್ಕೆಗೆ ಸಹಕರಿಸಿದ ಸದಸ್ಯರನ್ನು ಅಭಿನಂದಿಸಿದರು. <br /> <br /> ತಾಲ್ಲೂಕು ಪಂಚಾಯಿತಿಗಳು ನಿಷ್ಕ್ರಿಯವಾಗಿದ್ದವು. ಇವುಗಳಿಗೆ ಚೈತನ್ಯ ನೀಡುವ ಸಲುವಾಗಿ ಮುಖ್ಯಮಂತ್ರಿಗಳು ಪ್ರತಿ ತಾಲ್ಲೂಕು ಪಂಚಾಯಿತಿಗೆ 1 ಕೋಟಿ ಅನುದಾನ ನೀಡಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸೂಚಿಸಿದ್ದಾರೆ. <br /> <br /> ತಾಲ್ಲೂಕಿಗೆ 5 ಕೋಟಿ ವಿಶೇಷ ಅನುದಾನವನ್ನು ತಂದು ಪ.ಜಾ ಮತ್ತು ಪ.ವರ್ಗದ ಕಾಲೋನಿಗಳಲ್ಲಿ ಸಿಮೆಂಟ್ ರಸ್ತೆ ನಿರ್ಮಿಸಲು ಕ್ರಮಕೈಗೊಳ್ಳಲಾಗುವುದು ಎಂದರು. ಕಿಯೋನಿಕ್ಸ್ ಅಧ್ಯಕ್ಷ ಎಂ.ಯಂಗಾರೆಡ್ಡಿ, ತಾಲ್ಲೂಕು ಬಿಜೆಪಿ ಅಧ್ಯಕ್ಷ ಎನ್.ಬಸವರಾಜು, ಮಾಜಿ ಅಧ್ಯಕ್ಷ ಕೆ.ಶಿವಪ್ಪ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸೋಮಶೇಖರರೆಡ್ಡಿ ಮತ್ತಿತರರು ಹಾಜರಿದ್ದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>