<p>ವಿಜಯಪುರ: ದೇವನಹಳ್ಳಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೇಂದ್ರವನ್ನಾಗಿ ಘೋಷಿಬೇಕೆಂದು ಇಲ್ಲಿ ನಡೆದ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಒತ್ತಾಯಿಸಲಾಯಿತು.<br /> <br /> ಸಮೀಪದ ಯಲಿಯೂರು ಗ್ರಾಮ ಪಂಚಾಯ್ತಿ ಆವರಣದಲ್ಲಿ ನಡೆದ ದೇವನಹಳ್ಳಿಯ ೨೦ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಈ ಕುರಿತು ಒಕ್ಕೊರಲ ಹಕ್ಕೊತ್ತಾಯ ಕೇಳಿಬಂತು.<br /> <br /> ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ.ವಿ.ನಾಗೇಶ್ ಬೆಟ್ಟಕೋಟೆ ಅವರು, ‘ಆಂಗ್ಲ ಭಾಷೆಯ ಬಳಕೆಯಿಂದ ಮಾತ್ರವೇ ಅಭಿವೃದ್ಧಿ ಸಾಧ್ಯ ಎಂಬುದು ಸುಳ್ಳು’ ಎಂದು ಹೇಳಿದರು.<br /> <br /> ‘ಭಾಷೆಯ ಜೊತೆಗೆ ಪಾಶ್ಚಿಮಾತ್ಯ ಸಂಸ್ಕೃತಿಯನ್ನು ಅನುಕರಣೆ ಮಾಡುತ್ತಿರುವುದು ಸರಿಯಲ್ಲ’ ಎಂದು ಅವರು ತಿಳಿಸಿದರು.<br /> ದೇವನಹಳ್ಳಿಯಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಉದ್ದೇಶದಿಂದ ರೈತರ ಜಮೀನನ್ನು ಒತ್ತುವರಿ ಮಾಡಿ ಅವರಿಗೆ ಅನ್ಯಾಯ ಮಾಡಲಾಗಿದೆ. ಸರ್ಕಾರ ಕೂಡಲೇ ರೈತ ಕುಟುಂಬದ ಒಬ್ಬರಿಗೆ ಸರ್ಕಾರಿ ಕೆಲಸ ನೀಡಲಿ’ ಎಂದು ಒತ್ತಾಯಿಸಿದರು.<br /> <br /> ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಶಾಸಕ ಪಿಳ್ಳಮುನಿಶ್ಯಾಮಪ್ಪ, ‘ಸರ್ಕಾರಿ ಸವಲತ್ತುಗಳು ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುತ್ತಿಲ್ಲ. ಶಾಶ್ವತ ನೀರಾವರಿ ಯೋಜನೆ ರೂಪಿಸುವಲ್ಲಿ ಸರ್ಕಾರದ ಇಚ್ಛಾಶಕ್ತಿಯ ಕೊರತೆ ಕಂಡುಬರುತ್ತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.<br /> <br /> ಜಿಲ್ಲಾ ಕಸಾಪ ಅಧ್ಯಕ್ಷ ಹುಲಿಕಲ್ ನಟರಾಜ್ ಮಾತನಾಡಿ, ‘ಸರ್ಕಾರಿ ಶಾಲೆ-ಗಳು ತಮ್ಮ ಅಸ್ತಿತ್ವ ಕಳೆದುಕೊಳ್ಳುವ ಸ್ಥಿತಿ ತಲುಪಿವೆ. ಭಾಷಾ ವಿಷಯ ಕಗ್ಗಂಟಾಗಿ ಒಂದೆಡೆ ಅಸ್ತಿತ್ವ ಕಳೆದುಕೊಳ್ಳುವಂತಾದರೆ ಖಾಸಗಿ ಶಾಲೆಗಳು ಶಿಕ್ಷಣ ನೀಡುವ ಮಾರುಕಟ್ಟೆಯ ಸರಕುಗಳಾಂತಾಗಿವೆ’ ಎಂದು ಟೀಕಿಸಿದರು.<br /> <br /> ತಾಲ್ಲೂಕು ಕಸಾಪ ಅಧ್ಯಕ್ಷ ಎನ್.ರಾಜಗೋಪಾಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಕಸಾಪ ನಿಕಟ ಪೂರ್ವ ಅಧ್ಯಕ್ಷ ಚಿ.ಮಾ.ಸುಧಾಕರ್ ಪ್ರಾಸ್ತಾವಿಕ ಮಾತನಾಡಿದರು.<br /> <br /> ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ ಗಣ್ಯರನ್ನು ಸಮ್ಮೇಳನದಲ್ಲಿ ವಿಶೇಷವಾಗಿ ಸನ್ಮಾನಿಸಲಾಯಿತು.<br /> ‘ಹೂಮನಸಿನ ಹೊಂಗನಸು’ ಕವನ ಸಂಕಲನವನ್ನು ತಹಶೀಲ್ದಾರ್ ವೆಂಕಟರಾಜು ಬಿಡುಗಡೆ ಮಾಡಿದರು. ಸಮ್ಮೇಳನದ ಪ್ರಯುಕ್ತ ‘ರೇಷ್ಮೆ ಊರಲಿ ಸಾಹಿತ್ಯ ತೋರಣ ಸ್ಮರಣ ಸಂಚಿಕೆ ೨೦೧೪’ನ್ನು ಜಿಲ್ಲಾ ಕಸಾಪ ಅಧ್ಯಕ್ಷ ಹುಲಿಕಲ್ ನಟರಾಜ್ ಬಿಡುಗಡೆ ಮಾಡಿದರು.<br /> <br /> ಪುಸ್ತಕ ಹಾಗೂ ಕೃಷಿಗೆ ಸಂಬಂಧಿಸಿದ ಮಳಿಗೆಗಳನ್ನು ದೇವನಹಳ್ಳಿ ತಾ.ಪಂ. ಅಧ್ಯಕ್ಷೆ ರಾಧಿಕಾ ತ್ಯಾಗರಾಜು ಉದ್ಘಾಟಿಸಿದರು. ಶಿಕ್ಷಕ ಮುದ್ದಪ್ಪ ಚಿತ್ರಕಲಾ ಪ್ರದರ್ಶನ ಏರ್ಪಡಿಸಿದ್ದರು. ಸ್ತ್ರೀಶಕ್ತಿ ಸಂಘದ ಮಹಿಳೆಯರು ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ತೆರೆದಿದ್ದರು.<br /> <br /> ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಸದಸ್ಯೆ ನಳಿನಾ ಮುನಿರಾಜು ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಚಾಲನೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಡೊಳ್ಳು ಕುಣಿತ, ಕಂಸಾಳೆ ನೃತ್ಯ, ರಾಜ್ಯ ಪ್ರಶಸ್ತಿ ವಿಜೇತ ಜಂಗಮಕೋಟೆ ಮರಿಯಪ್ಪ ತಂಡದವರ ವೀರಗಾಸೆ, ಶಾಲಾ ಮಕ್ಕಳು ಪೂರ್ಣ ಕುಂಭದೊಂದಿಗೆ ಗ್ರಾಮದ ಮುಖ್ಯ ಬೀದಿಗಳಲ್ಲಿ ಸಮ್ಮೇಳನಾಧ್ಯಕ್ಷ ನಾಗೇಶ್ ಬೆಟ್ಟಕೋಟೆ ಅವರ ಮೆರವಣಿಗೆ ನಡೆಸಿದರು.<br /> <br /> ಹಿಂದಿನ ಸಮ್ಮೇಳನಾಧ್ಯಕ್ಷ ಜಿ.ವಿಜಯಕುಮಾರ್, ಹಾಲಿ ಸಮ್ಮೇಳನಾಧ್ಯಕ್ಷ ನಾಗೇಶ್ ಬೆಟ್ಟಕೋಟೆ ಅವರಿಗೆ ಕನ್ನಡ ಧ್ವಜ ಹಸ್ತಾಂತರಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಮುನಿರಾಜು, ಯಲಿಯೂರು ಗ್ರಾಮ ಪಂಚಾಯ್ತಿ ಅಧ್ಯಕ್ಷ ಮುನಿಯಪ್ಪ, ಉಪಾಧ್ಯಕ್ಷೆ ರತ್ನಮ್ಮ, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಆನಂದ ಕುಮಾರ್, ವಿಜಯಪುರ ಪುರಸಭೆ ಮುಖ್ಯಾಧಿಕಾರಿ ಮಾರುತಿ ಶಂಕರ್ ಮತ್ತಿತರ ಅಧಿಕಾರಿಗಳು, ಮುಖಂಡರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.<br /> <br /> ಸಂತೃಪ್ತ ಭೋಜನ: ಸಮ್ಮೇಳನದ ಉಪಾಹಾರ ಹಾಗೂ ಊಟದ ವ್ಯವಸ್ಥೆಯನ್ನು ಯಲಿಯೂರು ಗ್ರಾಮ ಪಂಚಾಯ್ತಿ ವಹಿಸಿಕೊಂಡಿತ್ತು.<br /> ಸಾಹಿತ್ಯಾಭಿಮಾನಿಗಳು ಕೇಸರಿ ಬಾತ್, ಪುಲಾವು, ಮುದ್ದೆ, ಬೇಳೆ ಸಾರು, ಪೂರಿ, ಸಾಗು, ಅನ್ನ, ರಸಂ, ಮೊಸರಿನ ರುಚಿ ಸವಿದರು.<br /> ಸ್ವಾಗತ ಸಮಿತಿಯ ಕೋಶಾಧ್ಯಕ್ಷ ತ್ಯಾಗರಾಜು ಸ್ವಾಗತಿಸಿದರು. ಸಾಂಸ್ಕೃತಿಕ ತಂಡದ ಎಂ.ವಿ.ನಾಯ್ಡು ಮಹಾತ್ಮಾಂಜನೇಯ, ನಾರಾಯಣ ಸ್ವಾಮಿ ಇತರರು ನಾಡಗೀತೆ, ರೈತಗೀತೆ ಇನ್ನಿತರೆ ಕನ್ನಡಗೀತೆಗಳನ್ನು ಹಾಡಿದರು. ರಂಗಭೂಮಿ ಕಲಾವಿದ ದೇವರಾಜು ನಿರೂಪಿಸಿದರು. ಚನ್ನರಾಯಪಟ್ಟಣ ಹೋಬಳಿ ಕಸಾಪ ಅಧ್ಯಕ್ಷ ವೈ.ಎ.ದೇವರಾಜು ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ: ದೇವನಹಳ್ಳಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೇಂದ್ರವನ್ನಾಗಿ ಘೋಷಿಬೇಕೆಂದು ಇಲ್ಲಿ ನಡೆದ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಒತ್ತಾಯಿಸಲಾಯಿತು.<br /> <br /> ಸಮೀಪದ ಯಲಿಯೂರು ಗ್ರಾಮ ಪಂಚಾಯ್ತಿ ಆವರಣದಲ್ಲಿ ನಡೆದ ದೇವನಹಳ್ಳಿಯ ೨೦ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಈ ಕುರಿತು ಒಕ್ಕೊರಲ ಹಕ್ಕೊತ್ತಾಯ ಕೇಳಿಬಂತು.<br /> <br /> ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ.ವಿ.ನಾಗೇಶ್ ಬೆಟ್ಟಕೋಟೆ ಅವರು, ‘ಆಂಗ್ಲ ಭಾಷೆಯ ಬಳಕೆಯಿಂದ ಮಾತ್ರವೇ ಅಭಿವೃದ್ಧಿ ಸಾಧ್ಯ ಎಂಬುದು ಸುಳ್ಳು’ ಎಂದು ಹೇಳಿದರು.<br /> <br /> ‘ಭಾಷೆಯ ಜೊತೆಗೆ ಪಾಶ್ಚಿಮಾತ್ಯ ಸಂಸ್ಕೃತಿಯನ್ನು ಅನುಕರಣೆ ಮಾಡುತ್ತಿರುವುದು ಸರಿಯಲ್ಲ’ ಎಂದು ಅವರು ತಿಳಿಸಿದರು.<br /> ದೇವನಹಳ್ಳಿಯಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಉದ್ದೇಶದಿಂದ ರೈತರ ಜಮೀನನ್ನು ಒತ್ತುವರಿ ಮಾಡಿ ಅವರಿಗೆ ಅನ್ಯಾಯ ಮಾಡಲಾಗಿದೆ. ಸರ್ಕಾರ ಕೂಡಲೇ ರೈತ ಕುಟುಂಬದ ಒಬ್ಬರಿಗೆ ಸರ್ಕಾರಿ ಕೆಲಸ ನೀಡಲಿ’ ಎಂದು ಒತ್ತಾಯಿಸಿದರು.<br /> <br /> ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಶಾಸಕ ಪಿಳ್ಳಮುನಿಶ್ಯಾಮಪ್ಪ, ‘ಸರ್ಕಾರಿ ಸವಲತ್ತುಗಳು ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುತ್ತಿಲ್ಲ. ಶಾಶ್ವತ ನೀರಾವರಿ ಯೋಜನೆ ರೂಪಿಸುವಲ್ಲಿ ಸರ್ಕಾರದ ಇಚ್ಛಾಶಕ್ತಿಯ ಕೊರತೆ ಕಂಡುಬರುತ್ತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.<br /> <br /> ಜಿಲ್ಲಾ ಕಸಾಪ ಅಧ್ಯಕ್ಷ ಹುಲಿಕಲ್ ನಟರಾಜ್ ಮಾತನಾಡಿ, ‘ಸರ್ಕಾರಿ ಶಾಲೆ-ಗಳು ತಮ್ಮ ಅಸ್ತಿತ್ವ ಕಳೆದುಕೊಳ್ಳುವ ಸ್ಥಿತಿ ತಲುಪಿವೆ. ಭಾಷಾ ವಿಷಯ ಕಗ್ಗಂಟಾಗಿ ಒಂದೆಡೆ ಅಸ್ತಿತ್ವ ಕಳೆದುಕೊಳ್ಳುವಂತಾದರೆ ಖಾಸಗಿ ಶಾಲೆಗಳು ಶಿಕ್ಷಣ ನೀಡುವ ಮಾರುಕಟ್ಟೆಯ ಸರಕುಗಳಾಂತಾಗಿವೆ’ ಎಂದು ಟೀಕಿಸಿದರು.<br /> <br /> ತಾಲ್ಲೂಕು ಕಸಾಪ ಅಧ್ಯಕ್ಷ ಎನ್.ರಾಜಗೋಪಾಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಕಸಾಪ ನಿಕಟ ಪೂರ್ವ ಅಧ್ಯಕ್ಷ ಚಿ.ಮಾ.ಸುಧಾಕರ್ ಪ್ರಾಸ್ತಾವಿಕ ಮಾತನಾಡಿದರು.<br /> <br /> ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ ಗಣ್ಯರನ್ನು ಸಮ್ಮೇಳನದಲ್ಲಿ ವಿಶೇಷವಾಗಿ ಸನ್ಮಾನಿಸಲಾಯಿತು.<br /> ‘ಹೂಮನಸಿನ ಹೊಂಗನಸು’ ಕವನ ಸಂಕಲನವನ್ನು ತಹಶೀಲ್ದಾರ್ ವೆಂಕಟರಾಜು ಬಿಡುಗಡೆ ಮಾಡಿದರು. ಸಮ್ಮೇಳನದ ಪ್ರಯುಕ್ತ ‘ರೇಷ್ಮೆ ಊರಲಿ ಸಾಹಿತ್ಯ ತೋರಣ ಸ್ಮರಣ ಸಂಚಿಕೆ ೨೦೧೪’ನ್ನು ಜಿಲ್ಲಾ ಕಸಾಪ ಅಧ್ಯಕ್ಷ ಹುಲಿಕಲ್ ನಟರಾಜ್ ಬಿಡುಗಡೆ ಮಾಡಿದರು.<br /> <br /> ಪುಸ್ತಕ ಹಾಗೂ ಕೃಷಿಗೆ ಸಂಬಂಧಿಸಿದ ಮಳಿಗೆಗಳನ್ನು ದೇವನಹಳ್ಳಿ ತಾ.ಪಂ. ಅಧ್ಯಕ್ಷೆ ರಾಧಿಕಾ ತ್ಯಾಗರಾಜು ಉದ್ಘಾಟಿಸಿದರು. ಶಿಕ್ಷಕ ಮುದ್ದಪ್ಪ ಚಿತ್ರಕಲಾ ಪ್ರದರ್ಶನ ಏರ್ಪಡಿಸಿದ್ದರು. ಸ್ತ್ರೀಶಕ್ತಿ ಸಂಘದ ಮಹಿಳೆಯರು ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ತೆರೆದಿದ್ದರು.<br /> <br /> ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಸದಸ್ಯೆ ನಳಿನಾ ಮುನಿರಾಜು ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಚಾಲನೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಡೊಳ್ಳು ಕುಣಿತ, ಕಂಸಾಳೆ ನೃತ್ಯ, ರಾಜ್ಯ ಪ್ರಶಸ್ತಿ ವಿಜೇತ ಜಂಗಮಕೋಟೆ ಮರಿಯಪ್ಪ ತಂಡದವರ ವೀರಗಾಸೆ, ಶಾಲಾ ಮಕ್ಕಳು ಪೂರ್ಣ ಕುಂಭದೊಂದಿಗೆ ಗ್ರಾಮದ ಮುಖ್ಯ ಬೀದಿಗಳಲ್ಲಿ ಸಮ್ಮೇಳನಾಧ್ಯಕ್ಷ ನಾಗೇಶ್ ಬೆಟ್ಟಕೋಟೆ ಅವರ ಮೆರವಣಿಗೆ ನಡೆಸಿದರು.<br /> <br /> ಹಿಂದಿನ ಸಮ್ಮೇಳನಾಧ್ಯಕ್ಷ ಜಿ.ವಿಜಯಕುಮಾರ್, ಹಾಲಿ ಸಮ್ಮೇಳನಾಧ್ಯಕ್ಷ ನಾಗೇಶ್ ಬೆಟ್ಟಕೋಟೆ ಅವರಿಗೆ ಕನ್ನಡ ಧ್ವಜ ಹಸ್ತಾಂತರಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಮುನಿರಾಜು, ಯಲಿಯೂರು ಗ್ರಾಮ ಪಂಚಾಯ್ತಿ ಅಧ್ಯಕ್ಷ ಮುನಿಯಪ್ಪ, ಉಪಾಧ್ಯಕ್ಷೆ ರತ್ನಮ್ಮ, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಆನಂದ ಕುಮಾರ್, ವಿಜಯಪುರ ಪುರಸಭೆ ಮುಖ್ಯಾಧಿಕಾರಿ ಮಾರುತಿ ಶಂಕರ್ ಮತ್ತಿತರ ಅಧಿಕಾರಿಗಳು, ಮುಖಂಡರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.<br /> <br /> ಸಂತೃಪ್ತ ಭೋಜನ: ಸಮ್ಮೇಳನದ ಉಪಾಹಾರ ಹಾಗೂ ಊಟದ ವ್ಯವಸ್ಥೆಯನ್ನು ಯಲಿಯೂರು ಗ್ರಾಮ ಪಂಚಾಯ್ತಿ ವಹಿಸಿಕೊಂಡಿತ್ತು.<br /> ಸಾಹಿತ್ಯಾಭಿಮಾನಿಗಳು ಕೇಸರಿ ಬಾತ್, ಪುಲಾವು, ಮುದ್ದೆ, ಬೇಳೆ ಸಾರು, ಪೂರಿ, ಸಾಗು, ಅನ್ನ, ರಸಂ, ಮೊಸರಿನ ರುಚಿ ಸವಿದರು.<br /> ಸ್ವಾಗತ ಸಮಿತಿಯ ಕೋಶಾಧ್ಯಕ್ಷ ತ್ಯಾಗರಾಜು ಸ್ವಾಗತಿಸಿದರು. ಸಾಂಸ್ಕೃತಿಕ ತಂಡದ ಎಂ.ವಿ.ನಾಯ್ಡು ಮಹಾತ್ಮಾಂಜನೇಯ, ನಾರಾಯಣ ಸ್ವಾಮಿ ಇತರರು ನಾಡಗೀತೆ, ರೈತಗೀತೆ ಇನ್ನಿತರೆ ಕನ್ನಡಗೀತೆಗಳನ್ನು ಹಾಡಿದರು. ರಂಗಭೂಮಿ ಕಲಾವಿದ ದೇವರಾಜು ನಿರೂಪಿಸಿದರು. ಚನ್ನರಾಯಪಟ್ಟಣ ಹೋಬಳಿ ಕಸಾಪ ಅಧ್ಯಕ್ಷ ವೈ.ಎ.ದೇವರಾಜು ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>