ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತೊಂದರೆಗೆ ಒಳಗಾಗಿರುವ ಸರ್ಕಾರಿ ನೌಕರರಿಗೆ 2017ರ ಜನವರಿಯಿಂದ ಅನ್ವಯವಾಗುವಂತೆ ಶೇ 30ರಷ್ಟು ಮಧ್ಯಂತರ ಪರಿಹಾರ ಘೋಷಿಸಬೇಕು ಎಂದು ಆಗ್ರಹಿಸಿದರು.
ಕಲಬುರ್ಗಿ ವಿಭಾಗದ ಜನರಿಗೆ ಅನುಕೂಲ ಕಲ್ಪಿಸಲು ಕಲಬುರ್ಗಿ ವಿಭಾಗಕ್ಕೆ ಮಂಜೂರಾಗಿರುವ ಕರ್ನಾಟಕ ಆಡಳಿತ ನ್ಯಾಯಮಂಡಳಿ (ಕೆಎಟಿ) ಪೀಠವನ್ನು ಕೂಡಲೇ ಆರಂಭಿಸಬೇಕು ಎಂದು ಒತ್ತಾಯಿಸಿದರು.
ನೌಕರರಿಗೆ ಸೇವಾ ಭದ್ರತೆ ಒದಗಿಸಬೇಕು. ಕನಿಷ್ಠ ವೇತನ ಇಲ್ಲದೆ ನೌಕರರು ಪರದಾಡುವಂತಾಗಿದೆ. ಸಮರ್ಪಕ ವೇತನ ಇಲ್ಲದೆ ನೌಕರರು ಕುಟುಂಬ ನಿರ್ವಹಣೆಗೆ ತೊಂದರೆ ಎದುರಿಸುವಂತಾಗಿದೆ. ಹೀಗಾಗಿ ಅವರಿಗೆ ಸೇವಾ ಭದ್ರತೆ ಒದಗಿಸಿ, ಸಮರ್ಪಕ ವೇತನ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಒಕ್ಕೂಟದ ಗೌರವ ಅಧ್ಯಕ್ಷ ಕೆ.ಪ್ರಕಾಶ, ಅಧ್ಯಕ್ಷ ಶರಣಗೌಡ ಪಾಟೀಲ, ಪ್ರಧಾನ ಕಾರ್ಯದರ್ಶಿ ಡಾ. ಶರಣಪ್ಪ ಸೈದಾಪುರ, ಖಜಾಂಚಿ ಬಿ.ಎಸ್.ಬಾಗೋಡಿ ಸೇರಿದಂತೆ ವಿವಿಧೆಡೆಯ ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.