<p><strong>ಆನೇಕಲ್ :</strong> ಆನೇಕಲ್ ವಿಧಾನಸಭಾ ಕ್ಷೇತ್ರದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಪ್ರಚಾರ ಮಾಡುವ ಮೂಲಕ ಬಿಜೆಪಿಯವರ ಸುಳ್ಳು ಅಪಾದನೆಗಳಿಗೆ ತಕ್ಕ ಉತ್ತರ ನೀಡಬೇಕು ಎಂದು ಶಾಸಕ ಬಿ.ಶಿವಣ್ಣ ಹೇಳಿದರು.<br /> <br /> ಅವರು ತಾಲ್ಲೂಕಿನ ಬೊಮ್ಮಸಂದ್ರದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ರೆಡ್ಡಿ ಜನಾಂಗದ ಮುಖಂಡರಿಂದ ಮನವಿ ಪತ್ರ ಸ್ವೀಕರಿಸಿ ಮಾತನಾಡಿದರು.<br /> ಹಲವಾರು ಅಭಿವೃದ್ಧಿ ಕಾರ್ಯಗಳು ನಡೆದಿದ್ದರೂ ಸಹ ಅದನ್ನು ಪ್ರಚಾರ ಮಾಡುವಲ್ಲಿ ಹಾಗೂ ಸಂಘಟನೆಯ ಕೊರತೆ ಪಕ್ಷದಲ್ಲಿದೆ.</p>.<p>ಇದನ್ನು ಸರಿಪಡಿಸುವ ಸಲುವಾಗಿ ಬ್ಲಾಕ್ ಕಾಂಗ್ರೆಸ್ ಹಾಗೂ ಇತರ ಘಟಕಗಳನ್ನು ಸಹ ಪುನರ್ರಚಿಸಿ ಪ್ರಾಮಾಣಿಕ ಕಾರ್ಯಕರ್ತರಿಗೆ ಅವಕಾಶಗಳನ್ನು ಕಲ್ಪಿಸಿಕೊಡಲಾಗುವುದು. ಬನಹಳ್ಳಿಯ ರಾಮಚಂದ್ರರೆಡ್ಡಿ ಅವರನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಮಾಡುವಂತೆ ಮನವಿ ಸಲ್ಲಿಸಲಾಗಿದೆ.</p>.<p>ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಂಸದ ಡಿ.ಕೆ.ಸುರೇಶ್ ಹಾಗೂ ಹೈಕಮಾಂಡ್ನೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.<br /> <br /> ಕಾಂಗ್ರೆಸ್ ಮುಖಂಡ ತಿಮ್ಮರಾಯರೆಡ್ಡಿ ಮಾತನಾಡಿ ಬ್ಲಾಕ್ ಕಾಂಗ್ರೆಸ್ ಸಮಿತಿಯನ್ನು ಪುನರ್ರಚನೆ ಮಾಡಬೇಕು. ಕಾರ್ಯಕರ್ತರೊಂದಿಗೆ ನಿರಂತರ ಸಂಪರ್ಕ ಇರುವಂತಹ ವ್ಯಕ್ತಿಗಳನ್ನು ನೇಮಕ ಮಾಡಿ ಪಕ್ಷದ ವರ್ಚಸ್ಸನ್ನು ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಸಂವಹನ ಕೊರತೆಯನ್ನು ನಿವಾರಿಸಿ ಸಮರ್ಥವಾಗಿ ಕಾರ್ಯಕರ್ತರನ್ನು ಕೊಂಡೊಯ್ಯುವ ಹಾಗೂ ಬಿಜೆಪಿಗೆ ತಕ್ಕ ಉತ್ತರ ನೀಡುವ ಮತ್ತು ರೆಡ್ಡಿ ಜನಾಂಗವನ್ನು ಸಂಘಟಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದರು.<br /> <br /> ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೃಷ್ಣಾರೆಡ್ಡಿ ಮಾತನಾಡಿ ಪಕ್ಷದ ಸಂಘಟನೆಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕು. ಓಲೈಸುವವರಿಂದ ಯಾವುದೇ ಉಪಯೋಗವಿಲ್ಲ. ಪಕ್ಷಕ್ಕಾಗಿ ದುಡಿಯುವ ಪ್ರಾಮಾಣಿಕ ವ್ಯಕ್ತಿಗಳನ್ನು ಗುರುತಿಸಿ ಅವಕಾಶ ನೀಡುವಂತೆ ಒತ್ತಾಯಿಸಿದರು.<br /> <br /> ಪದವೀಧರ ವೇದಿಕೆಯ ಅಧ್ಯಕ್ಷ ಬನಹಳ್ಳಿ ರಾಮಚಂದ್ರರೆಡ್ಡಿ ಮಾತನಾಡಿ ಯಾವುದೇ ಅವಕಾಶ ನೀಡಿದರೇ ಸಮರ್ಥವಾಗಿ ನಿರ್ವಹಿಸಿ ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ದು ಪಕ್ಷದ ಸಂಘಟನೆ ಮಾಡುವುದಾಗಿ ಹೇಳಿದರು.<br /> <br /> ಆನೇಕಲ್ ಯೋಜನಾ ಪ್ರಾಧಿಕಾರದ ಸದಸ್ಯ ಎಂ.ಕೆಂಪರಾಜು, ಮುಖಂಡರಾದ ಸುಬ್ಬಾರೆಡ್ಡಿ, ಬಳ್ಳೂರು ಜಿ.ನಾರಾಯಣರೆಡ್ಡಿ, ಗೋಪಾಲರೆಡ್ಡಿ, ಕೇಶವರೆಡ್ಡಿ, ಶಿವರಾಮರೆಡ್ಡಿ, ಓ.ದೇವರಾಜು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್ :</strong> ಆನೇಕಲ್ ವಿಧಾನಸಭಾ ಕ್ಷೇತ್ರದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಪ್ರಚಾರ ಮಾಡುವ ಮೂಲಕ ಬಿಜೆಪಿಯವರ ಸುಳ್ಳು ಅಪಾದನೆಗಳಿಗೆ ತಕ್ಕ ಉತ್ತರ ನೀಡಬೇಕು ಎಂದು ಶಾಸಕ ಬಿ.ಶಿವಣ್ಣ ಹೇಳಿದರು.<br /> <br /> ಅವರು ತಾಲ್ಲೂಕಿನ ಬೊಮ್ಮಸಂದ್ರದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ರೆಡ್ಡಿ ಜನಾಂಗದ ಮುಖಂಡರಿಂದ ಮನವಿ ಪತ್ರ ಸ್ವೀಕರಿಸಿ ಮಾತನಾಡಿದರು.<br /> ಹಲವಾರು ಅಭಿವೃದ್ಧಿ ಕಾರ್ಯಗಳು ನಡೆದಿದ್ದರೂ ಸಹ ಅದನ್ನು ಪ್ರಚಾರ ಮಾಡುವಲ್ಲಿ ಹಾಗೂ ಸಂಘಟನೆಯ ಕೊರತೆ ಪಕ್ಷದಲ್ಲಿದೆ.</p>.<p>ಇದನ್ನು ಸರಿಪಡಿಸುವ ಸಲುವಾಗಿ ಬ್ಲಾಕ್ ಕಾಂಗ್ರೆಸ್ ಹಾಗೂ ಇತರ ಘಟಕಗಳನ್ನು ಸಹ ಪುನರ್ರಚಿಸಿ ಪ್ರಾಮಾಣಿಕ ಕಾರ್ಯಕರ್ತರಿಗೆ ಅವಕಾಶಗಳನ್ನು ಕಲ್ಪಿಸಿಕೊಡಲಾಗುವುದು. ಬನಹಳ್ಳಿಯ ರಾಮಚಂದ್ರರೆಡ್ಡಿ ಅವರನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಮಾಡುವಂತೆ ಮನವಿ ಸಲ್ಲಿಸಲಾಗಿದೆ.</p>.<p>ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಂಸದ ಡಿ.ಕೆ.ಸುರೇಶ್ ಹಾಗೂ ಹೈಕಮಾಂಡ್ನೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.<br /> <br /> ಕಾಂಗ್ರೆಸ್ ಮುಖಂಡ ತಿಮ್ಮರಾಯರೆಡ್ಡಿ ಮಾತನಾಡಿ ಬ್ಲಾಕ್ ಕಾಂಗ್ರೆಸ್ ಸಮಿತಿಯನ್ನು ಪುನರ್ರಚನೆ ಮಾಡಬೇಕು. ಕಾರ್ಯಕರ್ತರೊಂದಿಗೆ ನಿರಂತರ ಸಂಪರ್ಕ ಇರುವಂತಹ ವ್ಯಕ್ತಿಗಳನ್ನು ನೇಮಕ ಮಾಡಿ ಪಕ್ಷದ ವರ್ಚಸ್ಸನ್ನು ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಸಂವಹನ ಕೊರತೆಯನ್ನು ನಿವಾರಿಸಿ ಸಮರ್ಥವಾಗಿ ಕಾರ್ಯಕರ್ತರನ್ನು ಕೊಂಡೊಯ್ಯುವ ಹಾಗೂ ಬಿಜೆಪಿಗೆ ತಕ್ಕ ಉತ್ತರ ನೀಡುವ ಮತ್ತು ರೆಡ್ಡಿ ಜನಾಂಗವನ್ನು ಸಂಘಟಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದರು.<br /> <br /> ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೃಷ್ಣಾರೆಡ್ಡಿ ಮಾತನಾಡಿ ಪಕ್ಷದ ಸಂಘಟನೆಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕು. ಓಲೈಸುವವರಿಂದ ಯಾವುದೇ ಉಪಯೋಗವಿಲ್ಲ. ಪಕ್ಷಕ್ಕಾಗಿ ದುಡಿಯುವ ಪ್ರಾಮಾಣಿಕ ವ್ಯಕ್ತಿಗಳನ್ನು ಗುರುತಿಸಿ ಅವಕಾಶ ನೀಡುವಂತೆ ಒತ್ತಾಯಿಸಿದರು.<br /> <br /> ಪದವೀಧರ ವೇದಿಕೆಯ ಅಧ್ಯಕ್ಷ ಬನಹಳ್ಳಿ ರಾಮಚಂದ್ರರೆಡ್ಡಿ ಮಾತನಾಡಿ ಯಾವುದೇ ಅವಕಾಶ ನೀಡಿದರೇ ಸಮರ್ಥವಾಗಿ ನಿರ್ವಹಿಸಿ ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ದು ಪಕ್ಷದ ಸಂಘಟನೆ ಮಾಡುವುದಾಗಿ ಹೇಳಿದರು.<br /> <br /> ಆನೇಕಲ್ ಯೋಜನಾ ಪ್ರಾಧಿಕಾರದ ಸದಸ್ಯ ಎಂ.ಕೆಂಪರಾಜು, ಮುಖಂಡರಾದ ಸುಬ್ಬಾರೆಡ್ಡಿ, ಬಳ್ಳೂರು ಜಿ.ನಾರಾಯಣರೆಡ್ಡಿ, ಗೋಪಾಲರೆಡ್ಡಿ, ಕೇಶವರೆಡ್ಡಿ, ಶಿವರಾಮರೆಡ್ಡಿ, ಓ.ದೇವರಾಜು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>