ಕಾಂಗ್ರೆಸ್ ಪಕ್ಷದ ಮುಖಂಡರಲ್ಲಿ ಒಡಕು ಇದೆ ಎಂಬ ಬಿಜೆಪಿ ಪಕ್ಷದವರ ಹೇಳಿಕೆಗೆ ಪ್ರತಿಕ್ರಿಯಿದ ಪ್ರಿಯಾಂಕ್ ಖರ್ಗೆ, ‘ಅವರವರು ಅವರ ಮನೆಯನ್ನು ಮೊದಲು ನೋಡಿಕೊಳ್ಳಲಿ. ಇದೇ ಹೊಸಕೋಟೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಶರತ್ ಬಚ್ಚೇಗೌಡ ಸ್ಪರ್ಧೆ ಮಾಡುತ್ತಿದ್ದಾರೆ. ಬಿಜೆಪಿ ತನ್ನ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣ ನೋಡದೆ ಬೇರೆಯವರ ತಟ್ಟೆಯಲ್ಲಿರುವ ನೊಣ ಹುಡುಕುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಪ್ರತಿಯೊಬ್ಬ ಮುಖಂಡರಿಗೂ ಒಂದೊಂದು ಜವಾಬ್ದಾರಿ ನೀಡಿದ್ದು ಎಲ್ಲರೂ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ’ ಎಂದರು. ಬಿಬಿಎಂಪಿ ಸದಸ್ಯ ಉದಯ ಕುಮಾರ್, ತಿರುವರಂಗ ನಾರಾಯಣಸ್ವಾಮಿ, ಎಂ.ಎ.ಕೃಷ್ಣರೆಡ್ಡಿ, ತಾಲ್ಲೂಕು ಪಂಚಾಯಿತಿ ಸದಸ್ಯೆ ವನಜಾ ಪ್ರಭಾಕರ್, ಎಸ್.ನಾರಾಯಣಕೆರೆ ಶ್ರೀರಾಮರೆಡ್ಡಿ ಸೇರಿದಂತೆ ಹಲವು ಗ್ರಾಮಗಳ ಮುಖಂಡರು ಇದ್ದರು.