<p><strong>ದೊಡ್ಡಬಳ್ಳಾಪುರ:</strong> ‘ನಗರದಲ್ಲಿ ಒಳಚರಂಡಿ ಕಾಮಗಾರಿಗಳು ಶೇ ೯೦ ಭಾಗ ಮುಗಿದಿದ್ದು, ಮನೆಗಳ ಸಂಪರ್ಕ ನೀಡುವುದು ಬಾಕಿ ಇದೆ. ಇನ್ನೆರಡು ತಿಂಗಳಲ್ಲಿ ಒಳಚರಂಡಿ ವ್ಯವಸ್ಥೆ ಕಾರ್ಯನಿರ್ವಹಿಸಲಿದೆ’ ಎಂದು ಒಳಚರಂಡಿ ಕಾಮಗಾರಿ ಸಹಾಯಕ ಎಂಜಿನಿಯರ್ ಚಂದ್ರಶೇಖರ್ ತಿಳಿಸಿದರು.<br /> <br /> ನಗರಸಭೆ ವತಿಯಿಂದ ಗಾಣಿಗರಪೇಟೆಯಲ್ಲಿ ಶಾಸಕ ಟಿ.ವೆಂಕಟರಮಣಯ್ಯ ಅಧ್ಯಕ್ಷತೆಯಲ್ಲಿ ನಡೆದ ೨೪ನೇ ವಾರ್ಡ್ ಸಭೆಯಲ್ಲಿ ಅವರು ಮಾತನಾಡಿದರು.<br /> <br /> ಒಳಚರಂಡಿ ಕಾಮಗಾರಿಗಳಲ್ಲಿ ರಸ್ತೆಗಳನ್ನು ಅಗೆದು ಅದನ್ನು ಮತ್ತೆ ಸರಿಪಡಿಸುವುದು ಗುತ್ತಿಗೆದಾರರ ಹೊಣೆಗಾರಿಕೆ. ಆದರೆ ಇದನ್ನು ಗುತ್ತಿಗೆ ಸಂಸ್ಥೆ ಸರಿಯಾಗಿ ನಿರ್ವಹಿಸುತ್ತಿಲ್ಲ ಎಂದು ಸಾರ್ವಜನಿಕರು ದೂರಿದರು.<br /> <br /> ಇದಕ್ಕೆ ಉತ್ತರಿಸಿದ ಅಭಿಯಂತರರು ತಾವು ಅಧಿಕಾರ ವಹಿಸಿಕೊಂಡು ೬ ತಿಂಗಳಾಗಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.ವರ್ಷದಿಂದ ನಮ್ಮ ವಾರ್ಡ್ಗೆ ನೀರು ಬಿಟ್ಟಿಲ್ಲ. ನೀರಿನ ತೆರಿಗೆಯನ್ನು ಮನ್ನಾ ಮಾಡಿ. ಈಗ ನೀರಿನ ಸಮಸ್ಯೆ ತಕ್ಕ ಮಟ್ಟಿಗೆ ಸುಧಾರಿಸಿದೆ. ಆದರೆ ಚರಂಡಿ ಹಾಗೂ ರಸ್ತೆ ದುರವಸ್ಥೆ ಸರಿ ಮಾಡಿಕೊಡಿ ಎಂದು ಸಾರ್ವಜನಿಕರು ದೂರಿದರು.<br /> <br /> ‘ಪೊಲೀಸ್ ಠಾಣೆ ಊರ ಹೊರಗಿರುವುದರಿಂದ ಆ ವೇಳೆಯಲ್ಲಿ ದೂರು ನೀಡಲು ಆಗುವುದಿಲ್ಲ. ಆದ್ದರಿಂದ ನಗರದ ಮುಖ್ಯ ರಸ್ತೆಯಲ್ಲಿರುವ ಪೊಲೀಸ್ ಠಾಣೆಗೆ ಸಿಬ್ಬಂದಿ ನೀಡಿ ಸಾರ್ವಜನಿಕರು ದೂರು ನೀಡಲು ಅನುವು ಮಾಡಿಕೊಡಬೇಕು’ ಎಂದು ನಿವಾಸಿ ರಾಜು ಮನವಿ ಮಾಡಿದರು.<br /> <br /> ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ‘ತಾಲ್ಲೂಕಿನಲ್ಲಿ ಒಳಚರಂಡಿ ಕಾಮಗಾರಿಗಳು ನಡೆಯುತ್ತಿರುವುದರಿಂದ ರಸ್ತೆ ಕೆಲಸಗಳು ವಿಳಂಬವಾಗಿವೆ. ಕೊಳಚೆ ನಿವಾಸಿಗಳಿಗೆ ಹಕ್ಕು ಪತ್ರ ನೀಡುವಂತೆ ಮಂಡಳಿಗೆ ಸಾಕಷ್ಟು ಬಾರಿ ಮನವಿ ಮಾಡಲಾಗಿದ್ದು, ಈ ಬಗ್ಗೆ<br /> ಗಂಭೀರ ಕ್ರಮ ಕೈಗೊಳ್ಳಲಾಗುವುದು. ಅರ್ಹ ಫಲಾನುಭವಿಗಳು ಮಾಸಾಶನ, ಪಿಂಚಣಿ, ಪಡಿತರ ಮೊದಲಾದವುಗಳು ಬಾರದೇ<br /> ಇದ್ದರೆ ಅರ್ಜಿ ಸಲ್ಲಿಸಬಹುದಾಗಿದೆ. ವಾರ್ಡ್ ಸಭೆಯಲ್ಲಿ ಸಾರ್ವಜನಿಕರ ಕುಂದು ಕೊರತೆಗಳಿಗೆ ಪರಿಹಾರ ನೀಡಲಾಗುತ್ತಿದ್ದು, ಗ್ರಾಮ ಸಭೆಗಳ ಯಶಸ್ಸು ಇದಕ್ಕೆ ಸ್ಫೂರ್ತಿಯಾಗಿದೆ. ಆದರೆ ಇದನ್ನು ಅನಗತ್ಯವಾಗಿ ಟೀಕಿಸಿವುದು ಸರಿಯಲ್ಲ’ ಎಂದರು.<br /> <br /> ನಗರಸಭೆ ಪೌರಾಯುಕ್ತ ಡಾ.ಪಿ.ಬಿಳಿಕೆಂಚಪ್ಪ ಮಾತನಾಡಿ, ಸರ್ಕಾರ ಶೌಚಾಲಯಗಳ ನಿರ್ಮಾಣಕ್ಕೆ ಸಾಕಷ್ಟು ಅನುದಾನ ನೀಡಲಾಗುತ್ತಿದೆ. ವಿಶೇಷವಾಗಿ ಎಸ್.ಸಿ, ಎಸ್.ಟಿ ಜನರಿಗೆ ಹಣದ ಕೊರತೆಯಿಲ್ಲ. ನಗರ ಸಭೆಯಲ್ಲಿ ಯಾವುದೇ ಕೆಲಸವಾಗಬೇಕಾದರೆ ಮಧ್ಯವರ್ತಿಗಳನ್ನು ಅವಲಂಬಿಸಬೇಡಿ. ಅಧಿಕಾರಿಗಳು ವಿಳಂಬ ಮಾಡಿದರೆ ನಮಗೆ ದೂರು ನೀಡಿ ಎಂದರು.<br /> <br /> ವಾರ್ಡ್ ಸಭೆಯಲ್ಲಿ ನಗರಸಭಾ ಸದಸ್ಯ ರಾದ ಸುವರ್ಣ, ಜಯಲಕ್ಷ್ಮೀ, ಮಾಜಿ ನಗರ ಸಭಾ ಸದಸ್ಯ ಸೋಮರುದ್ರ ಶರ್ಮ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ:</strong> ‘ನಗರದಲ್ಲಿ ಒಳಚರಂಡಿ ಕಾಮಗಾರಿಗಳು ಶೇ ೯೦ ಭಾಗ ಮುಗಿದಿದ್ದು, ಮನೆಗಳ ಸಂಪರ್ಕ ನೀಡುವುದು ಬಾಕಿ ಇದೆ. ಇನ್ನೆರಡು ತಿಂಗಳಲ್ಲಿ ಒಳಚರಂಡಿ ವ್ಯವಸ್ಥೆ ಕಾರ್ಯನಿರ್ವಹಿಸಲಿದೆ’ ಎಂದು ಒಳಚರಂಡಿ ಕಾಮಗಾರಿ ಸಹಾಯಕ ಎಂಜಿನಿಯರ್ ಚಂದ್ರಶೇಖರ್ ತಿಳಿಸಿದರು.<br /> <br /> ನಗರಸಭೆ ವತಿಯಿಂದ ಗಾಣಿಗರಪೇಟೆಯಲ್ಲಿ ಶಾಸಕ ಟಿ.ವೆಂಕಟರಮಣಯ್ಯ ಅಧ್ಯಕ್ಷತೆಯಲ್ಲಿ ನಡೆದ ೨೪ನೇ ವಾರ್ಡ್ ಸಭೆಯಲ್ಲಿ ಅವರು ಮಾತನಾಡಿದರು.<br /> <br /> ಒಳಚರಂಡಿ ಕಾಮಗಾರಿಗಳಲ್ಲಿ ರಸ್ತೆಗಳನ್ನು ಅಗೆದು ಅದನ್ನು ಮತ್ತೆ ಸರಿಪಡಿಸುವುದು ಗುತ್ತಿಗೆದಾರರ ಹೊಣೆಗಾರಿಕೆ. ಆದರೆ ಇದನ್ನು ಗುತ್ತಿಗೆ ಸಂಸ್ಥೆ ಸರಿಯಾಗಿ ನಿರ್ವಹಿಸುತ್ತಿಲ್ಲ ಎಂದು ಸಾರ್ವಜನಿಕರು ದೂರಿದರು.<br /> <br /> ಇದಕ್ಕೆ ಉತ್ತರಿಸಿದ ಅಭಿಯಂತರರು ತಾವು ಅಧಿಕಾರ ವಹಿಸಿಕೊಂಡು ೬ ತಿಂಗಳಾಗಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.ವರ್ಷದಿಂದ ನಮ್ಮ ವಾರ್ಡ್ಗೆ ನೀರು ಬಿಟ್ಟಿಲ್ಲ. ನೀರಿನ ತೆರಿಗೆಯನ್ನು ಮನ್ನಾ ಮಾಡಿ. ಈಗ ನೀರಿನ ಸಮಸ್ಯೆ ತಕ್ಕ ಮಟ್ಟಿಗೆ ಸುಧಾರಿಸಿದೆ. ಆದರೆ ಚರಂಡಿ ಹಾಗೂ ರಸ್ತೆ ದುರವಸ್ಥೆ ಸರಿ ಮಾಡಿಕೊಡಿ ಎಂದು ಸಾರ್ವಜನಿಕರು ದೂರಿದರು.<br /> <br /> ‘ಪೊಲೀಸ್ ಠಾಣೆ ಊರ ಹೊರಗಿರುವುದರಿಂದ ಆ ವೇಳೆಯಲ್ಲಿ ದೂರು ನೀಡಲು ಆಗುವುದಿಲ್ಲ. ಆದ್ದರಿಂದ ನಗರದ ಮುಖ್ಯ ರಸ್ತೆಯಲ್ಲಿರುವ ಪೊಲೀಸ್ ಠಾಣೆಗೆ ಸಿಬ್ಬಂದಿ ನೀಡಿ ಸಾರ್ವಜನಿಕರು ದೂರು ನೀಡಲು ಅನುವು ಮಾಡಿಕೊಡಬೇಕು’ ಎಂದು ನಿವಾಸಿ ರಾಜು ಮನವಿ ಮಾಡಿದರು.<br /> <br /> ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ‘ತಾಲ್ಲೂಕಿನಲ್ಲಿ ಒಳಚರಂಡಿ ಕಾಮಗಾರಿಗಳು ನಡೆಯುತ್ತಿರುವುದರಿಂದ ರಸ್ತೆ ಕೆಲಸಗಳು ವಿಳಂಬವಾಗಿವೆ. ಕೊಳಚೆ ನಿವಾಸಿಗಳಿಗೆ ಹಕ್ಕು ಪತ್ರ ನೀಡುವಂತೆ ಮಂಡಳಿಗೆ ಸಾಕಷ್ಟು ಬಾರಿ ಮನವಿ ಮಾಡಲಾಗಿದ್ದು, ಈ ಬಗ್ಗೆ<br /> ಗಂಭೀರ ಕ್ರಮ ಕೈಗೊಳ್ಳಲಾಗುವುದು. ಅರ್ಹ ಫಲಾನುಭವಿಗಳು ಮಾಸಾಶನ, ಪಿಂಚಣಿ, ಪಡಿತರ ಮೊದಲಾದವುಗಳು ಬಾರದೇ<br /> ಇದ್ದರೆ ಅರ್ಜಿ ಸಲ್ಲಿಸಬಹುದಾಗಿದೆ. ವಾರ್ಡ್ ಸಭೆಯಲ್ಲಿ ಸಾರ್ವಜನಿಕರ ಕುಂದು ಕೊರತೆಗಳಿಗೆ ಪರಿಹಾರ ನೀಡಲಾಗುತ್ತಿದ್ದು, ಗ್ರಾಮ ಸಭೆಗಳ ಯಶಸ್ಸು ಇದಕ್ಕೆ ಸ್ಫೂರ್ತಿಯಾಗಿದೆ. ಆದರೆ ಇದನ್ನು ಅನಗತ್ಯವಾಗಿ ಟೀಕಿಸಿವುದು ಸರಿಯಲ್ಲ’ ಎಂದರು.<br /> <br /> ನಗರಸಭೆ ಪೌರಾಯುಕ್ತ ಡಾ.ಪಿ.ಬಿಳಿಕೆಂಚಪ್ಪ ಮಾತನಾಡಿ, ಸರ್ಕಾರ ಶೌಚಾಲಯಗಳ ನಿರ್ಮಾಣಕ್ಕೆ ಸಾಕಷ್ಟು ಅನುದಾನ ನೀಡಲಾಗುತ್ತಿದೆ. ವಿಶೇಷವಾಗಿ ಎಸ್.ಸಿ, ಎಸ್.ಟಿ ಜನರಿಗೆ ಹಣದ ಕೊರತೆಯಿಲ್ಲ. ನಗರ ಸಭೆಯಲ್ಲಿ ಯಾವುದೇ ಕೆಲಸವಾಗಬೇಕಾದರೆ ಮಧ್ಯವರ್ತಿಗಳನ್ನು ಅವಲಂಬಿಸಬೇಡಿ. ಅಧಿಕಾರಿಗಳು ವಿಳಂಬ ಮಾಡಿದರೆ ನಮಗೆ ದೂರು ನೀಡಿ ಎಂದರು.<br /> <br /> ವಾರ್ಡ್ ಸಭೆಯಲ್ಲಿ ನಗರಸಭಾ ಸದಸ್ಯ ರಾದ ಸುವರ್ಣ, ಜಯಲಕ್ಷ್ಮೀ, ಮಾಜಿ ನಗರ ಸಭಾ ಸದಸ್ಯ ಸೋಮರುದ್ರ ಶರ್ಮ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>