ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ | ಗ್ರಾಮ ಪಂಚಾಯ್ತಿಗಳಿಗೆ ಆಡಳಿತಾಧಿಕಾರಿ ನೇಮಕ ಬೇಡ: ಯತ್ನಾಳ

Last Updated 16 ಮೇ 2020, 18:00 IST
ಅಕ್ಷರ ಗಾತ್ರ

ವಿಜಯಪುರ: ರಾಜ್ಯದ ಎಲ್ಲ ಗ್ರಾಮ ಪಂಚಾಯ್ತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸದೇ ಈಗಿರುವ ಆಡಳಿತ ಮಂಡಳಿ ಸದಸ್ಯರು ಹಾಗೂ ಅಧ್ಯಕ್ಷರನ್ನೇ ಮುಂದುವರಿಸುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಈ ಸಂಬಂಧ ಯತ್ನಾಳ ಶನಿವಾರ ಪತ್ರ ಬರೆದಿದ್ದಾರೆ.

ಆಡಳಿತಾಧಿಕಾರಿಗಳ ನೇಮಕದಿಂದ ಗ್ರಾಮಗಳ ಅಭಿವೃದ್ಧಿ ಕಾರ್ಯ ಕುಂಠಿತವಾಗುತ್ತದೆ. ಜನಪ್ರತಿನಿಧಿಗಳು ಮತ್ತು ಗ್ರಾಮಸ್ಥರು ತಮ್ಮ ತಮ್ಮ ಗ್ರಾಮಗಳ ಕುಂದುಕೊರತೆಗಳು ಹಾಗೂ ಅಭಿವೃದ್ಧಿ ಬಗ್ಗೆ ಗಮನಹರಿಸಲು ಸಮಯಕ್ಕೆ ಸರಿಯಾಗಿ ಆಡಳಿತಾಧಿಕಾರಿಗಳು ಸಂಪರ್ಕಕ್ಕೆ ಸಿಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ಮುಂದಿನ ಚುನಾವಣೆಯ ದಿನಾಂಕ ನಿಗದಿಯಾಗುವವರಿಗೆ ಈಗಿನ ಆಡಳಿತ ಮಂಡಳಿಯ ಸದಸ್ಯರು ಹಾಗೂ ಅಧ್ಯಕ್ಷರ ಅಧಿಕಾರವನ್ನು ಮುಂದುವರಿಸಬೇಕು ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT