‘ಮುಖ್ಯಮಂತ್ರಿ ಅಮೃತ ನಗರೋತ್ಥಾನ ಯೋಜನೆಯಡಿ ಗುತ್ತಿಗೆದಾರರಿಗೆ ₹300 ಕೋಟಿ ಬಾಕಿ ಬರಬೇಕಿದೆ. ಈ ಸಂಬಂಧ ಸರ್ಕಾರ ಮತ್ತು ಮುಖ್ಯ ಆಯುಕ್ತರ ಜತೆ ಇನ್ನೂ ಮಾತುಕತೆ ನಡೆಸುತ್ತಿದ್ದೇವೆ. ಸಂಘವು 2 ಸಾವಿರಕ್ಕೂ ಹೆಚ್ಚು ಗುತ್ತಿಗೆದಾರರನ್ನು ಹೊಂದಿದ್ದು, ಅದರಲ್ಲಿ 200ರಿಂದ 300 ಗುತ್ತಿಗೆದಾರರು ₹10,000 ಕೋಟಿಗೂ ಹೆಚ್ಚು ಮೊತ್ತದ ಕಾಮಗಾರಿ ಕೈಗೆತ್ತಿಕೊಂಡಿದ್ದಾರೆ. ಮಾತುಕತೆ ವಿಫಲವಾದರೆ ಪ್ರತಿಭಟನೆ ಅನಿವಾರ್ಯ’ ಎಂದು ಸಂಘ ತಿಳಿಸಿದೆ.