<p><strong>ಅಥಣಿ</strong>: ‘ಅಥಣಿ ಕ್ಷೇತ್ರದಲ್ಲಿ ನಮ್ಮ ನಂಬಿಕೆಗೆ ಮೋಸವಾಗಿದೆ. ಮೂಲ ಕಾಂಗ್ರೆಸ್ ಮತದಾರರು ಕೈ ಹಿಡಿದ ಪರಿಣಾಮ ನಮಗೆ ಜಯವಾಗಿದೆ’ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ಪರೋಕ್ಷವಾಗಿ ಶಾಸಕ ಲಕ್ಷ್ಮಣ ಸವದಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಪಟ್ಟಣದಲ್ಲಿ ಗುರುವಾರ ಅಭಿನಂದನಾ ಸಮಾರಂಭದಲ್ಲಿ ಅವರು, ‘ಈ ಬಾರಿ ಚಿಕ್ಕೋಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪರ ಗಾಳಿ ಬೀಸಿತ್ತು. ಆದರೆ ಕೆಲ ಕ್ಷೇತ್ರಗಳಲ್ಲಿ ನಮ್ಮವರಿಂದ ಮೋಸವಾಗಿದೆ. ಕ್ಷೇತ್ರದ ಅನೇಕ ಕಡೆ ಗೆಲುವಿನ ಗುಲಾಲ್ ಹಾರಿದ್ದರೂ ಅಥಣಿಯಲ್ಲಿ ಇದು ಸಾಧ್ಯವಾಗಲಿಲ್ಲ’ ಎಂದರು.</p>.<p>‘ನಮ್ಮ ನಂಬಿಕೆಗೆ ಅಥಣಿಯಲ್ಲಿ ಮೋಸವಾಗಿದೆ. ಇಲ್ಲಿನ ನಾಯಕರು ಪ್ರಚಾರ ಕಾರ್ಯದಲ್ಲಿ ಉತ್ಸಾಹ ತೋರಿಸಲಿಲ್ಲ. ಕೊನೆ ಪಕ್ಷ ನಮಗೆ ತಿಳಿಸಿದ್ದರೆ ನಾವಾದರೂ ಕೆಲಸ ಮಾಡಿ ಹೆಚ್ಚಿನ ಮತ ಪಡೆಯಲು ಶ್ರಮವಹಿಸಿ ಕೆಲಸ ಮಾಡುತ್ತಿದ್ದೆವು’ ಎಂದು ಸವದಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಕಾಗವಾಡದಲ್ಲಿ ಶಾಸಕ ರಾಜು ಕಾಗೆ ಮತದಾನ ಪೂರ್ವದಲ್ಲಿ ಕ್ಷೇತ್ರದ ಸ್ಥಿತಿಗತಿ ಕುರಿತು ತಿಳಿಸಿದ್ದರು. ಸ್ವಲ್ಪ ಕಷ್ಟ ಎದುರಾಗುತ್ತಿದ್ದಂತೆ ನಮಗೂ ಕ್ಷೇತ್ರವನ್ನು ನೋಡಿಕೊಳ್ಳಲು ತಿಳಿಸಿದ್ದರ ಪರಿಣಾಮ ನಾವು ಚುನಾವಣೆಯಲ್ಲಿ ಹೆಚ್ಚಿನ ಕಾರ್ಯ ಮಾಡಲು ಸಹಕಾರಿಯಾಯಿತು‘ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಥಣಿ</strong>: ‘ಅಥಣಿ ಕ್ಷೇತ್ರದಲ್ಲಿ ನಮ್ಮ ನಂಬಿಕೆಗೆ ಮೋಸವಾಗಿದೆ. ಮೂಲ ಕಾಂಗ್ರೆಸ್ ಮತದಾರರು ಕೈ ಹಿಡಿದ ಪರಿಣಾಮ ನಮಗೆ ಜಯವಾಗಿದೆ’ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ಪರೋಕ್ಷವಾಗಿ ಶಾಸಕ ಲಕ್ಷ್ಮಣ ಸವದಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಪಟ್ಟಣದಲ್ಲಿ ಗುರುವಾರ ಅಭಿನಂದನಾ ಸಮಾರಂಭದಲ್ಲಿ ಅವರು, ‘ಈ ಬಾರಿ ಚಿಕ್ಕೋಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪರ ಗಾಳಿ ಬೀಸಿತ್ತು. ಆದರೆ ಕೆಲ ಕ್ಷೇತ್ರಗಳಲ್ಲಿ ನಮ್ಮವರಿಂದ ಮೋಸವಾಗಿದೆ. ಕ್ಷೇತ್ರದ ಅನೇಕ ಕಡೆ ಗೆಲುವಿನ ಗುಲಾಲ್ ಹಾರಿದ್ದರೂ ಅಥಣಿಯಲ್ಲಿ ಇದು ಸಾಧ್ಯವಾಗಲಿಲ್ಲ’ ಎಂದರು.</p>.<p>‘ನಮ್ಮ ನಂಬಿಕೆಗೆ ಅಥಣಿಯಲ್ಲಿ ಮೋಸವಾಗಿದೆ. ಇಲ್ಲಿನ ನಾಯಕರು ಪ್ರಚಾರ ಕಾರ್ಯದಲ್ಲಿ ಉತ್ಸಾಹ ತೋರಿಸಲಿಲ್ಲ. ಕೊನೆ ಪಕ್ಷ ನಮಗೆ ತಿಳಿಸಿದ್ದರೆ ನಾವಾದರೂ ಕೆಲಸ ಮಾಡಿ ಹೆಚ್ಚಿನ ಮತ ಪಡೆಯಲು ಶ್ರಮವಹಿಸಿ ಕೆಲಸ ಮಾಡುತ್ತಿದ್ದೆವು’ ಎಂದು ಸವದಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಕಾಗವಾಡದಲ್ಲಿ ಶಾಸಕ ರಾಜು ಕಾಗೆ ಮತದಾನ ಪೂರ್ವದಲ್ಲಿ ಕ್ಷೇತ್ರದ ಸ್ಥಿತಿಗತಿ ಕುರಿತು ತಿಳಿಸಿದ್ದರು. ಸ್ವಲ್ಪ ಕಷ್ಟ ಎದುರಾಗುತ್ತಿದ್ದಂತೆ ನಮಗೂ ಕ್ಷೇತ್ರವನ್ನು ನೋಡಿಕೊಳ್ಳಲು ತಿಳಿಸಿದ್ದರ ಪರಿಣಾಮ ನಾವು ಚುನಾವಣೆಯಲ್ಲಿ ಹೆಚ್ಚಿನ ಕಾರ್ಯ ಮಾಡಲು ಸಹಕಾರಿಯಾಯಿತು‘ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>