<p><strong>ಬೆಳಗಾವಿ:</strong> ‘ನನ್ನಿಂದ ರೈತರು, ಫಲಾನುಭವಿಗಳು ಮತ್ತುರಾಜ್ಯದ ಜನರ ಮನಸ್ಸಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ’ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಉಮೇಶ ಕತ್ತಿ ಹೇಳಿದರು.</p>.<p>‘ರಾಜೀನಾಮೆ ಕೇಳುವುದಕ್ಕೆ ಡಿ.ಕೆ. ಶಿವಕುಮಾರ್ ಯಾರು? ಅವರಿಗೆ ಏನು ಅಧಿಕಾರವಿದೆ? ಡಿ.ಕೆ. ಶಿವಕುಮಾರ್ ಅವರು ಶವಯಾತ್ರೆ ಮಾಡುವುದಿದ್ದರೆ ಕಾಂಗ್ರೆಸ್ ಶವಯಾತ್ರೆ ಮಾಡಲಿ. ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮನೆವರೆಗೆ ಯಾತ್ರೆ ನಡೆಸಲಿ. ಅವರ ಮನೆ ಮುಂದೆಯೇ ಹೂಳಲಿ’ ಎಂದರು.</p>.<p>‘ಕಾಂಗ್ರೆಸ್ನವರಿಗೆ ಮಾಡುವುದಕ್ಕೆ ಕೆಲಸವಿಲ್ಲ. ಇದೇ ಸಿದ್ದರಾಮಯ್ಯ 4 ಕೆ.ಜಿ. ಅಕ್ಕಿ ಕೊಟ್ಟಿದ್ದನ್ನೂ ನೋಡಿದ್ದೇವೆ. ನಮ್ಮ ಸರ್ಕಾರದಿಂದ ಆಹಾರ ಭದ್ರತೆ ಯೋಜನೆಯಲ್ಲಿ ಪೌಷ್ಟಿಕ ಆಹಾರ ಕೊಡುತ್ತಿದ್ದೇವೆ. ಇದರಿಂದ ಜನರು, ರೈತರು ಹಾಗೂ ಪಡಿತರ ಚೀಟಿದಾರರಿಗೆ ಅನುಕೂಲ ಆಗುತ್ತದೆ’ ಎಂದರು. ‘ನನ್ನ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ನನ್ನಿಂದ ರೈತರು, ಫಲಾನುಭವಿಗಳು ಮತ್ತುರಾಜ್ಯದ ಜನರ ಮನಸ್ಸಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ’ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಉಮೇಶ ಕತ್ತಿ ಹೇಳಿದರು.</p>.<p>‘ರಾಜೀನಾಮೆ ಕೇಳುವುದಕ್ಕೆ ಡಿ.ಕೆ. ಶಿವಕುಮಾರ್ ಯಾರು? ಅವರಿಗೆ ಏನು ಅಧಿಕಾರವಿದೆ? ಡಿ.ಕೆ. ಶಿವಕುಮಾರ್ ಅವರು ಶವಯಾತ್ರೆ ಮಾಡುವುದಿದ್ದರೆ ಕಾಂಗ್ರೆಸ್ ಶವಯಾತ್ರೆ ಮಾಡಲಿ. ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮನೆವರೆಗೆ ಯಾತ್ರೆ ನಡೆಸಲಿ. ಅವರ ಮನೆ ಮುಂದೆಯೇ ಹೂಳಲಿ’ ಎಂದರು.</p>.<p>‘ಕಾಂಗ್ರೆಸ್ನವರಿಗೆ ಮಾಡುವುದಕ್ಕೆ ಕೆಲಸವಿಲ್ಲ. ಇದೇ ಸಿದ್ದರಾಮಯ್ಯ 4 ಕೆ.ಜಿ. ಅಕ್ಕಿ ಕೊಟ್ಟಿದ್ದನ್ನೂ ನೋಡಿದ್ದೇವೆ. ನಮ್ಮ ಸರ್ಕಾರದಿಂದ ಆಹಾರ ಭದ್ರತೆ ಯೋಜನೆಯಲ್ಲಿ ಪೌಷ್ಟಿಕ ಆಹಾರ ಕೊಡುತ್ತಿದ್ದೇವೆ. ಇದರಿಂದ ಜನರು, ರೈತರು ಹಾಗೂ ಪಡಿತರ ಚೀಟಿದಾರರಿಗೆ ಅನುಕೂಲ ಆಗುತ್ತದೆ’ ಎಂದರು. ‘ನನ್ನ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>