<p><strong>ಬೆಳಗಾವಿ</strong>: ‘ಹಿಡಕಲ್ ಜಲಾಶಯದ ಘಟಪ್ರಭಾ ಬಲದಂಡೆ ಕಾಲುವೆಯ (ಕಬ್ಬೂರ ಅಂಚು ಕಾಲುವೆ) ಆಧುನೀಕರಣಕ್ಕಾಗಿ ಈಗಾಗಲೇ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಖಾಸಗಿ ಕಂಪನಿಗೆ ವಹಿಸಲಾಗಿದೆ. ಇದರ ಸರ್ವೆ ಕಾರ್ಯ ಪ್ರಗತಿಯಲ್ಲಿದೆ’ ಎಂದು ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಜೇಶ ಅಮ್ಮಿನಬಾವಿ ತಿಳಿಸಿದ್ದಾರೆ.</p><p>‘ಪ್ರಜಾವಾಣಿ’ಯಲ್ಲಿ ಗುರುವಾರ ಪ್ರಕಟವಾದ ‘ಅಧಿಕಾರಿಗಳ ನಿರ್ಲಕ್ಷ್ಯ: ರೈತರಿಂದ ಹೂಳು ತೆರವು’ ವಿಶೇಷ ವರದಿಗೆ ಅವರು ಪ್ರತಿಕ್ರಿಯಿಸಿದ್ದಾರೆ. ‘45 ಕಿ.ಮೀ ಉದ್ದದ ಕಾಲುವೆಯ ಸ್ಟ್ರಕ್ಚರ್ಗಳು, ಲೈನಿಂಗ್ ಹಾಳಾಗಿದ್ದರಿಂದ ಕೊನೆಯ ಭಾಗದ ರೈತರಿಗೆ ನೀರು ತಲುಪುತ್ತಿಲ್ಲ. ತುರ್ತಾಗಿ ಕಾಲುವೆ ದುರಸ್ತಿಗೆ ₹ 1 ಕೋಟಿಗಾಗಿ ಅನುಮೋದನೆಗೆ ಕಳಿಸಲಾಗಿದೆ’ ಎಂದು ಹೇಳಿದ್ದಾರೆ.</p>.<p>‘ಚಿಕ್ಕೋಡಿ ಭಾಗದಲ್ಲಿರುವ ಐದು ಉಪವಿಭಾಗಗಳಲ್ಲಿ ಕಾಲುವೆ ದುರಸ್ತಿಗೆ ₹5 ಲಕ್ಷ ಮೀಸಲು ಇಡಲಾಗಿದೆ. ಇದು ಸಾಕಾಗುತ್ತಿಲ್ಲ. ಉಳಿದ ₹95 ಲಕ್ಷವನ್ನೂ ಮಂಜೂರು ಮಾಡಬೇಕು ಎಂದು ನೀರಾವರಿ ನಿಗಮದ ಬೆಳಗಾವಿಯ ಮುಖ್ಯ ಎಂಜಿನಿಯರ್ ವರದಿ ಸಲ್ಲಿಸಿದ್ದಾರೆ. ಫಲಾನುಭವಿ ರೈತರಿಗೂ ವಸ್ತುಸ್ಥಿತಿ ತಿಳಿಸಲಾಗಿದೆ. ಡಿಪಿಆರ್ ಸಿದ್ಧವಾದ ಬಳಿಕ ರೈತರ ಸಮಸ್ಯೆ ಬಗೆಹರಿಯಲಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಹಿಡಕಲ್ ಜಲಾಶಯದ ಘಟಪ್ರಭಾ ಬಲದಂಡೆ ಕಾಲುವೆಯ (ಕಬ್ಬೂರ ಅಂಚು ಕಾಲುವೆ) ಆಧುನೀಕರಣಕ್ಕಾಗಿ ಈಗಾಗಲೇ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಖಾಸಗಿ ಕಂಪನಿಗೆ ವಹಿಸಲಾಗಿದೆ. ಇದರ ಸರ್ವೆ ಕಾರ್ಯ ಪ್ರಗತಿಯಲ್ಲಿದೆ’ ಎಂದು ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಜೇಶ ಅಮ್ಮಿನಬಾವಿ ತಿಳಿಸಿದ್ದಾರೆ.</p><p>‘ಪ್ರಜಾವಾಣಿ’ಯಲ್ಲಿ ಗುರುವಾರ ಪ್ರಕಟವಾದ ‘ಅಧಿಕಾರಿಗಳ ನಿರ್ಲಕ್ಷ್ಯ: ರೈತರಿಂದ ಹೂಳು ತೆರವು’ ವಿಶೇಷ ವರದಿಗೆ ಅವರು ಪ್ರತಿಕ್ರಿಯಿಸಿದ್ದಾರೆ. ‘45 ಕಿ.ಮೀ ಉದ್ದದ ಕಾಲುವೆಯ ಸ್ಟ್ರಕ್ಚರ್ಗಳು, ಲೈನಿಂಗ್ ಹಾಳಾಗಿದ್ದರಿಂದ ಕೊನೆಯ ಭಾಗದ ರೈತರಿಗೆ ನೀರು ತಲುಪುತ್ತಿಲ್ಲ. ತುರ್ತಾಗಿ ಕಾಲುವೆ ದುರಸ್ತಿಗೆ ₹ 1 ಕೋಟಿಗಾಗಿ ಅನುಮೋದನೆಗೆ ಕಳಿಸಲಾಗಿದೆ’ ಎಂದು ಹೇಳಿದ್ದಾರೆ.</p>.<p>‘ಚಿಕ್ಕೋಡಿ ಭಾಗದಲ್ಲಿರುವ ಐದು ಉಪವಿಭಾಗಗಳಲ್ಲಿ ಕಾಲುವೆ ದುರಸ್ತಿಗೆ ₹5 ಲಕ್ಷ ಮೀಸಲು ಇಡಲಾಗಿದೆ. ಇದು ಸಾಕಾಗುತ್ತಿಲ್ಲ. ಉಳಿದ ₹95 ಲಕ್ಷವನ್ನೂ ಮಂಜೂರು ಮಾಡಬೇಕು ಎಂದು ನೀರಾವರಿ ನಿಗಮದ ಬೆಳಗಾವಿಯ ಮುಖ್ಯ ಎಂಜಿನಿಯರ್ ವರದಿ ಸಲ್ಲಿಸಿದ್ದಾರೆ. ಫಲಾನುಭವಿ ರೈತರಿಗೂ ವಸ್ತುಸ್ಥಿತಿ ತಿಳಿಸಲಾಗಿದೆ. ಡಿಪಿಆರ್ ಸಿದ್ಧವಾದ ಬಳಿಕ ರೈತರ ಸಮಸ್ಯೆ ಬಗೆಹರಿಯಲಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>