<p><strong>ನಿಪ್ಪಾಣಿ</strong>: ‘ನಿಪ್ಪಾಣಿ ನಗರಸಭೆ ವ್ಯಾಪ್ತಿಯ ನಾಗನೂರ ಗ್ರಾಮದ ರಿ.ಸ.ನಂ.14 ರಲ್ಲಿಯ 10 ಎಕರೆ 20 ಗುಂಟೆ ನಿವೇಶನವನ್ನು ತಾಲ್ಲೂಕು ಕ್ರೀಡಾಂಗಣ ನಿರ್ಮಾಣಕ್ಕಾಗಿ ಗುರುತಿಸಿದ್ದು ಯುವ ಸಬಲೀಕರಣ ಮತ್ತು ಇಲಾಖೆಗೆ ಹಸ್ತಾಂತರಿಸಿಕೊಳ್ಳಲಾಗಿದೆ’ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.</p>.<p>ಬೆಂಗಳೂರಿನಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಅವರು ಮುಖ್ಯಮಂತ್ರಿ ಅವರಿಗೆ ‘ನಿಪ್ಪಾಣಿ ತಾಲ್ಲೂಕಿನಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡಲು 2 ವರ್ಷಗಳ ಹಿಂದೆಯೇ ಜಾಗವು ಮಂಜೂರಾಗಿದ್ದರೂ ಕೂಡ ಇಲ್ಲಿಯವರೆಗೆ ನಿರ್ಮಾಣ ಮಾಡದೇ ಇರುವುದರಿಂದ ತೊಂದರೆ ಆಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ? ಇಲ್ಲಿಯವರೆಗೆ ಕಾರಣಗಳೇನು. ಬಂದಿದ್ದಲ್ಲಿ ಕ್ರೀಡಾಂಗಣವನ್ನು ಮಾಡದಿರಲು ಕಾರಣಗಳೇನು?’ ಎಂದು ಪ್ರಶ್ನಿಸಿದ್ದರು.</p>.<p>ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಸ್ತುತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಮುಂದುವರೆದ ಹಾಗೂ ಅಪೂರ್ಣ ಕಾಮಗಾರಿಗಳನ್ನು ಪೂರ್ಣಗೊಳಿಸಲು ಆದ್ಯತೆ ನೀಡಲಾಗುತ್ತಿದೆ. ಅನುದಾನ ಲಭ್ಯತೆ ಮೇರೆಗೆ ನಿಪ್ಪಾಣಿ ತಾಲ್ಲೂಕು ಕ್ರೀಡಾಂಗಣವನ್ನು ಹಂತ ಹಂತವಾಗಿ ಅಭಿವೃದ್ದಿಪಡಿಸಲು ಪರಿಗಣಿಸಲಾಗುವುದು ಸಿದ್ದರಾಮಯ್ಯ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಿಪ್ಪಾಣಿ</strong>: ‘ನಿಪ್ಪಾಣಿ ನಗರಸಭೆ ವ್ಯಾಪ್ತಿಯ ನಾಗನೂರ ಗ್ರಾಮದ ರಿ.ಸ.ನಂ.14 ರಲ್ಲಿಯ 10 ಎಕರೆ 20 ಗುಂಟೆ ನಿವೇಶನವನ್ನು ತಾಲ್ಲೂಕು ಕ್ರೀಡಾಂಗಣ ನಿರ್ಮಾಣಕ್ಕಾಗಿ ಗುರುತಿಸಿದ್ದು ಯುವ ಸಬಲೀಕರಣ ಮತ್ತು ಇಲಾಖೆಗೆ ಹಸ್ತಾಂತರಿಸಿಕೊಳ್ಳಲಾಗಿದೆ’ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.</p>.<p>ಬೆಂಗಳೂರಿನಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಅವರು ಮುಖ್ಯಮಂತ್ರಿ ಅವರಿಗೆ ‘ನಿಪ್ಪಾಣಿ ತಾಲ್ಲೂಕಿನಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡಲು 2 ವರ್ಷಗಳ ಹಿಂದೆಯೇ ಜಾಗವು ಮಂಜೂರಾಗಿದ್ದರೂ ಕೂಡ ಇಲ್ಲಿಯವರೆಗೆ ನಿರ್ಮಾಣ ಮಾಡದೇ ಇರುವುದರಿಂದ ತೊಂದರೆ ಆಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ? ಇಲ್ಲಿಯವರೆಗೆ ಕಾರಣಗಳೇನು. ಬಂದಿದ್ದಲ್ಲಿ ಕ್ರೀಡಾಂಗಣವನ್ನು ಮಾಡದಿರಲು ಕಾರಣಗಳೇನು?’ ಎಂದು ಪ್ರಶ್ನಿಸಿದ್ದರು.</p>.<p>ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಸ್ತುತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಮುಂದುವರೆದ ಹಾಗೂ ಅಪೂರ್ಣ ಕಾಮಗಾರಿಗಳನ್ನು ಪೂರ್ಣಗೊಳಿಸಲು ಆದ್ಯತೆ ನೀಡಲಾಗುತ್ತಿದೆ. ಅನುದಾನ ಲಭ್ಯತೆ ಮೇರೆಗೆ ನಿಪ್ಪಾಣಿ ತಾಲ್ಲೂಕು ಕ್ರೀಡಾಂಗಣವನ್ನು ಹಂತ ಹಂತವಾಗಿ ಅಭಿವೃದ್ದಿಪಡಿಸಲು ಪರಿಗಣಿಸಲಾಗುವುದು ಸಿದ್ದರಾಮಯ್ಯ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>