ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಮಶಾನದಲ್ಲಿ ಆರುತ್ತಿಲ್ಲ ಚಿತೆ!

Last Updated 5 ಮೇ 2021, 14:40 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಸದಾಶಿವ ನಗರ ಸ್ಮಶಾನದಲ್ಲಿ ಚಿತೆ ಆರುತ್ತಲೇ ಇಲ್ಲ. ಅಲ್ಲಿನ ಆವರಣವು ಕೋವಿಡ್ 2ನೇ ಅಲೆಯ ತೀವ್ರತೆಗೆ ನಿತ್ಯವೂ ಸಾಕ್ಷಿ ಆಗುತ್ತಲೇ ಇದೆ. ಬುಧವಾರ ಸಂಜೆವರೆಗೆ ಅಲ್ಲಿ ವಿವಿಧ ಸಮಸ್ಯೆಗಳಿಂದ ನಿಧನರಾದ 11 ಮಂದಿಯ ಮೃತಹದೇಹಗಳ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಐವರು ಕೋವಿಡ್‌ನಿಂದ ಮೃತರಾದವರು ಎನ್ನುವ ಮಾಹಿತಿಯನ್ನು ಅಧಿಕಾರಿಗಳು ನೀಡಿದ್ದಾರೆ.

ಉಸಿರಾಟದ ಸಮಸ್ಯೆಯಿಂದ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಐಸಿಯು, ವೆಂಟಿಲೇಟರ್, ಆಮ್ಲಜನಕ ಹಾಸಿಗೆ ಸಿಗದೆ ಮರಣ ಪ್ರಮಾಣ ಹೆಚ್ಚುತ್ತಿದೆ. ರ‍್ಯಾಪಿಡ್‌, ಆರ್‌ಟಿಪಿಸಿಆರ್‌ ಪರೀಕ್ಷೆ ಮಾಡಿಸಿ ಕೋವಿಡ್ ದೃಢಪಟ್ಟವರು ಮೃತರಾದಾಗ ಅದನ್ನು ಕೋವಿಡ್‌ನಿಂದ ಸಾವು ಎಂದು ಪರಿಗಣಿಸಲಾಗುತ್ತದೆ. ಸ್ಕ್ಯಾನ್ ಮಾಡಿಸಿದಾಗ ಕೋವಿಡ್ ದೃಢಪಟ್ಟು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾದರೆ ಅದನ್ನು ಕೋವಿಡ್ ಸಾವು ಎಂದು ಪರಿಗಣಿಸಲಾಗುವುದಿಲ್ಲ ಎನ್ನುವುದು ಅಧಿಕಾರಿಗಳ ಹೇಳಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT