<p><strong>ಬೆಳಗಾವಿ: </strong>ಐಡಿಯಾ ಅಭಿವೃದ್ಧಿ, ಮೌಲ್ಯಮಾಪನ ಮತ್ತು ಪ್ರಯೋಗಾಲಯ ಸ್ಥಾಪಿಸಲು ಇಲ್ಲಿನ ಕೆಎಲ್ಇ ಸಂಸ್ಥೆಯ ಡಾ.ಎಂ.ಎಸ್. ಶೇಷಗಿರಿ ಎಂಜಿನಿಯರಿಂಗ್ ಕಾಲೇಜಿಗೆ ₹ 1.10 ಕೋಟಿ ಅನುದಾನವನ್ನು ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್ತು (ಎಐಸಿಟಿಇ) ಮಂಜೂರು ಮಾಡಿದೆ.</p>.<p>‘ರಾಷ್ಟ್ರ ಮಟ್ಟದ ಅತ್ಯಂತ ಕಠಿಣ ಆಯ್ಕೆ ಪ್ರಕ್ರಿಯೆಯಲ್ಲಿ 210 ಎಂಜಿನಿಯರಿಂಗ್ ಕಾಲೇಜುಗಳಲ್ಲಿ 49 ಕಾಲೇಜುಗಳಿಗೆ ಮಾತ್ರ ಇಷ್ಟು ದೊಡ್ಡ ಪ್ರಮಾಣದ ಅನುದಾನ ಲಭಿಸಿದೆ. ಇದು ನಮ್ಮ ಕಾಲೇಜು ನಿರ್ವಹಿಸುವ ಗುಣಮಟ್ಟದ ಮಾನದಂಡಗಳನ್ನು ಸಾಬೀತುಪಡಿಸಿದೆ’ ಎಂದು ಪ್ರಾಚಾರ್ಯ ಡಾ.ಬಸವರಾಜ ಕಟಗೇರಿ ತಿಳಿಸಿದ್ದಾರೆ.</p>.<p>‘ಈ ಭಾಗದ ಎಲ್ಲ ವಿದ್ಯಾರ್ಥಿಗಳಿಗೆ ವಿಜ್ಞಾನ, ತಂತ್ರಜ್ಞಾನಗಳು, ಎಂಜಿನಿಯರಿಂಗ್ ಮತ್ತು ಗಣಿತ (ಎಸ್ಟಿಇಎಂ) ಮೂಲ ಅಂಶಗಳ ಕಡೆಗೆ ಉತ್ತೇಜಿಸುವುದು ಹಾಗೂ ಮಾಡುತ್ತಾ ಕಲಿಯುವುದಕ್ಕೆ ಪ್ರೋತ್ಸಾಹಿಸುವುದು ಪ್ರಯೋಗಾಲಯದ ಉದ್ದೇಶವಾಗಿದೆ. ಬಹುಶಿಸ್ತೀಯ ವಿಷಯಗಳಲ್ಲಿ ಸಂಶೋಧನೆ ಮಾಡುವ ವಿದ್ಯಾರ್ಥಿಗಳಿಗೆ ಇದರಿಂದ ಬಹಳ ಅನುಕೂಲವಾಗಲಿದೆ’ ಎಂದು ಮಾಹಿತಿ ನೀಡಿದ್ದಾರೆ.</p>.<p>ಪ್ರಯೋಗಾಲಯ ಮಂಜೂರಾಗಲು ಶ್ರಮಿಸಿದ ಪ್ರಾಚಾರ್ಯ, ಡಾ.ಅಮಿತ್, ಡಾ.ಅರುಣ್ ಹಾಗೂ ಬೋಧಕರನ್ನು ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಮತ್ತು ಸ್ಥಾನಿಕ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಎಸ್.ಸಿ. ಮೆಟಗುಡ್ ಅಭಿನಂದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಐಡಿಯಾ ಅಭಿವೃದ್ಧಿ, ಮೌಲ್ಯಮಾಪನ ಮತ್ತು ಪ್ರಯೋಗಾಲಯ ಸ್ಥಾಪಿಸಲು ಇಲ್ಲಿನ ಕೆಎಲ್ಇ ಸಂಸ್ಥೆಯ ಡಾ.ಎಂ.ಎಸ್. ಶೇಷಗಿರಿ ಎಂಜಿನಿಯರಿಂಗ್ ಕಾಲೇಜಿಗೆ ₹ 1.10 ಕೋಟಿ ಅನುದಾನವನ್ನು ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್ತು (ಎಐಸಿಟಿಇ) ಮಂಜೂರು ಮಾಡಿದೆ.</p>.<p>‘ರಾಷ್ಟ್ರ ಮಟ್ಟದ ಅತ್ಯಂತ ಕಠಿಣ ಆಯ್ಕೆ ಪ್ರಕ್ರಿಯೆಯಲ್ಲಿ 210 ಎಂಜಿನಿಯರಿಂಗ್ ಕಾಲೇಜುಗಳಲ್ಲಿ 49 ಕಾಲೇಜುಗಳಿಗೆ ಮಾತ್ರ ಇಷ್ಟು ದೊಡ್ಡ ಪ್ರಮಾಣದ ಅನುದಾನ ಲಭಿಸಿದೆ. ಇದು ನಮ್ಮ ಕಾಲೇಜು ನಿರ್ವಹಿಸುವ ಗುಣಮಟ್ಟದ ಮಾನದಂಡಗಳನ್ನು ಸಾಬೀತುಪಡಿಸಿದೆ’ ಎಂದು ಪ್ರಾಚಾರ್ಯ ಡಾ.ಬಸವರಾಜ ಕಟಗೇರಿ ತಿಳಿಸಿದ್ದಾರೆ.</p>.<p>‘ಈ ಭಾಗದ ಎಲ್ಲ ವಿದ್ಯಾರ್ಥಿಗಳಿಗೆ ವಿಜ್ಞಾನ, ತಂತ್ರಜ್ಞಾನಗಳು, ಎಂಜಿನಿಯರಿಂಗ್ ಮತ್ತು ಗಣಿತ (ಎಸ್ಟಿಇಎಂ) ಮೂಲ ಅಂಶಗಳ ಕಡೆಗೆ ಉತ್ತೇಜಿಸುವುದು ಹಾಗೂ ಮಾಡುತ್ತಾ ಕಲಿಯುವುದಕ್ಕೆ ಪ್ರೋತ್ಸಾಹಿಸುವುದು ಪ್ರಯೋಗಾಲಯದ ಉದ್ದೇಶವಾಗಿದೆ. ಬಹುಶಿಸ್ತೀಯ ವಿಷಯಗಳಲ್ಲಿ ಸಂಶೋಧನೆ ಮಾಡುವ ವಿದ್ಯಾರ್ಥಿಗಳಿಗೆ ಇದರಿಂದ ಬಹಳ ಅನುಕೂಲವಾಗಲಿದೆ’ ಎಂದು ಮಾಹಿತಿ ನೀಡಿದ್ದಾರೆ.</p>.<p>ಪ್ರಯೋಗಾಲಯ ಮಂಜೂರಾಗಲು ಶ್ರಮಿಸಿದ ಪ್ರಾಚಾರ್ಯ, ಡಾ.ಅಮಿತ್, ಡಾ.ಅರುಣ್ ಹಾಗೂ ಬೋಧಕರನ್ನು ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಮತ್ತು ಸ್ಥಾನಿಕ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಎಸ್.ಸಿ. ಮೆಟಗುಡ್ ಅಭಿನಂದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>