‘ದೋಷಪೂರಿತ ಸೈಲೆನ್ಸರ್ ಅಳವಡಿಸಿ ಕರ್ಕಶ ಶಬ್ದ ಮಾಡುತ್ತಾ ಸಂಚರಿಸುವ ಮೂಲಕ ಸಾರ್ವಜನಿಕರಿಗೆ ಹಾಗೂ ಮಕ್ಕಳಿಗೆ ತೊಂದರೆ ಉಂಟು ಮಾಡುತ್ತಿರುವ ಬಗ್ಗೆ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ 12 ಸವಾರರ ಮೇಲೆ ಪ್ರಕರಣ ದಾಖಲಿಸಲಾಗಿದೆ. ದ್ವಿಚಕ್ರವಾಹನಗಳನ್ನು ಆರ್ಟಿಒ ವಶಕ್ಕೆ ಕೊಡಲಾಗಿವುದು. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕಠಿಣ ಕಾನೂನಿನ ಕ್ರಮ ಕೈಗೊಳ್ಳಲಾಗುವುದು. ಕಾರ್ಯಾಚರಣೆ ಮುಂದುವರಿಸಲಾಗುವುದು’ ಎಂದು ಡಿಸಿಪಿ ಪಿ.ವಿ. ಸ್ನೇಹಾ ತಿಳಿಸಿದ್ದಾರೆ.