ಇಡೀ ಗ್ರಾಮವನ್ನು ನಿಷೇಧಿತ ವಲಯ ಎಂದು ಘೋಷಿಸಲಾಗಿದೆ. ತಾಲ್ಲೂಕಿನ ಭೀಮಗಡ ವನ್ಯಧಾಮ ವ್ಯಾಪ್ತಿಯಲ್ಲಿರುವ ಈ ಗ್ರಾಮದಲ್ಲಿ ಏ.5 ಮತ್ತು 6ರಂದು ಜರುಗಿದ ಗ್ರಾಮದೇವಿ ಜಾತ್ರೆಯಲ್ಲಿ ಭಾಗವಹಿಸಿದ್ದ ಬಹುತೇಕರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಇವರೆಲ್ಲರೂ ಮಹಾರಾಷ್ಟ್ರದ ವಿವಿಧ ನಗರಪ್ರದೇಶಗಳಿಗೆ ಉದ್ಯೋಗಸ್ಥರಾಗಿದ್ದು ಜಾತ್ರೆಯಲ್ಲಿ ಭಾಗವಹಿಸಲು ಗ್ರಾಮಕ್ಕೆ ಮರಳಿದ್ದರು.